ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ತಡರಾತ್ರಿ ರಸ್ತೆ ಜಗಳ; ಬೈಕ್ ಸವಾರನ ಮೇಲೆ ಗುಂಡು ಹಾರಿಸಿದ ಆಡಿ ಕಾರು ಚಾಲಕ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಿನ್ನೆ ತಡರಾತ್ರಿ ಗುಂಡಿನ ಸದ್ದು ಕೇಳಿಬಂದಿದ್ದು, ಕಾರು ಚಾಲಕನೊಬ್ಬ ಬೈಕ್ ಸವಾರನ ಮೇಲೆ ಶೂಟೌಟ್ ಮಾಡಿದ್ದಾನೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಿನ್ನೆ ತಡರಾತ್ರಿ ಗುಂಡಿನ ಸದ್ದು ಕೇಳಿಬಂದಿದ್ದು, ಕಾರು ಚಾಲಕನೊಬ್ಬ ಬೈಕ್ ಸವಾರನ ಮೇಲೆ ಶೂಟೌಟ್ ಮಾಡಿದ್ದಾನೆ.

ಹೌದು.. ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಯ ಹಿಂಬದಿ ಗೇಟ್ ಬಳಿ ನಿನ್ನೆ ರಾತ್ರಿ ಸುಮಾರು 9.25ರಲ್ಲಿ ಈ ಘಟನೆ ನಡೆದಿದ್ದು, ಬೈಕ್ ಸವಾರನ ಮೇಲೆ ಆಡಿ ಕಾರು ಚಾಲಕ 2 ಸುತ್ತು ಗುಂಡು ಹಾರಿಸಿದ್ದಾನೆ. ಅದೃಷ್ಟವಶಾತ್ ಬೈಕ್ ಚಾಲಕ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ರಸ್ತೆಯಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಆಡಿಕಾರು ಚಾಲಕ ಹಾರ್ನ್ ಮಾಡಿದ್ದಾನೆ. ಈ ವೇಳೆ ಬೈಕ್ ಚಾಲಕ ದಾರಿ ಕೊಡಲಿಲ್ಲ ಎಂದು ಆಕ್ರೋಶಗೊಂಡು ಕೂಡಲೇ ಗನ್ ತೆಗೆದು ಚಲಿಸುತ್ತಿದ್ದ ಕಾರಿನಿಂದಲೇ ಆತನ ಮೇಲೆ ಶೂಟ್ ಮಾಡಿದ್ದಾನೆ. ಈ ವೇಳೆ ಬೈಕ್ ಚಾಲಕ ಕೂದಲೆಳೆ ಅಂತರದಲ್ಲಿ ತಪ್ಪಿಸಿಕೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಈ ಸಂಬಂಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಶಸ್ತ್ರಾಸ್ತ್ರ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸಂತ್ರಸ್ಥ ಬೈಕ್ ಚಾಲಕನನ್ನು ಅನಿಲ್ ಎಂದು ಗುರುತಿಸಲಾಗಿದೆ. ಆತ ವೃತ್ತಿಯಲ್ಲಿ ಆ್ಯಂಬುಲೆನ್ಸ್ ಚಾಲಕನಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಗುಂಡು ಹಾರಿಸಿದ ಆಡಿ ಚಾಲಕನ ಪತ್ತೆಗಾಗಿ ಪೊಲೀಸರು ಘಟನಾ ಪ್ರದೇಶದ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT