ಸಂಗ್ರಹ ಚಿತ್ರ 
ರಾಜ್ಯ

ಕೋವಿಡ್-19 ಲಸಿಕೆ: ಚೆನ್ನಯ್ಯನಕೋಟೆ ಆದಿವಾಸಿಗಳ ಮನವೊಲಿಸುವಲ್ಲಿ ಆರೋಗ್ಯ ಕಾರ್ಯಕರ್ತರು ಯಶಸ್ವಿ

ಚೆನ್ನಯ್ಯನಕೋಟೆಯಲ್ಲಿ ನೆಲೆಯೂರಿರುವ ಆದಿವಾಸಿಗಳ ಸ್ಥಳಕ್ಕೆ ಪ್ರತೀನಿತ್ಯ ಭೇಟಿ ನೀಡುತ್ತಿರುವ ಆರೋಗ್ಯ ಕಾರ್ಯಕರ್ತರು, ಅವರ ಮನವೊಲಿಸಿ ಕೋವಿಡ್ ಲಸಿಕೆ ಕೊಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇದರ ಪರಿಣಾಮ ಜಿಲ್ಲೆಯು ಈವರೆಗೂ ಶೇ.95ರಷ್ಟು ಗುರಿ ಸಾಧಿಸಿದಂತಾಗಿದೆ.

ಮಡಿಕೇರಿ: ಚೆನ್ನಯ್ಯನಕೋಟೆಯಲ್ಲಿ ನೆಲೆಯೂರಿರುವ ಆದಿವಾಸಿಗಳ ಸ್ಥಳಕ್ಕೆ ಪ್ರತೀನಿತ್ಯ ಭೇಟಿ ನೀಡುತ್ತಿರುವ ಆರೋಗ್ಯ ಕಾರ್ಯಕರ್ತರು, ಅವರ ಮನವೊಲಿಸಿ ಕೋವಿಡ್ ಲಸಿಕೆ ಕೊಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇದರ ಪರಿಣಾಮ ಜಿಲ್ಲೆಯು ಈವರೆಗೂ ಶೇ.95ರಷ್ಟು ಗುರಿ ಸಾಧಿಸಿದಂತಾಗಿದೆ. 

ಕಳೆದ ಒಂದು ತಿಂಗಳ ಸತತ ಪ್ರಯತ್ನದಿಂದಾಗಿ ಶೇ.5ರಷ್ಟು ಆದಿವಾಸಿಗಳನ್ನು ಆರೋಗ್ಯ ಕಾರ್ಯಕರ್ತರು ಪತ್ತೆ ಹಚ್ಚಿದ್ದು, ಅವರಿಗೆ ಲಸಿಕೆ ನೀಡುವ ಕೆಲಸ ಮಾಡಿದ್ದಾರೆ. 

ಈ ನಡುವೆ ಆಶಾ ಕಾರ್ಯಕರ್ತೆಯೊಬ್ಬರು ಆದಿವಾಸಿ ಮಹಿಳೆಗೆ ಲಸಿಕೆ ಕುರಿತು ವಿವರಿಸಿದ್ದು, ಬಳಿಕ ಹಾಡಿಯಿಂದ ಹೊರ ಬಂದ ಆದಿವಾಸಿಗಳು ಲಸಿಕೆ ಪಡೆದುಕೊಂಡ ಬೆಳವಣಿಗೆ ಕಂಡು ಬಂದಿತು. 

ಮತ್ತೊಂದೆಡೆ ಪೊಲೀಸರು ಲಸಿಕೆ ಪಡೆದುಕೊಳ್ಳುವಂತೆ ವ್ಯಕ್ತಿಯೊಬ್ಬರಿಗೆ ತಿಳಿಸಿದ್ದು, ಇದಕ್ಕೆ ಹೆದರಿದ ವ್ಯಕ್ತಿ ಅರಣ್ಯದೊಳಗೆ ಹೋಗಿ ಬಚ್ಚಿಕೊಂಡ ಘಟನೆ ನಡೆಯಿತು. 

ಚೆನ್ನಯ್ಯನಕೋಟೆಯಲ್ಲಿ 4-5 ಬುಡಕಟ್ಟು ನೆಲೆಗಳಿವೆ. ನಿವಾಸಿಗಳ ಮನವೊಲಿಸಲು ಮತ್ತು ಅವರ ಮನಸ್ಸು ಗೆಲಲ್ಲಲು ನಾವು ಈ ನೆಲೆಗಳಿಗೆ ಐದು ಬಾರಿ ಭೇಟಿ ನೀಡಿದ್ದೇವೆ ಎಂದು ವೈದ್ಯಾಧಿಕಾರಿ ಡಾ.ಎಸ್. ಶಿವಪ್ಪ ಗೋಟ್ಯಾಲ್ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT