ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿ 
ರಾಜ್ಯ

ಇದೇ ಮೊದಲ ಬಾರಿಗೆ ಚಾಮುಂಡಿ ಬೆಟ್ಟದಿಂದ ಅರಮನೆಗೆ ಅಂಬಾರಿ ಉತ್ಸವ ಮೂರ್ತಿ

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಕೇಂದ್ರ ಬಿಂದು ಜಂಬೂ ಸವಾರಿ ಮೆರವಣಿಗೆಯಲ್ಲಿ ಚಿನ್ನದ ಅಂಬಾರಿಯಲ್ಲಿ ವಿರಾಜಮಾನವಾಗಿ ಸಾಗುವ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯನ್ನು ಇದೇ ಮೊದಲ ಬಾರಿಗೆ ಚಾಮುಂಡಿ ಬೆಟ್ಟದಿಂದ ಅಲಂಕೃತ ವಾಹನದಲ್ಲಿ ವಿವಿಧ ಕಲಾತಂಡಗಳ ಜೊತೆಗೆ ಮೆರವಣಿಗೆ ಮೂಲಕ ಅರಮನೆಗೆ ತರಲಾಗುತ್ತಿದೆ.

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಕೇಂದ್ರ ಬಿಂದು ಜಂಬೂ ಸವಾರಿ ಮೆರವಣಿಗೆಯಲ್ಲಿ ಚಿನ್ನದ ಅಂಬಾರಿಯಲ್ಲಿ ವಿರಾಜಮಾನವಾಗಿ ಸಾಗುವ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯನ್ನು ಇದೇ ಮೊದಲ ಬಾರಿಗೆ ಚಾಮುಂಡಿ ಬೆಟ್ಟದಿಂದ ಅಲಂಕೃತ ವಾಹನದಲ್ಲಿ ವಿವಿಧ ಕಲಾತಂಡಗಳ ಜೊತೆಗೆ ಮೆರವಣಿಗೆ ಮೂಲಕ ಅರಮನೆಗೆ ತರಲಾಗುತ್ತಿದೆ.

ವಿಜಯದಶಮಿ ದಿನವಾದ ಶುಕ್ರವಾರ ಬೆಳಗ್ಗೆ 8 ಗಂಟೆಗೆ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ, ಸೋಮಶೇಖರ್ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡುವರು.

ಚಾಮುಂಡೇಶ್ವರಿ ಉತ್ಸವ ಮೂರ್ತಿ ತರುವ ಅಲಂಕೃತ ವಾಹನದೊಂದಿಗೆ ನಾದಸ್ವರ ತಂಡ, ಪೊಲೀಸ್ ಬ್ಯಾಂಡ್, ಅಶ್ವದಳ, ಭಜನಾ ತಂಡ, ವೇದ ಘೋಷ, ಚಂಡೆ, ನವದುರ್ಗೆಯರು ಸಾಗುವರು. ತಾವರಕಟ್ಟೆ, ಇಟ್ಟಿಗೆಗೂಡು, ಹಾರ್ಡೀಂಜ್ ವೃತ್ತದ ಮೂಲಕ ಅರಮನೆ ಪ್ರವೇಶಿಸಲಾಗುತ್ತದೆ. 

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರೊಂದಿಗೆ ಸಂಸದರಾದ ಪ್ರತಾಪ್ ಸಿಂಹ, ಶಾಸಕ ಜಿ.ಟಿ. ದೇವೇಗೌಡ, ಎಸ್.ಎ. ರಾಮದಾಸ್ ಮತ್ತಿತರರ ಗಣ್ಯರು ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡುವರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT