ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಒಂದೇ ದಿನ 6 ಅಪ್ರಾಪ್ತ ಬಾಲಕರು ಸೇರಿ 7 ಮಂದಿ ನಾಪತ್ತೆ!

ಒಂದೇ ದಿನ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 6 ಮಂದಿ ಅಪ್ರಾಪ್ತ ಬಾಲಕರು ಸೇರಿದಂತೆ 7 ಮಂದಿ ನಾಪತ್ತೆಯಾಗಿರುವ ಘಟನೆ ನಗರದಲ್ಲಿ ಭಾನುವಾರ ನಡೆದಿದೆ. 

ಬೆಂಗಳೂರು: ಒಂದೇ ದಿನ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 6 ಮಂದಿ ಅಪ್ರಾಪ್ತ ಬಾಲಕರು ಸೇರಿದಂತೆ 7 ಮಂದಿ ನಾಪತ್ತೆಯಾಗಿರುವ ಘಟನೆ ನಗರದಲ್ಲಿ ಭಾನುವಾರ ನಡೆದಿದೆ. 

ಮೊದಲ ಪ್ರಕರಣ ಬಾಗಲಗುಂಟೆಯಲ್ಲಿ 15 ವರ್ಷದ ಮೂವರು ಮಕ್ಕಳು ಶನಿವಾರ ನಾಪತ್ತೆಯಾಗಿದ್ದಾರೆ. ಇವರು ಶೇಷಾದ್ರಿ ಲೇಔಟ್ ಮತ್ತು ಹೆಸರಘಟ್ಟ ಮುಖ್ಯರಸ್ತೆ ಹಾಗೂ ಸೌಂದರ್ಯ ಲೇಔಟ್ ನಿವಾಸಿಗಳಾಗಿದ್ದಾರೆಂದು ತಿಳಿದುಬಂದಿದೆ. 

ಮೂವರು ಖಾಸಗಿ ಶಾಲೆಯಲ್ಲಿ ಎಸ್ಎಸ್ಎಲ್'ಸಿ ಓದುತ್ತಿದ್ದು, ಸ್ನೇಹಿತರಾಗಿದ್ದಾರೆ. ಶನಿವಾರ ಬೆಳಿಗ್ಗೆ ಮೂವರು ಮಾರ್ನಿಂಗ್ ವಾಕ್ ಎಂದು ಹೋಗಿದ್ದು, ಮರಳಿ ಮನೆಗೆ ಬಂದಿಲ್ಲ. ಸಂಜೆವರೆಗೂ ಮೂವರು ಮಕ್ಕಳಿಗಾಗಿ ಪೋಷಕರು ಹುಡುಕಾಡಿದ್ದಾರೆ. ಆದರೆ, ಮಕ್ಕಳು ಸಿಕ್ಕಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಈ ನಡುವೆ ಮೂವರು ಬಾಲಕ ಮನೆಯಲ್ಲಿ ಪತ್ರ ಬರೆದಿಟ್ಟಿರುವುದು ಕಂಡು ಬಂದಿದೆ. ಕಬ್ಬಡ್ಡಿ ಆಟದಲ್ಲಿ ಹೆಸರು ಮಾಡಬೇಕಿತ್ತು, ಹೆಸರು ಹಾಗೂ ಹಣ ಗಳಿಸಿದ ಬಳಿಕವೇ ಮನೆಗೆ ಮರಳುವುದಾಗಿ ಓರ್ವ ಬಾಲಕ ಹೇಳಿದ್ದಾನೆ. ಮತ್ತೊಬ್ಬ ಬಾಲಕ ತನಗೆ ಓದಿನಲ್ಲಿ ಆಸಕ್ತಿಯಿಲ್ಲ, ಕ್ರೀಡೆಯಲ್ಲಿ ಏನಾದರೂ ಸಾಧನೆ ಮಾಡುತ್ತೇನೆಂದು ಹೇಳಿದ್ದಾರೆ. ಮತ್ತೊಬ್ಬ ಬಾಲಕ ತನಗಾಗಿ ಹುಡುಕಾಡದಂತೆ ಹೇಳಿದ್ದಾನೆ. 

ಈ ಸಂಬಂಧ ಇದೀಗ ಬಾಗಲಗುಂಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಬಾಲಕರಿಗಾಗಿ ಹುಡುಕಾಟ ಆರಂಭಿಸಿದ್ದಾರೆ. 

ಮತ್ತೊಂದು ಪ್ರಕರಣ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಬ್ಬರು ಬಾಲಕರು, ಓರ್ವ ಬಾಲಕಿ ಹಾಗೂ ಬಿಸಿಎ ವ್ಯಾಸಾಂಗ ಮಾಡುತ್ತಿರುವ 21 ವರ್ಷದ ಯುವತಿ ನಾಪತ್ತೆಯಾಗಿದ್ದಾಳೆ. ಎಳ್ಲರು ಸೋಲದೇವನಹಳ್ಳಿಯಲ್ಲಿರುವ ಎಜಿಬಿ ಲೇಔಟ್ ನಲ್ಲಿರುವ ಅಪಾರ್ಟ್'ಮೆಂಟ್ ನಲ್ಲಿ ವಾಸವಿದ್ದರು ಎಂದು ತಿಳಿದುಬಂದಿದೆ. 

ಈ ಮಧ್ಯೆ ಮನೆಗಳಲ್ಲಿ ಚೀಟಿಯೊಂದು ಪತ್ತೆಯಾಗಿದ್ದು, ಚೀಟಿಯಲ್ಲಿ ಚಪ್ಪಲಿ, ಬ್ರಷ್, ಟೂತ್ ಪೇಸ್ಟ್, ನೀರಿನ ಬಾಟಲ್, ನಗದು ಮತ್ತು ಕ್ರೀಡಾ ವಸ್ತುಗಳು ಹಾಗೂ ಇತರೆ ವಸ್ತುಗಳನ್ನು ತಮ್ಮ ಜೊತೆ ಕೊಂಡೊಯ್ಯಬೇಕಂದು ಹೇಳಿರುವುದು  ಕಂಡು ಬಂದಿದೆ. 

ಇದೀಗ ಪೊಲೀಸರು ಎಲ್ಲಾ ಪೊಲೀಸ್ ಠಾಣೆಗೂ ಪ್ರಕರಣ ಸಂಬಂಧ ಮಾಹಿತಿ ರವಾನಿಸಿದ್ದು, ನಾಪತ್ತೆಯಾಗಿರುವ ಮಕ್ಕಳ ಪತ್ತೆಗೆ ಹುಡುಕಾಟ ಆರಂಭಿಸಿದ್ದಾರೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT