ಸಿಸಿ ಪಾಟೀಲ್ 
ರಾಜ್ಯ

ತುರ್ತಾಗಿ ರಾಷ್ಟ್ರೀಯ ಹೆದ್ದಾರಿಗಳ ದುರಸ್ತಿ ಕಾರ್ಯ ಮುಗಿಸಿ: ಅಧಿಕಾರಿಗಳಿಗೆ ಸಚಿವ ಸಿಸಿ ಪಾಟೀಲ್ ಸೂಚನೆ

ರಾಜ್ಯದ ಕೆಲವು ಕಡೆಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳು ಹದಗೆಟ್ಟಿದ್ದು, ಅವುಗಳನ್ನು ಕಾಲಮಿತಿಯೊಳಗೆ ತುರ್ತಾಗಿ ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳಬೇಕು ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ರಾಷ್ಟ್ರೀಯ ಹೆದ್ದಾರಿ ನಿರ್ವಹಣಾಧಿಕಾರಿಗಳಿಗೆ ಸೂಚಿಸಿದ್ದಾರೆ. 

ಬೆಂಗಳೂರು: ರಾಜ್ಯದ ಕೆಲವು ಕಡೆಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳು ಹದಗೆಟ್ಟಿದ್ದು, ಅವುಗಳನ್ನು ಕಾಲಮಿತಿಯೊಳಗೆ ತುರ್ತಾಗಿ ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳಬೇಕು ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ರಾಷ್ಟ್ರೀಯ ಹೆದ್ದಾರಿ ನಿರ್ವಹಣಾಧಿಕಾರಿಗಳಿಗೆ ಸೂಚಿಸಿದ್ದಾರೆ. 

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಭಾರಿ ಮಳೆಯಿಂದಾಗಿ ಪುಣೆ– ಬೆಂಗಳೂರು ರಾಷ್ಟ್ರೀಯ  ಹೆದ್ದಾರಿಯೂ ಸೇರಿ ಹಲವು ಹೆದ್ದಾರಿಗಳಲ್ಲಿ ಗುಂಡಿಗಳು ನಿರ್ಮಾಣವಾಗಿವೆ. ಇದರಿಂದ ವಾಹನ ಸಂಚಾರಕ್ಕೆ ತೊಂದರೆ ಆಗುತ್ತಿದೆ. ಹೆದ್ದಾರಿ ನಿರ್ವಹಣೆ ಜವಾಬ್ದಾರಿ ಹೊತ್ತಿರುವ ಅಧಿಕಾರಿಗಳು ತಕ್ಷಣ ಸ್ಥಳ ಪರಿಶೀಲನೆ ನಡೆಸಬೇಕು ಎಂದು ಸಲಹೆ ನೀಡಿದರು.

ಹೆದ್ದಾರಿಗಳ ಗುಣಮಟ್ಟವನ್ನು ಕಾಯ್ದುಕೊಳ್ಳಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ರಾಜ್ಯ ಸರ್ಕಾರ ಇದಕ್ಕೆ ಅಗತ್ಯ ಸಹಕಾರ ನೀಡಲಿದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ತ್ವರಿತವಾಗಿ ಮುಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಗುತ್ತಿಗೆದಾರರಿಂದ ತಡವಾದರೆ ಅವರಿಗೆ ನೋಟೀಸ್‌ ನೀಡಿ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದೂ ಹೇಳಿದರು.  ರಾಷ್ಟ್ರೀಯ ಹೆದ್ದಾರಿ ಮತ್ತು ಇತರ ಕಡೆಗಳಲ್ಲಿ ಅವೈಜ್ಞಾನಿಕ ರಸ್ತೆ ಉಬ್ಬುಗಳನ್ನು ನಿರ್ಮಿಸಿರುವುದರಿಂದ ಅಪಘಾತಗಳ ಸಂಖ್ಯೆ ಕಡಿಮೆ ಆಗುವ ಬದಲು ಹೆಚ್ಚಾಗುತ್ತಿದೆ. ಇದರಿಂದ ವಾಹನಗಳ ಸರಾಗ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಈ ಬಗ್ಗೆ ಜನಪ್ರತಿನಿಧಿಗಳಿಂದ ವ್ಯಾಪಕ ದೂರುಗಳು ಬಂದಿವೆ. ಇವುಗಳನ್ನು ಪರಿಶೀಲಿಸಿ ಮತ್ತು ಸ್ಥಳೀಯರ ಮನವೊಲಿಸಿ ಅವೈಜ್ಞಾನಿಕ ರಸ್ತೆ ಉಬ್ಬುಗಳನ್ನು ತೆಗೆದು ಹಾಕಬೇಕು ಎಂದು ಪಾಟೀಲ್ ಸೂಚಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!

ಕನಸು ಕೊನೆಗೂ ನನಸು: ಲಿಂಗ ಬದಲಿಸಿಕೊಂಡಿದ್ದ Anaya Bangarಗೆ ಕ್ರಿಕೆಟ್‌ಗೆ ಮರಳಲು ಗ್ರೀನ್ ಸಿಗ್ನಲ್!