ಸಂಗ್ರಹ ಚಿತ್ರ 
ರಾಜ್ಯ

4 ದಿನಂದಿಂದ ಸತತ ಐಟಿ ದಾಳಿ, ಇನ್ನೂ ಕೆಲವರಿಗೆ ನಡುಕ ಶುರು..!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸತತ ನಾಲ್ಕನೇ ದಿನವೂ ಆದಾಯ ತೆರಿಗೆ ಅಧಿಕಾರಿಗಳ ದಾಳಿ ಮುಂದುವರೆದಿದ್ದು, ಬೆಳಗ್ಗೆ 9 ಗಂಟೆ ನಂತರ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸತತ ನಾಲ್ಕನೇ ದಿನವೂ ಆದಾಯ ತೆರಿಗೆ ಅಧಿಕಾರಿಗಳ ದಾಳಿ ಮುಂದುವರೆದಿದ್ದು, ಬೆಳಗ್ಗೆ 9 ಗಂಟೆ ನಂತರ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪನವರ ಆಪ್ತ ಉಮೇಶ್, ಚಾರ್ಟೆಡ್ ಅಕೌಂಟೆಂಟ್‍ಗಳು ಹಾಗೂ ಕಾಂಟ್ರಾಕ್ಟರ್‍ಗಳ ಮೇಲೆ ನಡೆದಿದ್ದ ದಾಳಿಯಲ್ಲಿ ಕೋಟ್ಯಂತರ ರೂ.ಅವ್ಯವಹಾರ ಪತ್ತೆಯಾಗಿದೆ ಎನ್ನಲಾಗುತ್ತಿದ್ದು, ಇದಕ ಮುಂದುವರೆದ ದಾಳಿ ಇದಾಗಿದೆ ಎನ್ನಲಾಗುತ್ತಿದೆ. 

ಹಲವು ಗುತ್ತಿಗೆದಾರರ ಮನೆ ಮತ್ತು ಕಚೇರಿಗಳಲ್ಲಿ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸುದ್ದು, ಸೋಮಶೇಖರ್, ಗುತ್ತಿಗೆದಾರ ಉಪ್ಪಾರ್ ಸೇರಿದಂತೆ ಹಲವರ ಮನೆ, ಕಚೇರಿಗಳಲ್ಲಿ ಪರಿಶೀಲನೆ ಕಾರ್ಯ ನಡೆಯುತ್ತಿದೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಉಪ್ಪಾರ್ ಕಚೇರಿ, ಬಸವೇಶ್ವರನಗರದಲ್ಲಿರುವ ಸೋಮಶೇಖರ್ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಈ ಹಿಂದೆ ತಡರಾತ್ರಿವರೆಗೂ ತನಿಖೆ ನಡೆಸಿ ತೆರಳಿದ್ದ ಐಟಿ ಅಧಿಕಾರಿಗಳು, ಇಂದು ಇನ್ನೋವಾ ಕಾರಿನಲ್ಲಿ ಆಗಮಿಸಿ ದಾಖಲೆಗಳ ಶೋಧ ಕಾರ್ಯದಲ್ಲಿ ತೊಡಗಿದ್ದಾರೆ. ಇಂದು ಸಂಜೆವರೆಗೂ ದಾಖಲೆಗಳ ಲೆಕ್ಕಾಚಾರ ಮತ್ತು ಪರಿಶೀಲನೆ ನಡೆಸುತ್ತಾರೆ ಎನ್ನಲಾಗಿದೆ.

ಇನ್ನು ರಾಹುಲ್ ಎಂಟರ್ಪ್ರೈಸ್​ನಲ್ಲಿ ಶೋಧ ಅಂತ್ಯವಾಗಿದೆ. ಸತತ ಮೂರು ದಿನಗಳ ಕಾಲ ಐಟಿ ದಾಳಿ ನಡೆದಿತ್ತು. ಸಹಕಾರನಗರದ ರಾಹುಲ್ ಎಂಟರ್ಪ್ರೈಸಸ್ ಕಚೇರಿಯಲ್ಲಿ ನಿರಂತರ ಮೂರು ದಿನ ಕಡತಗಳ ಪರಿಶೀಲನೆ ನಡೆದಿತ್ತು. ಸಿಮೆಂಟ್ ಮತ್ತು ಸ್ಟೀಲ್ ಡೀಲ್ ಸಂಬಂಧಿತವಾಗಿ ಶೋಧ ನಡೆಸಲಾಗಿತ್ತು. ವಿವಿಧ ಕಾಂಟ್ರಾಕ್ಟರ್​ಗಳಿಗೆ ಸಂಬಂಧಿಸಿ ದಾಖಲೆಗಳನ್ನು ಪರಿಶೀಲನೆ ಮಾಡಲಾಗಿತ್ತು. ರಾಹುಲ್ ಎಂಟರ್ಪ್ರೈಸ್ ಹಲವು ಕಾಂಟ್ರಾಕ್ಟರ್​ಗಳಿಗೆ ಮೆಟಿರೀಯಲ್ ಸಪ್ಲೈ ಮಾಡಿತ್ತು. ಇದಕ್ಕೆ ಸಂಬಂಧಿಸಿ ಸತತ 60 ಗಂಟೆಗಳಿಗೂ ಅಧಿಕ ಸಮಯ ದಾಳಿ ನಡೆಸಿದ್ದಾರೆ. ನಿನ್ನೆ ರಾತ್ರಿ ದಾಳಿ ಮುಕ್ತಾಯಗೊಳಿಸಿ ಐಟಿ ಅಧಿಕಾರಿಗಳು ನಿರ್ಗಮಿಸಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

SCROLL FOR NEXT