ಬೆಂಗಳೂರು: ನಗರದಲ್ಲಿ ಮನೆಗಳ್ಳತನ ಮಾಡುತ್ತಿದ್ದ ಆರೋಪಿಯೋರ್ವನನ್ನು ವಿಜಯ ನಗರ ಪೊಲೀಸರು ಬಂಧಿಸಿದ್ದು, ಆತನಿಂದ ಅಪಾರ ಪ್ರಮಾಣದ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿ ಶ್ರೀನಿವಾಸ್ ನಿಂದ 10 ಲಕ್ಷ ರೂ. ಮೌಲ್ಯದ 260 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ ಎಂದು ನಗರ ಪಶ್ಚಿಮ ವಿಭಾಗದ ಡಿಸಿಪಿ ಡಾ. ಸಂಜೀವ್ ಪಾಟೀಲ್ ತಿಳಿಸಿದ್ದಾರೆ.
ಗೃಹಿಣಿಯೊಬ್ಬರು ಮನೆ ಲಾಕ್ ಮಾಡಿ ಬೀಗವನ್ನು ಹೂವಿನ ಕುಂಡದಲ್ಲಿಟ್ಟು ಯೋಗ ತರಬೇತಿಗೆ ಹೋಗುತ್ತಿದ್ದರು. ಹೀಗಾಗಿ ಮನೆಗಳ್ಳನಕ್ಕೆ ಬಂದ ಆರೋಪಿಗೆ ಸುಲಭವಾಗಿ ಮನೆಯ ಬೀಗ ಸಿಕ್ಕಿದ್ದು, ಸೆ. 10ರಂದು ಮನೆಯಲ್ಲಿದ್ದ ಲಕ್ಷಾಂತರ ಮೌಲ್ಯದ ನಗದು ಹಾಗೂ ಚಿನ್ನಾಭರಣ ಕದ್ದು ಪರಾರಿಯಾಗಿದ್ದನು.
ಇದನ್ನೂ ಓದಿ: ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಮೂವರು ಮಕ್ಕಳು ಸೇರಿ ನಾಲ್ವರು ಮಂಗಳೂರಿನಲ್ಲಿ ಪತ್ತೆ; ಪ್ರಕರಣ ಸುಖಾಂತ್ಯ
ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆ ಮಾಲೀಕೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.