ಸಂಗ್ರಹ ಚಿತ್ರ 
ರಾಜ್ಯ

ಕ್ಷುಲ್ಲಕ ವಿಚಾರಕ್ಕೆ ಮಾತಿನ ಚಕಮಕಿ: ಸ್ವಂತ ಮಗನನ್ನೇ ಇರಿದು ಕೊಂದ ಕುಡುಕ ತಂದೆ!

ಕ್ಷುಲ್ಲಕೆ ವಿಚಾರಕ್ಕೆ ಮಾತಿನ ಚಕಮಕಿ ನಡೆಸಿ ಕೋಪಗೊಂಡು ಕುಡುಕ ತಂದೆಯೊಬ್ಬ ತನ್ನ ಸ್ವಂತ ಮಗನನ್ನೇ ಇರಿದು ಹತ್ಯೆ ಮಾಡಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕೆಹೆಚ್'ಬಿ ಕಾಲೋನಿಯಲ್ಲಿ ಸೋಮವಾರ ನಡೆದಿದೆ.

ಬೆಂಗಳೂರು: ಕ್ಷುಲ್ಲಕೆ ವಿಚಾರಕ್ಕೆ ಮಾತಿನ ಚಕಮಕಿ ನಡೆಸಿ ಕೋಪಗೊಂಡು ಕುಡುಕ ತಂದೆಯೊಬ್ಬ ತನ್ನ ಸ್ವಂತ ಮಗನನ್ನೇ ಇರಿದು ಹತ್ಯೆ ಮಾಡಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕೆಹೆಚ್'ಬಿ ಕಾಲೋನಿಯಲ್ಲಿ ಸೋಮವಾರ ನಡೆದಿದೆ. 

ಸಂತೋಷ್ ಹತ್ಯೆಯಾದ ಯುವಕನಾಗಿದ್ದಾನೆ. ಆರೋಪಿಯಾದ ಗುರುರಾಜ್ (58) ಚಾಲನಾ ತರಬೇತಿ ಶಾಲೆಯ ಮಾಲೀಕನಾಗಿದ್ದಾನೆ. 

ಆರೋಪಿ ಗುರುರಾಜ್ ಪ್ರತಿದಿನ ರಾತ್ರಿ ಮನೆಯಲ್ಲಿ ಕುಡಿದು ಬಂದು ಗಲಾಟೆ ಮಾಡುತ್ತಿದ್ದ. ಈ ವಿಚಾರಕ್ಕೆ ನಿನ್ನೆ ಅಪ್ಪ ಹಾಗೂ ಮಗನ ನಡುವೆ ಮಧ್ಯಾಹ್ನ 2.30ರ ಸುಮಾರಿಗೆ ಮಾತಿನ ಚಕಮಕಿ ನಡೆದಿದೆ. ಈ ಹಂತದಲ್ಲಿ ಕೆರಳಿದ ಆರೋಪಿ ಗುರುರಾಜ್ ಮಗನ ಎದೆಗೆ ಚಾಕುವಿನಿಂದ ಇರಿದಿದ್ದಾನೆ.

ಕೂಡಲೇ ಗಾಯಾಳುವನ್ನು ಆತನ ಸೋದರ ಮಾವ ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಚಿಕಿತ್ಸೆ ಫಲಿಸದೆ ಸಂತೋಷ್ ಕೊನೆಯುಸಿರೆಳೆದಿದ್ದಾನೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್