ರಾಜ್ಯ

ದಕ್ಷಿಣ ಕನ್ನಡ: ಬಸ್ ಹರಿದು ತಾಯಿ-ಮಗ ಸಾವು

Srinivasamurthy VN

ಮಂಗಳೂರು: ಬಸ್ ಹರಿದು ತಾಯಿ-ಮಗ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಬಳಿ ಸಂಭವಿಸಿದೆ.

ಮೃತರನ್ನು ಬೆಳ್ತಂಗಡಿ ತಾಲೂಕಿನ ಶಿರ್ಲಾಲು ನಿವಾಸಿ ಶಾಹಿದಾ (25), ಶಾಹೀಲ್ (1) ಎಂದು ಗುರುತಿಸಲಾಗಿದೆ. ಗೇರುಕಟ್ಟೆಯ ತಾಯಿ ಮನೆಗೆ ಬಂದಿದ್ದ ಶಾಹಿದಾ, ಮಂಗಳವಾರ ಬೆಳಗ್ಗೆ ಪುತ್ತೂರಿನ ಆಸ್ಪತ್ರೆಗೆ ತೆರಳುತ್ತಿದ್ದರು. ಈ ವೇಳೆ ಬಸ್ ನಿಲ್ದಾಣದ ಕಡೆಯಿಂದ ವೇಗವಾಗಿ ಬಂದ ಕೆಸ್ಆರ್​ಟಿಸಿ ಬಸ್ಸೊಂದು ಏಕಾಏಕೀ ತಾಯಿ-ಮಗನ ಮೇಲೆ ಹರಿದಿದೆ. ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಉಪ್ಪಿನಗಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

SCROLL FOR NEXT