ಸ್ಯಾಂಡಲ್ ವುಡ್ ಸಮಸ್ಯೆ ಪರಿಹಾರಕ್ಕೆ ಗೃಹಸಚಿವರಿಗೆ ಕೆಎಫ್‍ಸಿಸಿ ಮನವಿ 
ರಾಜ್ಯ

ಸ್ಯಾಂಡಲ್ ವುಡ್ ಸಮಸ್ಯೆ ಪರಿಹಾರಕ್ಕೆ ಗೃಹಸಚಿವರಿಗೆ ಕೆಎಫ್‍ಸಿಸಿ ಮನವಿ

ಚಂದನವನದಲ್ಲಿ ಪೈರಸಿ ಸೇರಿದಂತೆ ಹಲವು ಸಮಸ್ಯೆಗಳಿದ್ದು, ಈ ಕುರಿತು ಗೃಹ ಸಚಿವರೊಡನೆ ಚರ್ಚಿಸಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿರ್ಧರಿಸಿದೆ.

ಬೆಂಗಳೂರು: ಚಂದನವನದಲ್ಲಿ ಪೈರಸಿ ಸೇರಿದಂತೆ ಹಲವು ಸಮಸ್ಯೆಗಳಿದ್ದು, ಈ ಕುರಿತು ಗೃಹ ಸಚಿವರೊಡನೆ ಚರ್ಚಿಸಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿರ್ಧರಿಸಿದೆ.

ಈ ಸಂಬಂಧ ಬುಧವಾರ ರಾಜ್ಯದ ಗೃಹ ಸಚಿವ ಅರಗ ಜ್ಞಾನೇಂದ್ರ ರವರನ್ನು ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಭೇಟಿ ಮಾಡಿ ಉದ್ಯಮದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಅವಕಾಶಕ್ಕೆ ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಎನ್ ಎಂ ಸುರೇಶ್, ಉಮೇಶ್ ಬಣಕಾರ್, ನಾಗಣ್ಣ ಸಾ ರಾ ಗೋವಿಂದು ಮತ್ತಿತರರು ಉಪಸ್ಥಿತರಿದ್ದರು. ಕಳೆದ ವಾರವಷ್ಟೆ ತೆರೆ ಕಂಡಿರುವ ಡಾ. ರಾಜ್ ಕುಮಾರ್ ಮೊಮ್ಮಗಳು ಧನ್ಯಾ ರಾಮ್ ಕುಮಾರ್ ಹಾಗೂ ಸೂರಜ್ ಗೌಡ ಅಭಿನಯದ "ನಿನ್ನ ಸನಿಹಕೆ" ಸಿನಿಮಾ ಪೈರಸಿ ಆಗಿದ್ದು ಟೆಲಿಗ್ರಾಮ್ ನಲ್ಲಿ ಅಪ್ ಲೋಡ್ ಮಾಡಲಾಗಿದೆ.

ಅಲ್ಲದೆ ಲೂಸ್ ಮಾದ ಯೋಗೇಶ್ ನಟಿಸಿರೋ ಲಂಕೆ, ಅಜಯ್ ರಾವ್ ಅಭಿನಯದ ಕೃಷ್ಣ ಟಾಕೀಸ್ ಹಾಗೂ ನಟ ಚೇತನ್ ಚಂದ್ರ ಅಭಿನಯಿಸಿರೋ ಶಾರ್ದೂಲ ಚಿತ್ರ ಕೂಡ ಪೈರಸಿಯಾಗಿದೆ. ಕೇವಲ ಪೈರಸಿ ಮಾತ್ರವಲ್ಲದೆ ಇನ್ನಿತರ ಸಮಸ್ಯೆಗಳ ಚರ್ಚಿಸಲು ಕರ್ನಾಟಕ ವಾಣಿಜ್ಯ ಮಂಡಳಿ ಮುಂದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!