ಕಟ್ಟಾ ಸುಬ್ರಹ್ಮಣ್ಯ ನಾಯ್ಡು 
ರಾಜ್ಯ

ಸೈಟ್ ಕೊಡಿಸುವುದಾಗಿ ವಂಚನೆ: ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ವಿರುದ್ಧ ಎಫ್ಐಆರ್ ದಾಖಲು

ರಾಜ್ಯದಲ್ಲಿ ಬಿಜೆಪಿ ನೊದಲ ಬಾರಿಗೆ ಸರ್ಕಾರ ರಚಿಸಿದಾಗ ಕ್ಯಾಬಿನೆಟ್ ದರ್ಜೆ ಸಚಿವರಾಗಿದ್ದ ಕಟ್ಟಾ ಸುಬ್ರಮಣ್ಯ ನಾಯ್ಡು ಅವರ ವಿರುದ್ಧ ವಂಚನೆ ಆರೋಪದಲ್ಲಿ ಎಫ್ಐಆರ್ ದಾಖಲಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ನೊದಲ ಬಾರಿಗೆ ಸರ್ಕಾರ ರಚಿಸಿದಾಗ ಕ್ಯಾಬಿನೆಟ್ ದರ್ಜೆ ಸಚಿವರಾಗಿದ್ದ ಕಟ್ಟಾ ಸುಬ್ರಮಣ್ಯ ನಾಯ್ಡು ಅವರ ವಿರುದ್ಧ ವಂಚನೆ ಆರೋಪದಲ್ಲಿ ಎಫ್ಐಆರ್ ದಾಖಲಾಗಿದೆ.

ಸೈಟ್ ಕೊಡಿಸುವುದಾಗಿ ಹಣ ಪಡೆದು, ವಂಚಿಸಿದ್ದಾರೆಂದು ಕಟ್ಟಾ ವಿರುದ್ಧ ಆರೋಪಿಸಲಾಗಿದ್ದು, 2004ರಲ್ಲಿ ಶಾಸಕರಾಗಿದ್ದಂತ ಸಂದರ್ಭದಲ್ಲಿ ವಂಚಿಸಿರುವ ಆರೋಪವಿದಾಗಿದೆ. ಕಟ್ಟಾ ಸುಬ್ರಮಣ್ಯ ನಾಯ್ಡು ಅವರು ಇಂಡ್ ಸಿಂಡ್ ಎಂಬ ಕಂಪನಿಯಿಂದ ಸೈಟ್ ಕೊಡಿಸುವುದಾಗಿ 2.85 ಕೋಟಿ ಹಣ ಪಡೆದಿದ್ದರು. ನಗದು ಹಾಗೂ ಚೆಕ್ ಮೂಲಕ 2.85 ಕೋಟಿ ಹಣ ಪಡೆದಿದ್ದರು. ಈ ಬಗ್ಗೆ ಹಲವು ಬಾರಿ ವಿಚಾರಿಸಿದ್ದರು. ಆದರೆ ಅವರು ಸರಿಯಾಗಿ ಪ್ರತಿಕ್ರಿಯಿಸಿರಲಿಲ್ಲ ಎಂದು ದೂರಲಾಗಿದೆ.

ಈ ಹಿನ್ನಲೆಯಲ್ಲಿ ಇಂಡ್ ಸಿಂಡ್ ಡೆಲವಪರ್ಸ್ ಪ್ರೈವೇಟ್ ಲಿಮಿಟೆಡ್ ನ ನಿರ್ದೇಶಕರು ಕೋರ್ಟ್ ಮೊರೆ ಹೋಗಿದ್ದು, ಸೈಟ್ ಮತ್ತು ಫ್ಲಾಟ್ ಕೊಡಿಸುವುದಾಗಿ ವಂಚನೆ ಮಾಡಿದ್ದಾರೆಂದು ಆರೋಪಿಸಿದ್ದಾರೆ.

ಈ ಪ್ರಕರಣವನ್ನು ವಿಚಾರಣೆ ನಡೆಸಿದ್ದ 4ನೇ ಎಸಿಎಂಎಂ ಕೋರ್ಟ್ ಕಟ್ಟಾ ಸುಬ್ರಮಣ್ಯ ನಾಯ್ಡು ವಿರುದ್ಧ ಪ್ರಕರಣ ದಾಖಲಿಸುವಂತೆ ಸೂಚಿಸಿತ್ತು. ಈ ಹಿನ್ನಲೆಯಲ್ಲಿ ಇದೀಗ ಎಫ್ಐಆರ್ ದಾಖಲಾಗಿದೆ. ನಗರದ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT