ಸಿಎಂ ಬೊಮ್ಮಾಯಿ 
ರಾಜ್ಯ

ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಇನ್ನೂ ನಿರ್ಧಾರ ಕೈಗೊಂಡಿಲ್ಲ: ಸಿಎಂ ಬೊಮ್ಮಾಯಿ

ಬೆಳಗಾವಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಇನ್ನೂ ಅಂತಿಮ ನಿರ್ಧಾರಗಳನ್ನು ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಹೇಳಿದ್ದಾರೆ. 

ಬೆಳಗಾವಿ: ಬೆಳಗಾವಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಇನ್ನೂ ಅಂತಿಮ ನಿರ್ಧಾರಗಳನ್ನು ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಹೇಳಿದ್ದಾರೆ. 

ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಕನ್ನಡಪರ ಸಂಘಟನೆಗಳ ಒತ್ತಾಯ ವಿಚಾರ ಗಮನಕ್ಕೆ ಬಂದಿದೆ. ಈ ಬಗ್ಗೆ ಶೀಘ್ರವೇ ತಜ್ಞರ ಜೊತೆ ಚರ್ಚೆ ನಡೆಸಿ ತೀರ್ಮಾನ ಮಾಡುತ್ತೇವೆಂದು ಹೇಳಿದ್ದಾರೆ.

ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬರುತ್ತಿದೆ. ಆದರೆ ಮೆರವಣಿಗೆಗಳ ಬಗ್ಗೆ ಇನ್ನೂ ಅಂತಿಮ ತೀರ್ಮಾನವಾಗಿಲ್ಲ ಎಂದು ತಿಳಿಸಿದ್ದಾರೆ. 

ಬಳಿಕ ಉಪಚುನಾವಣೆ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಬಹುಮತದಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ನಿನ್ನೆ ಸಿಂದಗಿಯಲ್ಲಿ ಪ್ರಚಾರ ಮಾಡಿ, ಇವತ್ತು ಬೆಂಗಳೂರು ಹೋಗುತ್ತಿದ್ದೇನೆ. ವಾಲ್ಮೀಕಿ ಜಯಂತಿಯಲ್ಲಿ ಪಾಲ್ಗೊಂಡು ಇಂದು ಸಂಜೆ ಹಾನಗಲ್‌ಗೆ ವಾಪಸ್ ಆಗಲಿದ್ದೇನೆ. ಮೂರು ದಿನಗಳ ಕಾಲ ಹಾನಗಲ್​ನಲ್ಲಿ ಉಳಿದುಕೊಂಡು ಪ್ರಚಾರ ಮಾಡುತ್ತೇನೆ. 23ರಂದು ಬೆಳಗಾವಿಗೆ ಬಂದು ಕಿತ್ತೂರು ಚೆನ್ನಮ್ಮ ಉತ್ಸವದಲ್ಲಿ ಭಾಗಿಯಾಗುತ್ತೇನೆ ಎಂದರು.

ಮುಂಬೈ ಕರ್ನಾಟಕ ಭಾಗವನ್ನು ಕಿತ್ತೂರು ಕರ್ನಾಟಕ ಎಂದು ಮರುನಾಮಕರಣ ಸಂಬಂಧ ಸಂಪುಟ ಸಭೆಯಲ್ಲಿ ತೀರ್ಮಾನ ಆಗಬೇಕು ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT