ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿ 
ರಾಜ್ಯ

ಚಾಮುಂಡಿ ಬೆಟ್ಟದಿಂದ ಅರಮನೆ ತಲುಪಿದ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಮಹೋತ್ಸವದ ಸಂಭ್ರಮ ಮನೆಮಾಡಿದೆ. ನಾಡಹಬ್ಬದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯ ಚಿನ್ನದ ಅಂಬಾರಿಯಲ್ಲಿ ಸಾಗುವ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿ ಅರಮನೆ ತಲುಪಿದೆ.

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಮಹೋತ್ಸವದ ಸಂಭ್ರಮ ಮನೆಮಾಡಿದೆ. ನಾಡಹಬ್ಬದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯ ಚಿನ್ನದ ಅಂಬಾರಿಯಲ್ಲಿ ಸಾಗುವ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿ ಅರಮನೆ ತಲುಪಿದೆ. 

ಇದೇ ಮೊದಲ ಬಾರಿಗೆ ಚಾಮುಂಡಿ ಬೆಟ್ಟದಿಂದ ಅರಮನೆಗೆ ನಾದಸ್ವರ, ಕಲಾತಂಡದೊಂದಿಗೆ ಅಂಬಾರಿ ಉತ್ಸವ ಮೂರ್ತಿಯನ್ನು ತರಲಾಗಿದ್ದು, ಚಾಮುಂಡಿ ಬೆಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹಾಗೂ ಇತರ ಗಣ್ಯರು, ದೇವಿಯ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು.

ಶ್ರೀಚಾಮುಂಡೇಶ್ವರಿ ಉತ್ಸವ ಮೂರ್ತಿ ತರುವ ಅಲಂಕೃತ ವಾಹನದೊಂದಿಗೆ ನಾದಸ್ವರ ತಂಡ, ಪೊಲೀಸ್ ಬ್ಯಾಂಡ್, ಅಶ್ವದಳ, ಭಜನಾ ತಂಡ, ವೇದಘೋಷ, ಚಂಡೆ, ನವದುರ್ಗೆಯರು ಸಾಗುವರು. ತಾವರಕಟ್ಟೆ, ಇಟ್ಟಿಗೆಗೂಡು, ಹಾರ್ಡಿಂಚ್ ವೃತ್ತದ ಮೂಲಕ ಅರಮನೆ ಪ್ರವೇಶಿಸಿತು.

ಇದಕ್ಕೂ ಮುನ್ನ ಚಾಮುಂಡಿ ಬೆಟ್ಟದ ದೇವಸ್ಥಾನದಿಂದ ಹೊರಟ ಚಾಮುಂಡಿ ತಾಯಿಯ ಮೂರ್ತಿ ಮೆರವಣಿಗೆಯನ್ನು ನೂರಾರು ಭಕ್ತರು ಕಣ್ತುಂಬಿಕೊಂಡರು, ಚಾಮುಂಡಿ ಬೆಟ್ಟದಿಂದ ತಾವರೆಕಟ್ಟೆ ಗ್ರಾಮಕ್ಕೆ ಚಾಮುಂಡೇಶ್ವರಿ ವಿಗ್ರಹದ ಮೆರವಣಿಗೆ ಬರುತ್ತಿದ್ದಂತೆಯೇ ಸ್ಥಳೀಯರು, ಪಟಾಕಿ ಸಿಡಿಸಿ ಸಂಭ್ರಮದಿಂದ ಬರಮಾಡಿಕೊಂಡರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

SCROLL FOR NEXT