ಕರ್ನಾಟಕ ಹೈಕೋರ್ಟ್ 
ರಾಜ್ಯ

RTI ಮೂಲಕ ಪೊಲೀಸ್ ತನಿಖಾ ವರದಿ ಪಡೆಯಬಹುದು: ಕರ್ನಾಟಕ ಹೈಕೋರ್ಟ್

ಇನ್ನು ಮುಂದೆ ಮಾಹಿತಿ ಹಕ್ಕು ಕಾಯ್ದೆ ಮೂಲಕವೂ ಪೊಲೀಸ್ ತನಿಖಾ ವರದಿ ಪಡೆಯಬಹುದು ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.

ಬೆಂಗಳೂರು: ಇನ್ನು ಮುಂದೆ ಮಾಹಿತಿ ಹಕ್ಕು ಕಾಯ್ದೆ ಮೂಲಕವೂ ಪೊಲೀಸ್ ತನಿಖಾ ವರದಿ ಪಡೆಯಬಹುದು ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.

ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಈ ಮಹತ್ವದ ತೀರ್ಪು ನೀಡಿದ್ದು, 'ತನಿಖಾ ಹಂತದಲ್ಲಿ ಯಾವುದೇ ಪ್ರಕರಣದ ಮಾಹಿತಿಯನ್ನು ನೀಡಲು ನಿರ್ಬಂಧವಿದೆ. ಆದರೆ, ತನಿಖೆಯು ಪೂರ್ಣಗೊಂಡ ನಂತರ ಪೊಲೀಸರ ತನಿಖಾ ವರದಿಯ ಪ್ರತಿಯನ್ನು ಮಾಹಿತಿ ಹಕ್ಕು ಕಾಯಿದೆ ಅಡಿ ನೀಡಬಹುದಾಗಿದೆ ಎಂದು ಹೇಳಿದೆ.

ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ತನಿಖಾ ವರದಿಯ ಪ್ರತಿಯನ್ನು ಆರ್‌ಟಿಐ ಅಡಿಯಲ್ಲಿ ನೀಡುವಂತೆ ರಾಜ್ಯ ಮಾಹಿತಿ ಹಕ್ಕು ಆಯೋಗ ನೀಡಿದ ಆದೇಶವನ್ನು ಪ್ರಶ್ನಿಸಿ ಅಪರಾಧ ತನಿಖಾ ವಿಭಾಗದ (ಸಿಐಡಿ) ಮಾಹಿತಿ ಹಕ್ಕು ಅಧಿಕಾರಿ ಮತ್ತು ಪೊಲೀಸ್ ಮಹಾ ನಿರ್ದೇಶಕರು ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಎನ್ ಎಸ್ ಸಂಜಯ್ ಗೌಡ ನೇತೃತ್ವದ ಏಕ ಸದಸ್ಯ ಪೀಠವು ಮೇಲಿನಂತೆ ಆದೇಶ ಮಾಡಿದೆ.

ತನಿಖಾ ಹಂತದಲ್ಲಿ ಯಾವುದೇ ಪ್ರಕರಣದ ಮಾಹಿತಿಯನ್ನು ನೀಡಲು ನಿರ್ಬಂಧವಿದೆ. ಆದರೆ, ತನಿಖೆಯ ಪೂರ್ಣಗೊಂಡ ನಂತರ ಪೊಲೀಸರ ತನಿಖಾ ವರದಿಯ ಪ್ರತಿಯನ್ನು ಮಾಹಿತಿ ಹಕ್ಕು ಕಾಯಿದೆ ಅಡಿ ನೀಡಬಹುದಾಗಿದೆ. ಈ ಕುರಿತು ರಾಜ್ಯ ಮಾಹಿತಿ ಹಕ್ಕು ಆಯೋಗದ ಆಯುಕ್ತರು ನೀಡಿದ ಆದೇಶವು ನ್ಯಾಯಸಮ್ಮತವಾಗಿದೆ ಎಂದು ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಸಿಐಡಿ ಪೊಲೀಸರು ಪ್ರಕರಣವೊಂದರ ಸಂಬಂಧ ತನಿಖೆ ನಡೆಸಿ ಅಧೀನ ನ್ಯಾಯಾಲಯಕ್ಕೆ ಬಿ ವರದಿ ಸಲ್ಲಿಸಿದ್ದರು. ಬಿ ವರದಿ ಪ್ರತಿ ಒದಗಿಸುವಂತೆ ಕೋರಿ ಧಾರವಾಡದ ಮಲ್ಲೇಶಪ್ಪ ಎಂ.ಚಿಕ್ಕೇರಿ ಎಂಬುವರು ಸಿಐಡಿಗೆ ಮಾಹಿತಿ ಹಕ್ಕು ಕಾಯಿದೆ ಅಡಿ ಅರ್ಜಿ ಸಲ್ಲಿಸಿದ್ದರು. ಆದರೆ, ತನಿಖಾ ವರದಿಯನ್ನು ನೀಡಲು ಸಾಧ್ಯವಿಲ್ಲ ಎಂದು ಸಿಐಡಿಯ ಮಾಹಿತಿ ಹಕ್ಕು ಅಧಿಕಾರಿ ತಿಳಿಸಿದ್ದರು.

ಹೀಗಾಗಿ, ಮಲ್ಲೇಶಪ್ಪ ಅವರು ರಾಜ್ಯ ಮಾಹಿತಿ ಹಕ್ಕು ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದರು. ಅದನ್ನು ಮಾನ್ಯ ಮಾಡಿದ್ದ ಆಯೋಗದ ಆಯುಕ್ತರು, ಮಲ್ಲೇಶಪ್ಪ ಅವರ ಕೋರಿಕೆಯಂತೆ ತನಿಖಾ ವರದಿಯ ಪ್ರತಿ ಒದಗಿಸುವಂತೆ ಸಿಐಡಿಗೆ ಸೂಚಿಸಿ ಆದೇಶ ಮಾಡಿದ್ದರು. ಈ ಆದೇಶವನ್ನು ಪ್ರಶ್ನಿಸಿ ಸಿಐಡಿಯ ಮಾಹಿತಿ ಹಕ್ಕು ಅಧಿಕಾರಿ ಮತ್ತು ಪೊಲೀಸ್ ಮಹಾ ನಿರ್ದೇಶಕರು ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಆ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಆರ್‌ಟಿಐ ಅಡಿಯಲ್ಲಿ ಪೊಲೀಸರ ತನಿಖಾ ವರದಿಯ ಪ್ರತಿಯನ್ನು ಪಡೆಯುವ ಹಕ್ಕು ಇದೆ ಎಂದು ಆದೇಶಿಸಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT