ಆರಗ ಜ್ಞಾನೇಂದ್ರ 
ರಾಜ್ಯ

ಸಿನಿಮಾ ಹಿಂದಿನ ಕಷ್ಟ ಗೊತ್ತರಲಿಲ್ಲ: ಮಾನಸಿಕರು ನೈತಿಕ ಪೊಲೀಸ್‌ಗಿರಿ ಮಾಡುತ್ತಾರೆ - ಆರಗ ಜ್ಞಾನೇಂದ್ರ

ಬೆಳಗಾವಿಯಲ್ಲಿ ನಡೆದ ನೈತಿಕ ಪೊಲೀಸ್‌ಗಿರಿಯಂತಹ ಘಟನೆಯನ್ನು ಖಂಡಿಸಿರುವ  ಗೃಹಸಚಿವ ಅರಗ ಜ್ಞಾನೇಂದ್ರ,ಮಾನಸಿಕ ಅಸ್ವಸ್ಥತೆಯಿರುವವರು ಇಂತಹ ಘಟನೆಗೆ ಕೈ ಹಾಕುತ್ತಾರೆ ಎಂದಿದ್ದಾರೆ.

ಬೆಂಗಳೂರು: ಬೆಳಗಾವಿಯಲ್ಲಿ ನಡೆದ ನೈತಿಕ ಪೊಲೀಸ್‌ಗಿರಿಯಂತಹ ಘಟನೆಯನ್ನು ಖಂಡಿಸಿರುವ  ಗೃಹಸಚಿವ ಅರಗ ಜ್ಞಾನೇಂದ್ರ,ಮಾನಸಿಕ ಅಸ್ವಸ್ಥತೆಯಿರುವವರು ಇಂತಹ ಘಟನೆಗೆ ಕೈ ಹಾಕುತ್ತಾರೆ ಎಂದಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಆರಗ ಜ್ಞಾನೇಂದ್ರ,ಈ ರೀತಿಯ ಘಟನೆಗಳನ್ನು ನಾವು ಸಹಿಸುವುದಿಲ್ಲ.ಬೆಳಗಾವಿ ಘಟನೆಗಳ ಬಗ್ಗೆ ಪೊಲೀಸರು ತನಿಖೆ ಮಾಡ್ತಿದ್ದಾರೆ ಅಲ್ಲದೆ ಒಬ್ಬನನ್ನಿ ಬಂಧಿಸಿದ್ದಾರೆ.ಪೊಲೀಸರು ಈ ವಿಚಾರವಾಗಿ ಕ್ರಮ ಕೈಗೊಳ್ಳುತ್ತಾರೆ.ಯಾವುದೇ ಧರ್ಮದವರಾಗಿದ್ದರೂ ಅವರಿಗೆ  ಶಿಕ್ಷೆ ಆಗುತ್ತದೆ.ಕೆಲವರು  ಮಾನಸಿಕವಾಗಿ ಆ‌‌ ರೀತಿ ಇರುತ್ತಾರೆ.ಪೊಲೀಸರು ತನಿಖೆ ಮಾಡಿ ಸೂಕ್ತ ಕ್ರಮ ಕೈಗೊಂಡಾಗ ಇಂತಹ ಘಟನೆಗಳು ಕಡಿಮೆ ಆಗುತ್ತವೆ ಎಂದರು.

ಪೊಲೀಸರು ಅನುಮತಿ ನೀಡುವಾಗ ಕಿರಿಕಿರಿ ಮಾಡಬೇಡದೇ ಅನುಮತಿ ನೀಡುವಾಗ ಅಗತ್ಯ ಕ್ರಮಗಳ ಬಗ್ಗೆ ತಿಳಿಸಿ.ಹಣದ ವ್ಯವಹಾರ ಇಲ್ಲಿ ನಡೆಯೋದು ಬೇಡ.ಎಲ್ಲವನ್ನು ನಿಭಾಯಿಸಿಕೊಂಡು ಕೆಲಸ ಮಾಡಬೇಕು ಎಂದು ಪೊಲೀಸರಿಗೆ ಗೃಹಸಚಿವರು ಸಲಹೆ ನೀಡಿದರು.

ಸಿನಿಮಾ ಹಿಂದಿನ ಕಷ್ಟ ಗೊತ್ತಿರಲಿಲ್ಲ
ಬೆಂಗಳೂರು: ತಮಗೆ ಸಿನಿಮಾ ನೋಡಿ ಮನರಂಜನೆ ಖುಷಿಪಟ್ಟಿದ್ದು ಗೊತ್ತೇ ವಿನಃ ಸಿನಿಮಾ ನಿರ್ಮಾಣದ ಹಿಂದಿನ‌ ಕಷ್ಟ ಗೊತ್ತಿರಲಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.

ಪೈರಸಿ ಹಾವಳಿಗೆ ಸಿನಿಮಾ ಉದ್ಯಮ ತತ್ತರಿಸುತ್ತಿದ್ದು,ಪೈರಸಿ ಹಾವಳಿ ತಡೆಗೆ ಗೃಹ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗುವುದಾಗಿ‌ ಭರವಸೆ ನೀಡಿದೆ. 

ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಕಚೇರಿಗೆ ಭೇಟಿ ನೀಡಿ, ಮಂಡಳಿಯ ಪದಾಧಿಕಾರಿಗಳ ಜತೆ, ಕನ್ನಡ ಸಿನೆಮಾ ಇಂಡಸ್ಟ್ರಿ ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಪರಿಹಾರೋಪಾಯಗಳ ಬಗ್ಗೆ ಚರ್ಚೆ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT