ಬಸವರಾಜ ಬೊಮ್ಮಾಯಿ 
ರಾಜ್ಯ

ಕೇರಳದಲ್ಲಿ ಮಳೆಯಿಂದ ಅಪಾರ ಹಾನಿ: ಪಿಣರಾಯಿ ವಿಜಯನ್ ಗೆ ಸಿಎಂ ಕರೆ, ಪರಿಹಾರ ಕಾರ್ಯಾಚರಣೆಗೆ ನೆರವಿನ ಭರವಸೆ

ನೆರೆ ರಾಜ್ಯ ಕೇರಳದಲ್ಲಿ ಧಾರಾಕಾರ ಮಳೆಯಿಂದಾಗಿ ಪ್ರವಾಹ ಸೃಷ್ಟಿಯಾಗಿದ್ದು ಭಾರೀ ಪ್ರಮಾಣದಲ್ಲಿ ಹಾನಿ ಉಂಟಾಗುತ್ತಿದೆ.

ಬೆಂಗಳೂರು: ನೆರೆ ರಾಜ್ಯ ಕೇರಳದಲ್ಲಿ ಧಾರಾಕಾರ ಮಳೆಯಿಂದಾಗಿ ಪ್ರವಾಹ ಸೃಷ್ಟಿಯಾಗಿದ್ದು ಭಾರೀ ಪ್ರಮಾಣದಲ್ಲಿ ಹಾನಿ ಉಂಟಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಅಲ್ಲಿ ಪ್ರವಾಹ ಮತ್ತು ಭೂಕುಸಿತದಿಂದ ಸಂಭವಿಸಿರುವ ಹಾನಿಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದರು.

ಕೇರಳದಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆಗೆ ಎಲ್ಲ ರೀತಿಯಿಂದಲೂ ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು. ಈ ಬಗ್ಗೆ ಕೇರಳ ಸರ್ಕಾರದ ಮುಖ್ಯ ಕಾರ್ಯದರ್ಶಿ ಯಾರೊಂದಿಗೆ ಸಂಪರ್ಕದಲ್ಲಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ತಿಳಿಸಿದ್ದಾರೆ. ಕೇರಳ ಜನರ ಸುರಕ್ಷತೆಗಾಗಿ ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ಟ್ವೀಟ್ ಮಾಡಿದ್ದಾರೆ.

ಕೇರಳದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಪ್ರಮಾಣದಲ್ಲಿ ಮಳೆ, ಪ್ರವಾಹ ಹಾಗೂ ಭೂಕುಸಿತ ಉಂಟಾಗುತ್ತಿದೆ. ಪ್ರವಾಹದಿಂದಾಗಿ ಪ್ರಾಣ ಹಾನಿ ಆಸ್ತಿ ಪಾಸ್ತಿ ಹಾನಿ ಉಂಟಾಗಿದೆ. ಕೇರಳದಲ್ಲಿ ಭೂ ಕುಸಿತದಿಂದ ಮೃತಪಟ್ಟವರ ಸಂಖ್ಯೆ 27ಕ್ಕೆ ಏರಿಕೆಯಾಗಿದ್ದು ಆತಂಕ ಸೃಷ್ಟಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!