ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ 
ರಾಜ್ಯ

ಕರ್ನಾಟಕ ಹೈಕೋರ್ಟ್ ನ ನೂತನ ಮುಖ್ಯ ನ್ಯಾಯಮೂರ್ತಿ ಜಸ್ಟೀಸ್ ರಿತು ರಾಜ್ ಅವಸ್ಥಿ 

ಅಲಹಾಬಾದ್ ಹೈಕೋರ್ಟ್ ನ ಹಿರಿಯ ನ್ಯಾಯಾಧೀಶ, ಜಸ್ಟೀಸ್ ರಿತು ರಾಜ್ ಅವಸ್ತಿ ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ.

ಬೆಂಗಳೂರು: ಅಲಹಾಬಾದ್ ಹೈಕೋರ್ಟ್ ನ ಹಿರಿಯ ನ್ಯಾಯಾಧೀಶ, ಜಸ್ಟೀಸ್ ರಿತು ರಾಜ್ ಅವಸ್ಥಿ  ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ.

ರಾಷ್ಟ್ರಪತಿಗಳು ಅಂಕಿತ ಹಾಕಿದ ನಂತರ ಕಾನೂನು ಮತ್ತು ನ್ಯಾಯ ಸಚಿವಾಲಯ ನಿನ್ನೆ ಅಧಿಸೂಚನೆ ಹೊರಡಿಸಿದೆ. 1960ರ ಜುಲೈ 3ರಂದು ಜನಿಸಿದ ಜಸ್ಟೀಸ್ ಅವಸ್ಥಿ ಕಾನೂನು ಪದವಿಯನ್ನು 1986ರಲ್ಲಿ ಲಕ್ನೊ ವಿಶ್ವವಿದ್ಯಾಲಯದಿಂದ ಮುಗಿಸಿದ್ದರು. 1987ರಲ್ಲಿ ಅಡ್ವೊಕೇಟ್ ಆಗಿ ದಾಖಲಾತಿ ಮಾಡಿಕೊಂಡ ನಂತರ ಸಿವಿಲ್, ಸರ್ವಿಸ್ ಮತ್ತು ಶಿಕ್ಷಣ ವಿಷಯಗಳಲ್ಲಿ ಅಲಹಾಬಾದ್ ಹೈಕೋರ್ಟ್ ನ ಲಕ್ನೊ ಪೀಠದ ಮೂಲಕ ವ್ಯಾಜ್ಯಗಳ ಅಭ್ಯಾಸ ನಡೆಸುತ್ತಿದ್ದರು. 

2009ರಲ್ಲಿ ಹೆಚ್ಚುವರಿ ನ್ಯಾಯಾಧೀಶರಾಗಿ ಬಡ್ತಿ ಹೊಂದುವ ಮೊದಲು ಲಕ್ನೊದಲ್ಲಿ ಸಹಾಯಕ ಸಾಲಿಸಿಟರ್ ಜನರಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. 2010ರಲ್ಲಿ ಶಾಶ್ವತ ನ್ಯಾಯಾಧೀಶರಾದರು. ಕರ್ನಾಟಕ ಹೈಕೋರ್ಟ್ ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿದ್ದ ಜಸ್ಟೀಸ್ ಸತೀಶ್ ಚಂದ್ರ ತೆಲಂಗಾಣ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿದ್ದಾರೆ.

ಕರ್ನಾಟಕ ಹೈಕೋರ್ಟ್‌ನ ಮತ್ತೊಬ್ಬ ಹಿರಿಯ ನ್ಯಾಯಾಧೀಶರಾದ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರನ್ನು ಗುಜರಾತ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸಲಾಗಿದೆ. ಇದರೊಂದಿಗೆ, ಕರ್ನಾಟಕ ಹೈಕೋರ್ಟ್‌ನ ಇಬ್ಬರು ಪ್ರಮುಖ ನ್ಯಾಯಾಧೀಶರನ್ನು ಮುಖ್ಯ ನ್ಯಾಯಮೂರ್ತಿಗಳಾಗಿ ಉನ್ನತೀಕರಿಸಲಾಗಿದೆ.

ಅವರ ಸುಮಾರು 10 ತಿಂಗಳ ಅಧಿಕಾರಾವಧಿಯಲ್ಲಿ, ನ್ಯಾಯಮೂರ್ತಿ ಶರ್ಮಾ ನೇತೃತ್ವದ ವಿಭಾಗೀಯ ಪೀಠವು ಕೆಲವು ಪ್ರಮುಖ ಆದೇಶಗಳನ್ನು ನೀಡಿತು. ಬಂಜರು ಸರ್ಕಾರಿ ಭೂಮಿಯಲ್ಲಿ ಮರಗಳನ್ನು ನೆಡುವುದು ಅಪರಾಧವಲ್ಲ ಎಂದು ತೀರ್ಪು ನೀಡಿದ್ದು, 'ಕಾವೇರಿ ಕರೆ' ಯೋಜನೆಯ ವಿರುದ್ಧ ಸಲ್ಲಿಸಲಾದ ಪಿಐಎಲ್ ಅನ್ನು ವಜಾಗೊಳಿಸಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Watch| Traffic Fine ಗೆ ಶೇ.50 ರಷ್ಟು ರಿಯಾಯಿತಿ; ವಂಚಕರಿಂದ ಮೋಸಹೋದ ಟೆಕ್ಕಿ!; Dharmasthala Case: ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ SIT ದಾಳಿ; ಮೊಬೈಲ್ ವಶಕ್ಕೆ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT