ಕಾವೇರಿ ತೀರ್ಥೋದ್ಭವ (ಸಂಗ್ರಹ ಚಿತ್ರ) 
ರಾಜ್ಯ

ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವ: ಕಣ್ತುಂಬಿಕೊಂಡ ಭಕ್ತಾದಿಗಳು 

ತುಲಾ ಸಂಕ್ರಮಣದ ದಿನ (ಅ.17 ರಂದು) ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವವಾಗಿದ್ದು ಭಕ್ತಾದಿಗಳು ಅಪರೂಪದ ಕ್ಷಣವನ್ನು ಕಣ್ತುಂಬಿಕೊಂಡಿದ್ದಾರೆ.

ಕೊಡಗು: ತುಲಾ ಸಂಕ್ರಮಣದ ದಿನ (ಅ.17 ರಂದು) ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವವಾಗಿದ್ದು ಭಕ್ತಾದಿಗಳು ಅಪರೂಪದ ಕ್ಷಣವನ್ನು ಕಣ್ತುಂಬಿಕೊಂಡಿದ್ದಾರೆ.

ಮಕರ ಲಗ್ನದಲ್ಲಿ ಬ್ರಹ್ಮಕುಂಡಿಕೆಯಲ್ಲಿ ಕಾವೇರಿ ತೀರ್ಥೋದ್ಭವಾಗಿದ್ದು, ಇದಕ್ಕೂ ಮುನ್ನ ಅರ್ಚಕ ಗುರುರಾಜಾಚಾರ್ ನೇತೃತ್ವದಲ್ಲಿ 6 ಮಂದಿ ಅರ್ಚಕರು ಬ್ರಹ್ಮಕುಂಡಿಕೆಗೆ ಪೂಜೆ ಸಲ್ಲಿಸಿದ್ದರು.

ಮಧ್ಯಾಹ್ನ 1:11 ಕ್ಕೆ ಕಾವೇರಿ ಉದ್ಭವಾಗಿದ್ದು ಸಹಸ್ರಾರು ಮಂದಿ ತೀರ್ಥ ಪಡೆದು ಪುನೀತರಾಗಿದ್ದಾರೆ. ಕೋವಿಡ್-19 ನಿರ್ಬಂಧದ ನಡುವೆಯೂ ಕಾವೇರಿ ತೀರ್ಥೋದ್ಭವವನ್ನು ಕಣ್ತುಂಬಿಕೊಳ್ಳುವುದಕ್ಕೆ ನೆರೆದಿದ್ದರು.

ಕಾವೇರಿ ತೀರ್ಥೋದ್ಭವದ ಹಿನ್ನೆಲೆಯಲ್ಲಿ ಹಲವಾರು ಭಕ್ತಾದಿಗಳು ಸಂಗಮದಲ್ಲಿ ಸ್ನಾನ ಮಾಡಿದರು. ಬ್ರಹ್ಮಕುಂಡಿಕೆಯಲ್ಲಿ ತೀರ್ಥೋದ್ಭವಾಗುತ್ತಿದ್ದಂತೆಯೇ ತೀರ್ಥವನ್ನು ಭಕ್ತಾದಿಗಳಿಗೆ ಪ್ರೋಕ್ಷಣೆ ಮಾಡಿ ಸಂಭ್ರಮಿಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

SCROLL FOR NEXT