ಸಂಗ್ರಹ ಚಿತ್ರ 
ರಾಜ್ಯ

4 ದಿನಂದಿಂದ ಸತತ ಐಟಿ ದಾಳಿ, ಇನ್ನೂ ಕೆಲವರಿಗೆ ನಡುಕ ಶುರು..!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸತತ ನಾಲ್ಕನೇ ದಿನವೂ ಆದಾಯ ತೆರಿಗೆ ಅಧಿಕಾರಿಗಳ ದಾಳಿ ಮುಂದುವರೆದಿದ್ದು, ಬೆಳಗ್ಗೆ 9 ಗಂಟೆ ನಂತರ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸತತ ನಾಲ್ಕನೇ ದಿನವೂ ಆದಾಯ ತೆರಿಗೆ ಅಧಿಕಾರಿಗಳ ದಾಳಿ ಮುಂದುವರೆದಿದ್ದು, ಬೆಳಗ್ಗೆ 9 ಗಂಟೆ ನಂತರ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪನವರ ಆಪ್ತ ಉಮೇಶ್, ಚಾರ್ಟೆಡ್ ಅಕೌಂಟೆಂಟ್‍ಗಳು ಹಾಗೂ ಕಾಂಟ್ರಾಕ್ಟರ್‍ಗಳ ಮೇಲೆ ನಡೆದಿದ್ದ ದಾಳಿಯಲ್ಲಿ ಕೋಟ್ಯಂತರ ರೂ.ಅವ್ಯವಹಾರ ಪತ್ತೆಯಾಗಿದೆ ಎನ್ನಲಾಗುತ್ತಿದ್ದು, ಇದಕ ಮುಂದುವರೆದ ದಾಳಿ ಇದಾಗಿದೆ ಎನ್ನಲಾಗುತ್ತಿದೆ. 

ಹಲವು ಗುತ್ತಿಗೆದಾರರ ಮನೆ ಮತ್ತು ಕಚೇರಿಗಳಲ್ಲಿ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸುದ್ದು, ಸೋಮಶೇಖರ್, ಗುತ್ತಿಗೆದಾರ ಉಪ್ಪಾರ್ ಸೇರಿದಂತೆ ಹಲವರ ಮನೆ, ಕಚೇರಿಗಳಲ್ಲಿ ಪರಿಶೀಲನೆ ಕಾರ್ಯ ನಡೆಯುತ್ತಿದೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಉಪ್ಪಾರ್ ಕಚೇರಿ, ಬಸವೇಶ್ವರನಗರದಲ್ಲಿರುವ ಸೋಮಶೇಖರ್ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಈ ಹಿಂದೆ ತಡರಾತ್ರಿವರೆಗೂ ತನಿಖೆ ನಡೆಸಿ ತೆರಳಿದ್ದ ಐಟಿ ಅಧಿಕಾರಿಗಳು, ಇಂದು ಇನ್ನೋವಾ ಕಾರಿನಲ್ಲಿ ಆಗಮಿಸಿ ದಾಖಲೆಗಳ ಶೋಧ ಕಾರ್ಯದಲ್ಲಿ ತೊಡಗಿದ್ದಾರೆ. ಇಂದು ಸಂಜೆವರೆಗೂ ದಾಖಲೆಗಳ ಲೆಕ್ಕಾಚಾರ ಮತ್ತು ಪರಿಶೀಲನೆ ನಡೆಸುತ್ತಾರೆ ಎನ್ನಲಾಗಿದೆ.

ಇನ್ನು ರಾಹುಲ್ ಎಂಟರ್ಪ್ರೈಸ್​ನಲ್ಲಿ ಶೋಧ ಅಂತ್ಯವಾಗಿದೆ. ಸತತ ಮೂರು ದಿನಗಳ ಕಾಲ ಐಟಿ ದಾಳಿ ನಡೆದಿತ್ತು. ಸಹಕಾರನಗರದ ರಾಹುಲ್ ಎಂಟರ್ಪ್ರೈಸಸ್ ಕಚೇರಿಯಲ್ಲಿ ನಿರಂತರ ಮೂರು ದಿನ ಕಡತಗಳ ಪರಿಶೀಲನೆ ನಡೆದಿತ್ತು. ಸಿಮೆಂಟ್ ಮತ್ತು ಸ್ಟೀಲ್ ಡೀಲ್ ಸಂಬಂಧಿತವಾಗಿ ಶೋಧ ನಡೆಸಲಾಗಿತ್ತು. ವಿವಿಧ ಕಾಂಟ್ರಾಕ್ಟರ್​ಗಳಿಗೆ ಸಂಬಂಧಿಸಿ ದಾಖಲೆಗಳನ್ನು ಪರಿಶೀಲನೆ ಮಾಡಲಾಗಿತ್ತು. ರಾಹುಲ್ ಎಂಟರ್ಪ್ರೈಸ್ ಹಲವು ಕಾಂಟ್ರಾಕ್ಟರ್​ಗಳಿಗೆ ಮೆಟಿರೀಯಲ್ ಸಪ್ಲೈ ಮಾಡಿತ್ತು. ಇದಕ್ಕೆ ಸಂಬಂಧಿಸಿ ಸತತ 60 ಗಂಟೆಗಳಿಗೂ ಅಧಿಕ ಸಮಯ ದಾಳಿ ನಡೆಸಿದ್ದಾರೆ. ನಿನ್ನೆ ರಾತ್ರಿ ದಾಳಿ ಮುಕ್ತಾಯಗೊಳಿಸಿ ಐಟಿ ಅಧಿಕಾರಿಗಳು ನಿರ್ಗಮಿಸಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

SCROLL FOR NEXT