ಜಿ.ಕೆ. ಗೋವಿಂದರಾವ್ 
ರಾಜ್ಯ

ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಪ್ರೊ. ಜಿ.ಕೆ. ಗೋವಿಂದರಾವ್

ಹುಬ್ಬಳ್ಳಿಯ ಗೋಲ್ಡನ್ ಟೌನ್ ಬಡಾವಣೆಯ ತಮ್ಮ ಪುತ್ರಿಯ ನಿವಾಸದಲ್ಲಿ ಶುಕ್ರವಾರ ಬೆಳಗಿನ ಜಾವ ವಿಧಿವಶರಾದ ಚಿಂತಕ ಹಾಗೂ ಕಲಾವಿದ ಪ್ರೊ. ಜಿ.ಕೆ. ಗೋವಿಂದರಾವ್ ಅವರು ತಮ್ಮ ನೇತ್ರಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಬೆಂಗಳೂರು: ಹುಬ್ಬಳ್ಳಿಯ ಗೋಲ್ಡನ್ ಟೌನ್ ಬಡಾವಣೆಯ ತಮ್ಮ ಪುತ್ರಿಯ ನಿವಾಸದಲ್ಲಿ ಶುಕ್ರವಾರ ಬೆಳಗಿನ ಜಾವ ವಿಧಿವಶರಾದ ಚಿಂತಕ ಹಾಗೂ ಕಲಾವಿದ ಪ್ರೊ. ಜಿ.ಕೆ. ಗೋವಿಂದರಾವ್ ಅವರು ತಮ್ಮ ನೇತ್ರಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. 

ಗೋವಿಂದರಾವ್ ಅವರು ತಮ್ಮ ಕಣ್ಣುಗಳನ್ನು ಎಂ.ಎಂ. ಜೋಶಿ ನೇತ್ರ ವಿಜ್ಞಾನ ಸಂಸ್ಥೆಗೆ ನೇತ್ರದಾನ ಮಾಡಿದ್ದಾರೆಂದು ತಿಳಿದುಬಂದಿದೆ. 

ತಮ್ಮ ಮರಣದ ಬಳಿಕ ನೇತ್ರದಾನ ಮಾಡಬೇಕು ಎಂಬುದು ಗೋವಿಂದರಾವ್ ಅವರ ಆಸೆಯಾಗಿತ್ತು. ಅದರಂತೆ ನೇತ್ರದಾನ ಮಾಡಲಾಗಿದೆ ಎಂದು ಕುಟುಂಬದವರು ಮಾಹಿತಿ ನೀಡಿದ್ದಾರೆಂದು ವರದಿಗಳು ತಿಳಿಸಿವೆ.

2 ತಿಂಗಳಿನಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಪ್ರೊ. ಜಿ.ಕೆ. ಗೋವಿಂದರಾವ್ ಅವರ ಆರೋಗ್ಯ 5 ದಿನಗಳ ಹಿಂದೆ ಸಾಕಷ್ಟು ಹದಗೆಟ್ಟಿತ್ತು. ಬಳಿಕ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಗೆ ದಾಖಲಾದ ಮೊದಲ ಮೂರು ದಿನ ಪ್ರಜ್ಞಾವಸ್ಥೆಯಲ್ಲಿಯೇ ಇದ್ದ ಅವರು, ಕೊನೆಯ ಎರಡು ದಿನ ಅರೆಪ್ರಜ್ಞಾವಸ್ಥೆಗೆ ತಲುಪಿದ್ದರು ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT