ರಾಜ್ಯ

ಉತ್ತರಾಖಂಡ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರದ ಸಹಾಯವಾಣಿ ಆರಂಭ

Lingaraj Badiger

ಬೆಂಗಳೂರು: ಉತ್ತರಾಖಂಡದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಪ್ರವಾಹ ಪರಿಸ್ಥಿತಿ ಮತ್ತೆ ತಲೆ ದೋರಿದ್ದು. ಪ್ರವಾಹದಲ್ಲಿ ಸಿಲುಕಿದ   ಕರ್ನಾಟಕದ ಜನರ ಸಹಾಯಕ್ಕೆ ರಾಜ್ಯ ಸರ್ಕಾರ ಸಹಾಯವಾಣಿ ಸ್ಥಾಪಿಸಿದೆ.

ಈ ಕುರಿತು ರಾಜ್ಯ ಸರ್ಕಾರ ಪ್ರಕಟಣೆ  ಹೊರಡಿಸಿದ್ದು, 'ಉತ್ತರಾಖಂಡದ ಪ್ರವಾಹದಲ್ಲಿ ಜನರು, ಪ್ರಯಾಣಿಕರು, ಯಾತ್ರಿಕರು, ಪ್ರವಾಸಿಗರು ಮತ್ತು ಸಂದರ್ಶಕರು ಸಿಲುಕಿಕೊಂಡಿದ್ದರೆ ಅವರ ಸಂಬಂಧಿಕರು, ಸ್ನೇಹಿತರು ಈ ಹೆಲ್ಪ್‌ ಡೆಸ್ಕ್‌ ಸಂಪರ್ಕಿಸಿ ಮಾಹಿತಿ ನೀಡಬಹುದು ಎಂದು ಕಂದಾಯ ಸಚಿವ ಆರ್‌. ಅಶೋಕ್‌ ಅವರು ಹೇಳಿದ್ದಾರೆ.

ಉತ್ತರಾಖಂಡದಲ್ಲಿ ಸಿಲುಕಿರುವ ಕನ್ನಡಿಗರು ಅಥವಾ ಅವರ ಸಂಬಂಧಿಕರು ಈ ಸಹಾಯವಾಣಿಯನ್ನು ಸಂಪರ್ಕಿಸಬಹುದು ಮತ್ತು ಉತ್ತರಾಖಂಡದ​ ನೆರೆಯಲ್ಲಿ ಸಿಲುಕಿರುವವರ ಬಗ್ಗೆ ಮಾಹಿತಿ ನೀಡಬಹುದು. ಅದನ್ನು ಅಲ್ಲಿನ ಅಧಿಕಾರಿಗಳಿಗೆ ಮತ್ತು ಸಂಬಂಧಪಟ್ಟವರಿಗೆ ಕಾರ್ಯಾಚರಣೆಗೆ ಸಹಾಯವಾಗುವಂತೆ ಕಳುಹಿಸಿಕೊಡಲಾಗುತ್ತದೆ. ಕೂಡಲೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕದ ತುರ್ತು ಸಹಾಯವಾಣಿ ಸಂಖ್ಯೆ: 080 – 1070 (Toll Free) ಮತ್ತು 080 – 2234 0676 -ಈ ಸಂಖ್ಯೆಯು ದಿನದ ಎಲ್ಲಾ ಸಮಯದಲ್ಲಿ ಕಾರ್ಯನಿರ್ವಹಿಸುತ್ತದೆ ಎಂದು ಮಾಹಿತಿ ನೀಡಲಾಗಿದೆ.

SCROLL FOR NEXT