ಕಟ್ಟಾ ಸುಬ್ರಹ್ಮಣ್ಯ ನಾಯ್ಡು 
ರಾಜ್ಯ

ಸೈಟ್ ಕೊಡಿಸುವುದಾಗಿ ವಂಚನೆ: ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ವಿರುದ್ಧ ಎಫ್ಐಆರ್ ದಾಖಲು

ರಾಜ್ಯದಲ್ಲಿ ಬಿಜೆಪಿ ನೊದಲ ಬಾರಿಗೆ ಸರ್ಕಾರ ರಚಿಸಿದಾಗ ಕ್ಯಾಬಿನೆಟ್ ದರ್ಜೆ ಸಚಿವರಾಗಿದ್ದ ಕಟ್ಟಾ ಸುಬ್ರಮಣ್ಯ ನಾಯ್ಡು ಅವರ ವಿರುದ್ಧ ವಂಚನೆ ಆರೋಪದಲ್ಲಿ ಎಫ್ಐಆರ್ ದಾಖಲಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ನೊದಲ ಬಾರಿಗೆ ಸರ್ಕಾರ ರಚಿಸಿದಾಗ ಕ್ಯಾಬಿನೆಟ್ ದರ್ಜೆ ಸಚಿವರಾಗಿದ್ದ ಕಟ್ಟಾ ಸುಬ್ರಮಣ್ಯ ನಾಯ್ಡು ಅವರ ವಿರುದ್ಧ ವಂಚನೆ ಆರೋಪದಲ್ಲಿ ಎಫ್ಐಆರ್ ದಾಖಲಾಗಿದೆ.

ಸೈಟ್ ಕೊಡಿಸುವುದಾಗಿ ಹಣ ಪಡೆದು, ವಂಚಿಸಿದ್ದಾರೆಂದು ಕಟ್ಟಾ ವಿರುದ್ಧ ಆರೋಪಿಸಲಾಗಿದ್ದು, 2004ರಲ್ಲಿ ಶಾಸಕರಾಗಿದ್ದಂತ ಸಂದರ್ಭದಲ್ಲಿ ವಂಚಿಸಿರುವ ಆರೋಪವಿದಾಗಿದೆ. ಕಟ್ಟಾ ಸುಬ್ರಮಣ್ಯ ನಾಯ್ಡು ಅವರು ಇಂಡ್ ಸಿಂಡ್ ಎಂಬ ಕಂಪನಿಯಿಂದ ಸೈಟ್ ಕೊಡಿಸುವುದಾಗಿ 2.85 ಕೋಟಿ ಹಣ ಪಡೆದಿದ್ದರು. ನಗದು ಹಾಗೂ ಚೆಕ್ ಮೂಲಕ 2.85 ಕೋಟಿ ಹಣ ಪಡೆದಿದ್ದರು. ಈ ಬಗ್ಗೆ ಹಲವು ಬಾರಿ ವಿಚಾರಿಸಿದ್ದರು. ಆದರೆ ಅವರು ಸರಿಯಾಗಿ ಪ್ರತಿಕ್ರಿಯಿಸಿರಲಿಲ್ಲ ಎಂದು ದೂರಲಾಗಿದೆ.

ಈ ಹಿನ್ನಲೆಯಲ್ಲಿ ಇಂಡ್ ಸಿಂಡ್ ಡೆಲವಪರ್ಸ್ ಪ್ರೈವೇಟ್ ಲಿಮಿಟೆಡ್ ನ ನಿರ್ದೇಶಕರು ಕೋರ್ಟ್ ಮೊರೆ ಹೋಗಿದ್ದು, ಸೈಟ್ ಮತ್ತು ಫ್ಲಾಟ್ ಕೊಡಿಸುವುದಾಗಿ ವಂಚನೆ ಮಾಡಿದ್ದಾರೆಂದು ಆರೋಪಿಸಿದ್ದಾರೆ.

ಈ ಪ್ರಕರಣವನ್ನು ವಿಚಾರಣೆ ನಡೆಸಿದ್ದ 4ನೇ ಎಸಿಎಂಎಂ ಕೋರ್ಟ್ ಕಟ್ಟಾ ಸುಬ್ರಮಣ್ಯ ನಾಯ್ಡು ವಿರುದ್ಧ ಪ್ರಕರಣ ದಾಖಲಿಸುವಂತೆ ಸೂಚಿಸಿತ್ತು. ಈ ಹಿನ್ನಲೆಯಲ್ಲಿ ಇದೀಗ ಎಫ್ಐಆರ್ ದಾಖಲಾಗಿದೆ. ನಗರದ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT