ಆದಾಯ ತೆರಿಗೆ ಇಲಾಖೆ ( ಸಂಗ್ರಹ ಚಿತ್ರ) 
ರಾಜ್ಯ

ಬೆಂಗಳೂರು: ಸೋಷಿಯಲ್ ಮೀಡಿಯಾ ನಿರ್ವಹಣೆ ಕಂಪನಿ ಮೇಲೆ ಐಟಿ ರೇಡ್

ಪ್ರತಿಷ್ಠಿತ ಸೋಶಿಯಲ್ ಮೀಡಿಯಾ ಸಂಸ್ಥೆಯನ್ನು ನಿರ್ವಹಣೆ ಮಾಡುವ ಮಾತೃಸಂಸ್ಥೆ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ.

ಬೆಂಗಳೂರು: ಪ್ರತಿಷ್ಠಿತ ಸೋಶಿಯಲ್ ಮೀಡಿಯಾ ಸಂಸ್ಥೆಯನ್ನು ನಿರ್ವಹಣೆ ಮಾಡುವ ಮಾತೃಸಂಸ್ಥೆ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ.

ಪ್ಯಾಲೇಸ್ ಗುಟ್ಟಹಳ್ಳಿ ರಸ್ತೆಯಲ್ಲಿರುವ ಡಿಸೈನ್ ಬಾಕ್ಸ್ ಕಂಪನಿಯಲ್ಲಿ ಐಟಿ ಇಲಾಖೆ ತಪಾಸಮೆ ನಡೆಸಿದೆ. ಜತೆಗೆ ಸದಾಶಿವನಗರದಲ್ಲಿರುವ ಇದರ ಮತ್ತೊಂದು ಕಚೇರಿ ಮೇಲೆಯೂ ದಾಳಿಯಾಗಿದೆ ಎನ್ನಲಾಗಿದೆ.

ಇಂದು ಮುಂಜಾನೆ 7 ಕ್ಕೆ ಆಗಮಿಸಿರೋ ಐಟಿ ಅಧಿಕಾರಿಗಳು ಕಂಪನಿ ಲೆಕ್ಕಪತ್ರಗಳ ತಪಾಸಣೆ, ಪರಿಶೀಲನೆ ಆರಂಭಿಸಿದ್ದಾರೆ. ಈ ತಂಡದಲ್ಲಿ ಒಟ್ಟು ಎಂಟು ಮಂದಿ ಐಟಿ ಅಧಿಕಾರಿಗಳಿದ್ದಾರೆ.

ಇದು ದೇಶಾದ ಹಲವು ರಾಜಕಾರಣಿಗಳ ಪ್ರಮೋಷನ್ ಮಾಡುವ ಸಂಸ್ಥೆಯಾಗಿದೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಶಾಸಕ ಹ್ಯಾರಿಶ್ ಪುತ್ರ ಮಹಮ್ಮದ್ ನಲಪಾಡ್ ಸೇರಿದಂತೆ ಹಲವಾರು ಗಣ್ಯ ರಾಜಕಾರಣಿಗಳು ಈ ಸಂಸ್ಥೆಯಿಂದ ಪ್ರಚಾರ, ಪ್ರಮೋಶನ್ ಸೇವೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಈ ಸಂಸ್ಥೆಯು ಅವರ ಸೋಶಿಯಲ್ ಮೀಡಿಯಾ ಅಕೌಂಟ್ ಗಳ ನಿರ್ವಹಣೆ ಮಾಡುತ್ತಿದ್ದು ಇಲ್ಲಿಂದ ಪ್ರಚಾರ ಸೇವೆ ಪಡೆಯುವುದು ಅತಿ ದುಬಾರಿ ಎನ್ನಲಾಗಿದೆ. ಇದರ ಕೇಂದ್ರ ಕಚೇರಿ ಪ್ಯಾಲೇಸ್ ಗುಟ್ಟಹಳ್ಳಿ ರಸ್ತೆಯಲ್ಲಿದೆ.

ಯಾರು ಹೇಳಿದ್ದು ಡಿಸೈನ್ಸ್ ಬಾಕ್ಸ್ ನನ್ನ ಸೋಷಿಯಲ್ ಮೀಡಿಯಾ ನೋಡಿಕೊಳ್ಳುತ್ತಿದ್ದರೆಂದು: ಡಿ.ಕೆ.ಶಿ

ಡಿಸೈನ್ ಬಾಕ್ಸ್ ನವರು ನನ್ನ ಸೋಷಿಯಲ್ ಮೀಡಿಯಾ ನೋಡಿಕೊಳ್ಳುತ್ತಿದ್ದರು ಎಂದು ಯಾರು ಹೇಳಿದ್ದು? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.

ಡಿಸೈನ್ಸ್ ಬಾಕ್ಸ್ ಕಂಪೆನಿ ಮೇಲಿನ ಆದಾಯ ತೆರಿಗೆ ದಾಳಿ ಕುರಿತು ಸುದ್ದಿಗಾರರಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಡಿಸೈನ್ಸ್ ಬಾಕ್ಸ್ ನವರು ನನ್ನ ಸೋಷಿಯಲ್ ಮೀಡಿಯಾ ನೋಡಿಕೊಳ್ಳುತ್ತಿರಲಿಲ್ಲ. ಬದಲಿಗೆ ನನಗೆ ಸಹಾಯ ಮಾಡುತ್ತಿದ್ದರು. ಡಿಸೈನ್ ಬಾಕ್ಸ್ ನವರು ವೃತ್ತಿಪರತೆ ಹೊಂದಿದವರು.ಅವರ ಕಂಪನಿ ಮೇಲೆ ಐಟಿ ದಾಳಿ ಆಗಿರುವ ಬಗ್ಗೆ ನನಗೆ ಈಗ ಒಬ್ಬರು ಮಾಹಿತಿ ನೀಡಿದ ಮೇಲೆಯಷ್ಟೇ ದಾಳಿ ಆಗಿದೆ ಎಂದು ತಿಳಿದುಬಂದಿತು.

ಐಟಿಯವರಿಗೆ ಡಿಸೈನ್ ಬಾಕ್ಸ್ ನವರು ಉತ್ತರ ಕೊಡುತ್ತಾರೆ.ಇದರಲ್ಲಿ ಗಾಬರಿ ಆಗುವ ಅವಶ್ಯಕತೆ ಇಲ್ಲ.ದಾಳಿ ಬಗ್ಗೆ ಸಂಪೂರ್ಣ ವಿಷಯ ತಿಳಿದು ಮತ್ತೆ ಪ್ರತಿಕ್ರಿಯಿಸುವುದಾಗಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT