ಕರ್ನಾಟಕ ಹೈಕೋರ್ಟ್ 
ರಾಜ್ಯ

RTI ಮೂಲಕ ಪೊಲೀಸ್ ತನಿಖಾ ವರದಿ ಪಡೆಯಬಹುದು: ಕರ್ನಾಟಕ ಹೈಕೋರ್ಟ್

ಇನ್ನು ಮುಂದೆ ಮಾಹಿತಿ ಹಕ್ಕು ಕಾಯ್ದೆ ಮೂಲಕವೂ ಪೊಲೀಸ್ ತನಿಖಾ ವರದಿ ಪಡೆಯಬಹುದು ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.

ಬೆಂಗಳೂರು: ಇನ್ನು ಮುಂದೆ ಮಾಹಿತಿ ಹಕ್ಕು ಕಾಯ್ದೆ ಮೂಲಕವೂ ಪೊಲೀಸ್ ತನಿಖಾ ವರದಿ ಪಡೆಯಬಹುದು ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.

ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಈ ಮಹತ್ವದ ತೀರ್ಪು ನೀಡಿದ್ದು, 'ತನಿಖಾ ಹಂತದಲ್ಲಿ ಯಾವುದೇ ಪ್ರಕರಣದ ಮಾಹಿತಿಯನ್ನು ನೀಡಲು ನಿರ್ಬಂಧವಿದೆ. ಆದರೆ, ತನಿಖೆಯು ಪೂರ್ಣಗೊಂಡ ನಂತರ ಪೊಲೀಸರ ತನಿಖಾ ವರದಿಯ ಪ್ರತಿಯನ್ನು ಮಾಹಿತಿ ಹಕ್ಕು ಕಾಯಿದೆ ಅಡಿ ನೀಡಬಹುದಾಗಿದೆ ಎಂದು ಹೇಳಿದೆ.

ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ತನಿಖಾ ವರದಿಯ ಪ್ರತಿಯನ್ನು ಆರ್‌ಟಿಐ ಅಡಿಯಲ್ಲಿ ನೀಡುವಂತೆ ರಾಜ್ಯ ಮಾಹಿತಿ ಹಕ್ಕು ಆಯೋಗ ನೀಡಿದ ಆದೇಶವನ್ನು ಪ್ರಶ್ನಿಸಿ ಅಪರಾಧ ತನಿಖಾ ವಿಭಾಗದ (ಸಿಐಡಿ) ಮಾಹಿತಿ ಹಕ್ಕು ಅಧಿಕಾರಿ ಮತ್ತು ಪೊಲೀಸ್ ಮಹಾ ನಿರ್ದೇಶಕರು ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಎನ್ ಎಸ್ ಸಂಜಯ್ ಗೌಡ ನೇತೃತ್ವದ ಏಕ ಸದಸ್ಯ ಪೀಠವು ಮೇಲಿನಂತೆ ಆದೇಶ ಮಾಡಿದೆ.

ತನಿಖಾ ಹಂತದಲ್ಲಿ ಯಾವುದೇ ಪ್ರಕರಣದ ಮಾಹಿತಿಯನ್ನು ನೀಡಲು ನಿರ್ಬಂಧವಿದೆ. ಆದರೆ, ತನಿಖೆಯ ಪೂರ್ಣಗೊಂಡ ನಂತರ ಪೊಲೀಸರ ತನಿಖಾ ವರದಿಯ ಪ್ರತಿಯನ್ನು ಮಾಹಿತಿ ಹಕ್ಕು ಕಾಯಿದೆ ಅಡಿ ನೀಡಬಹುದಾಗಿದೆ. ಈ ಕುರಿತು ರಾಜ್ಯ ಮಾಹಿತಿ ಹಕ್ಕು ಆಯೋಗದ ಆಯುಕ್ತರು ನೀಡಿದ ಆದೇಶವು ನ್ಯಾಯಸಮ್ಮತವಾಗಿದೆ ಎಂದು ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಸಿಐಡಿ ಪೊಲೀಸರು ಪ್ರಕರಣವೊಂದರ ಸಂಬಂಧ ತನಿಖೆ ನಡೆಸಿ ಅಧೀನ ನ್ಯಾಯಾಲಯಕ್ಕೆ ಬಿ ವರದಿ ಸಲ್ಲಿಸಿದ್ದರು. ಬಿ ವರದಿ ಪ್ರತಿ ಒದಗಿಸುವಂತೆ ಕೋರಿ ಧಾರವಾಡದ ಮಲ್ಲೇಶಪ್ಪ ಎಂ.ಚಿಕ್ಕೇರಿ ಎಂಬುವರು ಸಿಐಡಿಗೆ ಮಾಹಿತಿ ಹಕ್ಕು ಕಾಯಿದೆ ಅಡಿ ಅರ್ಜಿ ಸಲ್ಲಿಸಿದ್ದರು. ಆದರೆ, ತನಿಖಾ ವರದಿಯನ್ನು ನೀಡಲು ಸಾಧ್ಯವಿಲ್ಲ ಎಂದು ಸಿಐಡಿಯ ಮಾಹಿತಿ ಹಕ್ಕು ಅಧಿಕಾರಿ ತಿಳಿಸಿದ್ದರು.

ಹೀಗಾಗಿ, ಮಲ್ಲೇಶಪ್ಪ ಅವರು ರಾಜ್ಯ ಮಾಹಿತಿ ಹಕ್ಕು ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದರು. ಅದನ್ನು ಮಾನ್ಯ ಮಾಡಿದ್ದ ಆಯೋಗದ ಆಯುಕ್ತರು, ಮಲ್ಲೇಶಪ್ಪ ಅವರ ಕೋರಿಕೆಯಂತೆ ತನಿಖಾ ವರದಿಯ ಪ್ರತಿ ಒದಗಿಸುವಂತೆ ಸಿಐಡಿಗೆ ಸೂಚಿಸಿ ಆದೇಶ ಮಾಡಿದ್ದರು. ಈ ಆದೇಶವನ್ನು ಪ್ರಶ್ನಿಸಿ ಸಿಐಡಿಯ ಮಾಹಿತಿ ಹಕ್ಕು ಅಧಿಕಾರಿ ಮತ್ತು ಪೊಲೀಸ್ ಮಹಾ ನಿರ್ದೇಶಕರು ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಆ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಆರ್‌ಟಿಐ ಅಡಿಯಲ್ಲಿ ಪೊಲೀಸರ ತನಿಖಾ ವರದಿಯ ಪ್ರತಿಯನ್ನು ಪಡೆಯುವ ಹಕ್ಕು ಇದೆ ಎಂದು ಆದೇಶಿಸಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT