ರಾಜ್ಯ

ಮೈಸೂರು: ಕೆಎಸ್ಆರ್​ಟಿಸಿ ಬಸ್ ಹಾಗೂ ಆಟೋ ಮುಖಾಮುಖಿ ಡಿಕ್ಕಿ; ಮದುಮಗ ಸೇರಿ ಮೂವರ ದುರ್ಮರಣ

Vishwanath S

ಮೈಸೂರು: ಮೈಸೂರು-ಟಿ.ನರಸೀಪುರ ಹೆದ್ದಾರಿಯಲ್ಲಿ ಕೆಎಸ್ಆರ್​ಟಿಸಿ ಬಸ್ ಹಾಗೂ ಆಟೋ ಮುಖಾಮುಖಿ ಡಿಕ್ಕಿಯಾಗಿ ಮದುಮಗ ಸೇರಿದಂತೆ ಮೂವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ.

ಮೃತರನ್ನು 30 ಇಮ್ರಾನ್ ಪಾಷಾ, 28 ವರ್ಷದ ಯಾಸ್ಮಿನ್ ಮತ್ತು ಎರಡು ವರ್ಷದ ಬಾಲಕ ಅಫ್ನಾನ್ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

ಅಕ್ಟೋಬರ್ 24ರಂದು ಇಮ್ರಾನ್ ಪಾಷಾಗೆ ಮದುವೆ ನಿಶ್ಚಯವಾಗಿತ್ತು. ಬಟ್ಟೆ ಖರೀದಿಗೆ ಕುಟುಂಬ ಸಮೇತ ಮೈಸೂರಿಗೆ ಬರುತ್ತಿದ್ದಾಗ ವರಕೋಡು ಸಮೀಪದ ಹಾಸ್ಟೆಲ್ ಬಳಿ ತಿರುವಿನಲ್ಲಿ ಬಸ್ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಆಟೋ ಸಂಪೂರ್ಣ ಜಖಂಗೊಂಡಿದೆ. ವರುಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದುರ್ಘಟನೆ ನಡೆದಿದೆ.

SCROLL FOR NEXT