ಸಂಗ್ರಹ ಚಿತ್ರ 
ರಾಜ್ಯ

ಗುತ್ತಿಗೆದಾರರು, ಲೆಕ್ಕ ಪರಿಶೋಧಕರ ಮನೆ, ಕಚೇರಿ ಮೇಲೆ ಐಟಿ ದಾಳಿ: 750 ಕೋಟಿ ರೂ. ಅಕ್ರಮ‌ ಆಸ್ತಿ ಪತ್ತೆ

ಬೆಂಗಳೂರು ಮೂಲದ ಗುತ್ತಿಗೆದಾರರು ಮತ್ತು ಲೆಕ್ಕ ಪರಿಶೋಧಕರ ಮನೆ, ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದು, ದಾಳಿಯಲ್ಲಿ ಸುಮಾರು ರೂ.750 ಕೋಟಿ ಬಹಿರಂಗಪಡಿಸದ ಆದಾಯವನ್ನು ಪತ್ತೆ ಮಾಡಲಾಗಿದೆ ಎಂದು ಹಣಕಾಸು ಸಚಿವಾಲಯ ಮಂಗಳವಾರ ಪ್ರಕಟಿಸಿದೆ.

ಬೆಂಗಳೂರು: ನೀರಾವರಿ ಮತ್ತು ಹೆದ್ದಾರಿ ಯೋಜನೆಗಳ ನಿರ್ವಹಣೆಯಲ್ಲಿ ತೊಡಗಿರುವ ಮೂರು ಪ್ರಮುಖ ಬೆಂಗಳೂರು ಮೂಲದ ಗುತ್ತಿಗೆದಾರರು ಮತ್ತು ಲೆಕ್ಕ ಪರಿಶೋಧಕರ ಮನೆ, ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದು, ದಾಳಿಯಲ್ಲಿ ಸುಮಾರು ರೂ.750 ಕೋಟಿ ಬಹಿರಂಗಪಡಿಸದ ಆದಾಯವನ್ನು ಪತ್ತೆ ಮಾಡಲಾಗಿದೆ ಎಂದು ಹಣಕಾಸು ಸಚಿವಾಲಯ ಮಂಗಳವಾರ ಪ್ರಕಟಿಸಿದೆ.

ದಾಳಿಯಲ್ಲಿ ಮಹತ್ವದ ದಾಖಲಾತಿ, ಆಸ್ತಿಪತ್ರ, ನಕಲಿ ಬಿಲ್ ಜಪ್ತಿ ಮಾಡಿ ಅಧಿಕಾರಿಗಳು‌ ಪರಿಶೀಲಿಸಿದಾಗ ಮೂವರು ಗುತ್ತಿಗೆದಾರರ ಒಟ್ಟು 750 ಕೋಟಿ ಅಕ್ರಮ ಆಸ್ತಿ ಪತ್ತೆ ಹಚ್ಚಿದ್ದಾರೆ. ಈ ಪೈಕಿ 487 ಕೋಟಿ ರೂಪಾಯಿ ಅಕ್ರಮ ಎಂದು ಗುತ್ತಿಗೆದಾರರು ಒಪ್ಪಿಕೊಂಡಿದ್ದಾರೆ. ಇನ್ನುಳಿದ‌ ಹಣ ಬಗ್ಗೆ ಅಧಿಕಾರಿಗಳು ತನಿಖೆ‌ ಮುಂದುವರೆಸಿದ್ದಾರೆಂದು ತಿಳಿಸಿದೆ. 

ಐಟಿ ದಾಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಹೇಳಿಕೆ ಬಿಡುಗಡೆ ​ ಮಾಡಿದ್ದು, ನೀರಾವರಿ, ಹೆದ್ದಾರಿ ಯೋಜನೆಗಳಲ್ಲಿ ಅಕ್ರಮ ಎಸಗಿರುವುದು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.

ಜಲಸಂಪನ್ಮೂಲ ಇಲಾಖೆ ಹಾಗೂ ಹೆದ್ದಾರಿ ಕಾಮಗಾರಿಯಲ್ಲಿ ಕೋಟ್ಯಂತರ ರೂಪಾಯಿ ತೆರಿಗೆ ವಂಚನೆ ಆರೋಪದಡಿ ಕಳೆದ‌ ವಾರ ಮೂವರು ಗುತ್ತಿಗೆದಾರರ ಮೇಲೆ ನಡೆದಿದ್ದ ಐಟಿ ಅಧಿಕಾರಿಗಳ ದಾಳಿಯಲ್ಲಿ‌ ಸುಮಾರು 750 ಕೋಟಿ ರೂ.ಅಕ್ರಮ ಆಸ್ತಿ ಪತ್ತೆ ಹಚ್ಚಿದ್ದಾರೆ.

ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳ 47 ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಮುಖ್ಯವಾಗಿ ನೀರಾವರಿ ಇಲಾಖೆ ಹಾಗೂ ಹೆದ್ದಾರಿ ಕಾಮಗಾರಿಯಲ್ಲಿ ಕೋಟ್ಯಂತರ ತೆರಿಗೆ ವಂಚನೆ ಸಂಬಂಧ ಮೂವರ ಮನೆಗಳ ಮೇಲೆ ದಾಳಿ ನಡೆಸಲಾಗಿತ್ತು.‌

ಗುತ್ತಿಗೆದಾರರ ಮನೆಯೊಂದರಲ್ಲಿ 4.69 ಕೋಟಿ ನಗದು, 8.67 ಕೋಟಿ ಚಿನ್ನ, 29.83 ಲಕ್ಷ ಮೌಲ್ಯದ ಬೆಳ್ಳಿ ವಸ್ತು ಜಪ್ತಿ ಮಾಡಿಕೊಳ್ಳಲಾಗಿದೆ. ಮೂವರು ಪ್ರಮುಖ ಗುತ್ತಿಗೆದಾರರು ಸುಮಾರು 382 ಕೋಟಿ ರೂ. ಅಕ್ರಮ ವಹಿವಾಟು ನಡೆದಿದೆ. ಕಾರ್ಮಿಕರ ಹೆಸರಲ್ಲಿ ನೂರಾರೂ ಕೋಟಿ ವಂಚನೆ ಎಸಗಿರುವುದು ಗೊತ್ತಾಗಿದೆ. ಕಾರ್ಮಿಕರ ಹೆಸರಿನಲ್ಲಿ ಸಂಬಳ ಹಾಗೂ 40 ಜನರ ಹೆಸರಿನಲ್ಲಿ ಬೋಗಸ್ ಉಪಗುತ್ತಿಗೆದಾರರನ್ನು ಸೃಷ್ಟಿಸಿ ಗೋಲ್​ಮಾಲ್ ಮಾಡಲಾಗಿದೆ‌. ಪರಿಶೀಲನೆ ವೇಳೆ ಭೌತಿಕ ದಾಖಲಾತಿ ಹಾಗೂ ಡಿಜಿಟಲ್ ಡ್ಯಾಕುಮೆಂಟ್​ಗಳು ಸಿಕ್ಕಿವೆ‌ ಎಂದು ಆದಾಯ ತೆರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT