ಸಂಗ್ರಹ ಚಿತ್ರ 
ರಾಜ್ಯ

ಹುಬ್ಬಳ್ಳಿ: ಮತಾಂತರ ಆರೋಪ, ಪ್ರತಿಭಟನೆ ಬಳಿಕ ಓರ್ವನ ಬಂಧನ

ಕ್ರೈಸ್ತ ಧರ್ಮಕ್ಕೆ ಮತಾಂತರಗೊಳ್ಳುವಂತೆ ಪ್ರಚೋದನೆ ನೀಡಿದ್ದಾನೆಂಬ ಆರೋಪ ಮೇಲೆ ವ್ಯಕ್ತಿಯೋರ್ವನನ್ನು ಹುಬ್ಬಳ್ಳಿ ಪೊಲೀಸರು ಸೋಮವಾರ ಬಂಧನಕ್ಕೊಳಪಡಿಸಿದ್ದಾರೆ.

ಹುಬ್ಬಳ್ಳಿ: ಕ್ರೈಸ್ತ ಧರ್ಮಕ್ಕೆ ಮತಾಂತರಗೊಳ್ಳುವಂತೆ ಪ್ರಚೋದನೆ ನೀಡಿದ್ದಾನೆಂಬ ಆರೋಪ ಮೇಲೆ ವ್ಯಕ್ತಿಯೋರ್ವನನ್ನು ಹುಬ್ಬಳ್ಳಿ ಪೊಲೀಸರು ಸೋಮವಾರ ಬಂಧನಕ್ಕೊಳಪಡಿಸಿದ್ದಾರೆ. 

ಸೋಮು ಅವರಾಧಿ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆಂದು ತಿಳಿದುಬಂದಿದೆ. ನವನಗರದ ಚರ್ಚ್ ನಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರ ನಡೆಸಲಾಗಿದೆ ಎಂದು ಆರೋಪಿಸಲಾಗಿತ್ತು. 

ಕ್ರಿಶ್ಚಿಯನ್ ಆಗಿ ಮತಾಂತರಗೊಂಡ ಬಳಿಕ ಸಾಕಷ್ಟು ಹಣ ಗಳಿಸಿರುವುದಾಗಿ ವಿಶ್ವನಾಥ್ ಬೂದೂರ್ ಎಂಬ ವ್ಯಕ್ತಿಗೆ ತಿಳಿಸಿದ್ದ ಸೋಮು, ಮತಾಂತರಗೊಳ್ಳುವಂತೆ ಪ್ರಚೋದಿಸಿದ್ದ. ಬಳಿಕ ವ್ಯಕ್ತಿಯನ್ನು ಭೈರಿದೇವರಕೊಪ್ಪದಲ್ಲಿರುವ ಪ್ರಾರ್ಥನಾ ಮಂದಿರಕ್ಕೆ ಬರುವಂತೆ ತಿಳಿಸಿದ್ದ. ಈ ಬಗ್ಗೆ ಮಾಹಿತಿ ತಿಳಿದ ಹಿಂದೂಪರ ಸಂಘಟನೆಗಳು ಚರ್ಚ್'ಗೆ ತೆರಳಿ ಆಕ್ರೋಶ ವ್ಯಕ್ತಪಡಿಸಿದ್ದರು. ನಂತರ ವಿಶ್ವ ಹಿಂದೂ ಪರಿಷತ್, ಭಜರಂಗದಳ ಹಾಗೂ ಲಿಂಗಾಯತ ಸಮುದಾಯದ ಪ್ರಮುಖರ ನೇತೃತ್ವದಲ್ಲಿ ನವನಗರದ ಬಳಿ ರಸ್ತೆ ತಡೆ ನಡೆದಿತ್ತು.

ಇದಾದ ಬಳಿಕ ತಡರಾತ್ರಿಯ ತನಕ ನವನಗರದ ಎಪಿಎಂಸಿ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ಮಾಡಲಾಗಿತ್ತು. ಶಾಸಕ ಅರವಿಂದ ಬೆಲ್ಲದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಅವರಾಧಿ ಬಂಧನಕ್ಕೆ ಪಟ್ಟು ಹಿಡಿಯಲಾಗಿತ್ತು. 

ಪೊಲೀಸ್ ಕಮಿಷನರ್ ಲಾಬೂ ರಾಮ್ ಕಾನೂನು ಕ್ರಮದ ಭರವಸೆ ನೀಡಿದ ನಂತರ ಪ್ರತಿಭಟನೆ ವಾಪಸ್ ಪಡೆಯಲಾಗಿತ್ತು. ಬಳಿಕ ಸೋಮು ಅವರಾಧಿಯನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

SCROLL FOR NEXT