ಮಂಗಳೂರು ಮಹಾನಗರ ಪಾಲಿಕೆ 
ರಾಜ್ಯ

ನೇಮಕಾತಿ 2021: ಮಂಗಳೂರು ಮಹಾನಗರ ಪಾಲಿಕೆಯಲ್ಲಿ 190 ಹುದ್ದೆಗಳು ಖಾಲಿ, ಆಸಕ್ತರು ಅರ್ಜಿ ಸಲ್ಲಿಸಿ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮಹಾನಗರ ಪಾಲಿಕೆಯಲ್ಲಿ 190 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಕೂಡಲೇ ಸಲ್ಲಿಸಬಹುದು.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮಹಾನಗರ ಪಾಲಿಕೆಯಲ್ಲಿ 190 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಕೂಡಲೇ ಸಲ್ಲಿಸಬಹುದು.

ಒಟ್ಟು ಹುದ್ದೆಗಳು: 190
ಹುದ್ದೆ ಹೆಸರು: ಪೌರಕಾರ್ಮಿಕರು (ಗ್ರೂಪ್ ಡಿ)
ಕರ್ತವ್ಯ ಸ್ಥಳ: ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಂಗಳೂರಿನಲ್ಲಿ ಕೆಲಸ ನಿರ್ವಹಿಸಬೇಕು.

ಅರ್ಹತೆ:
ವಿದ್ಯಾರ್ಹತೆ ಅನ್ವಯಿಸುವುದಿಲ್ಲ.
ಕನ್ನಡ ಮಾತನಾಡಲು ಗೊತ್ತಿರಬೇಕು.
ಪೌರಕಾರ್ಮಿಕ ಹುದ್ದೆಯಲ್ಲಿ ಕೆಲಸ ಮಾಡುತ್ತಿರುವ ಕ್ಷೇಮಾಭಿವೃದ್ಧಿ, ದಿನಗೂಲಿ, ಹೊರಗುತ್ತಿಗೆ, ಸಮಾನ ಕೆಲಸಕ್ಕೆ ಸಮಾನ ವೇತನ ನೌಕರರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ವಯೋಮಿತಿ: ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರ್ಣಗೊಂಡಿದ್ದು, ಗರಿಷ್ಠ 45 ವರ್ಷ ಮೀರಿರಬಾರದು.
ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 17,000-ರೂ. 28,950 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ: ನೇರ ನೇಮಕಾತಿ ಮೂಲಕ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.  ಅಭ್ಯರ್ಥಿಗಳು ಮಂಗಳೂರು ಮಹಾನಗರ ಪಾಲಿಕೆಯ ಅಧಿಕೃತ ವೆಬ್‌ಸೈಟ್ http://dakshinakannadadudc.mrc.gov.in/kn/recuritment  ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಬೇಕು.

ಅರ್ಜಿ ಶುಲ್ಕ
ಪರಿಶಿಷ್ಠ ಜಾತಿ/ಪರಿಶಿಷ್ಠ .ಪಂಗಡ./ಪ್ರವರ್ಗ1/ಅಂಗವಿಕಲ ಅಭ್ಯರ್ಥಿಗಳು ರೂ. 100, ಉಳಿದ ಅಭ್ಯರ್ಥಿಗಳು ರೂ. 200 ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ: 
ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ವೆಬ್‌ಸೈಟ್ ನಲ್ಲಿ ಲಭ್ಯವಿರುವ PDF ಚಲನ್ ಅನ್ನು ಡೌನ್ಲೋಡ್ ಮಾಡಿಕೊಂಡು ಕೆನರಾ ಬ್ಯಾಂಕ್ ನ ಯಾವುದೇ ಶಾಖೆಯಲ್ಲಿ ನಿಗದಿತ ಶುಲ್ಕ ಪಾವತಿ ಮಾಡತಕ್ಕದ್ದು.

ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 23, 2021

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
http://dakshinakannadadudc.mrc.gov.in/kn/recuritment
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT