ಸಂಗ್ರಹ ಚಿತ್ರ 
ರಾಜ್ಯ

ನಗರವಾಸದ ಗೀಳಿಗೆ ಬಿದ್ದು ಜಗಳ: ಪತ್ನಿ ಕೊಂದು, ಆತ್ಮಹತ್ಯೆಗೆ ಶರಣಾದ ಪತಿ

ನಗರವಾಸದ ಗೀಳೊಂದು ಎರಡು ಜೀವನಗಳನ್ನು ಬಲಿಪಡೆದುಕೊಂಡಿವೆ. ಪಟ್ಟಣ ವಾಸದ ಆಸೆಗೆ ಬಿದ್ದ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ನಡೆದಿದೆ.

ರಾಮನಗರ: ನಗರವಾಸದ ಗೀಳೊಂದು ಎರಡು ಜೀವನಗಳನ್ನು ಬಲಿಪಡೆದುಕೊಂಡಿವೆ. ಪಟ್ಟಣ ವಾಸದ ಆಸೆಗೆ ಬಿದ್ದ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ನಡೆದಿದೆ.

ಪತ್ನಿ ಇಂದ್ರಮ್ಮ(35) ನನ್ನು ಕೊಂದು ಬಳಿಕ ಪತಿ ದೇಸಿಗೌಡ (40) ತಾನು ಕೂಡ ನೇಣಿಗೆ ಶರಣಾಗಿದ್ದಾನೆ. 18 ವರ್ಷದ ಹಿಂದೆ ಇಂದ್ರಮ್ಮ ಮತ್ತು ದೇಸಿಗೌಡ ವಿವಾಹವಾಗಿದ್ದರು. 

ಈ ಹಿಂದೆ ಬೆಂಗಳೂರಿನಲ್ಲಿ ವಾಸವಾಗಿದ್ದ ದಂಪತಿ, ಕೊವಿಡ್ ಹಿನ್ನೆಲೆಯಲ್ಲಿ ಗುಡ್ಡ ವೀರನಹೊಸಹಳ್ಳಿ ಗ್ರಾಮಕ್ಕೆ ವಾಪಾಸ್ ಬಂದು ನೆಲೆಸಿದ್ದರು. ಇತ್ತೀಚೆಗೆ ಕೋವಿಡ್ ಪರಿಸ್ಥಿತಿ ಹತೋಟಿಗೆ ಬಂದಿದ್ದು, ನಗರ ವಾಸಕ್ಕೆ ಗೀಳು ಬಿದಿದ್ದ ಪತ್ನಿ ಇಂದಿರಾ ಪದೇ ಪದೇ ಗಂಡನನ್ನು ಮತ್ತೆ ಬೆಂಗಳೂರಿಗೆ ವಾಪಸ್ ಹೋಗುವಂತೆ ಪೀಡಿಸುತ್ತಿದ್ದಳು. 

ಗ್ರಾಮದಲ್ಲಿ ಚಿಲ್ಲರೆ ಹಾಗೂ ಕೋಳಿ ಅಂಗಡಿ ಇಟ್ಟುಕೊಂಡು ದಂಪತಿಗಳು ಜೀವನ ಸಾಗಿಸುತ್ತಿದ್ದರು. ಈ ನಡುವೆ ಇಂದ್ರಮ್ಮ ಗಂಡನನ್ನು ಮೂಲೆಗುಂಪು ಮಾಡಿ ತಾನೇ ಸ್ವತಃ ಅಂಗಡಿಯ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿದ್ದಳು.

ಪ್ರತಿನಿತ್ಯ ದಂಪತಿ ನಡುವೆ ಜಗಳವಾಗುತ್ತಿತ್ತು. ಗ್ರಾಮದ ಹಿರಿಯರು ರಾಜಿ ಪಂಚಾಯಿತಿ ಮಾಡಿಸಿದ್ದರು. ಈ ಮಧ್ಯೆ ಹೆಂಡತಿಯ ಉಪಟಳದಿಂದ ಬೇಸತ್ತಿದ್ದ ದೇಸೀಗೌಡ ಇಬ್ಬರು ಜೀವಂತವಾಗಿರಬಾರದು ಎಂಬ ನಿಧಾರಕ್ಕೆ ಬಂದು ಇಂದ್ರಮ್ಮ ಮಲಗಿದ್ದ ವೇಳೆ ಚಾಕುವಿನಿಂದ ಕತ್ತು ಕೊಯ್ದು ನಂತರ ತಾನೂ ಜಮೀನಿನಲ್ಲಿ ನೇಣಿಗೆ ಶರಣಾಗಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಕೋಡಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?