ಬಸವರಾಜ ಬೊಮ್ಮಾಯಿ 
ರಾಜ್ಯ

ಕೇರಳದಲ್ಲಿ ಮಳೆಯಿಂದ ಅಪಾರ ಹಾನಿ: ಪಿಣರಾಯಿ ವಿಜಯನ್ ಗೆ ಸಿಎಂ ಕರೆ, ಪರಿಹಾರ ಕಾರ್ಯಾಚರಣೆಗೆ ನೆರವಿನ ಭರವಸೆ

ನೆರೆ ರಾಜ್ಯ ಕೇರಳದಲ್ಲಿ ಧಾರಾಕಾರ ಮಳೆಯಿಂದಾಗಿ ಪ್ರವಾಹ ಸೃಷ್ಟಿಯಾಗಿದ್ದು ಭಾರೀ ಪ್ರಮಾಣದಲ್ಲಿ ಹಾನಿ ಉಂಟಾಗುತ್ತಿದೆ.

ಬೆಂಗಳೂರು: ನೆರೆ ರಾಜ್ಯ ಕೇರಳದಲ್ಲಿ ಧಾರಾಕಾರ ಮಳೆಯಿಂದಾಗಿ ಪ್ರವಾಹ ಸೃಷ್ಟಿಯಾಗಿದ್ದು ಭಾರೀ ಪ್ರಮಾಣದಲ್ಲಿ ಹಾನಿ ಉಂಟಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಅಲ್ಲಿ ಪ್ರವಾಹ ಮತ್ತು ಭೂಕುಸಿತದಿಂದ ಸಂಭವಿಸಿರುವ ಹಾನಿಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದರು.

ಕೇರಳದಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆಗೆ ಎಲ್ಲ ರೀತಿಯಿಂದಲೂ ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು. ಈ ಬಗ್ಗೆ ಕೇರಳ ಸರ್ಕಾರದ ಮುಖ್ಯ ಕಾರ್ಯದರ್ಶಿ ಯಾರೊಂದಿಗೆ ಸಂಪರ್ಕದಲ್ಲಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ತಿಳಿಸಿದ್ದಾರೆ. ಕೇರಳ ಜನರ ಸುರಕ್ಷತೆಗಾಗಿ ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ಟ್ವೀಟ್ ಮಾಡಿದ್ದಾರೆ.

ಕೇರಳದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಪ್ರಮಾಣದಲ್ಲಿ ಮಳೆ, ಪ್ರವಾಹ ಹಾಗೂ ಭೂಕುಸಿತ ಉಂಟಾಗುತ್ತಿದೆ. ಪ್ರವಾಹದಿಂದಾಗಿ ಪ್ರಾಣ ಹಾನಿ ಆಸ್ತಿ ಪಾಸ್ತಿ ಹಾನಿ ಉಂಟಾಗಿದೆ. ಕೇರಳದಲ್ಲಿ ಭೂ ಕುಸಿತದಿಂದ ಮೃತಪಟ್ಟವರ ಸಂಖ್ಯೆ 27ಕ್ಕೆ ಏರಿಕೆಯಾಗಿದ್ದು ಆತಂಕ ಸೃಷ್ಟಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

ಬಿಜೆಪಿ ನಿಯೋಗದಿಂದ ರಾಜ್ಯಪಾಲರ ಭೇಟಿ: 'ದ್ವೇಷ ಭಾಷಣ ತಡೆ' ಮಸೂದೆಗೆ ಅಂಕಿತ ಹಾಕದಂತೆ ಮನವಿ!

SCROLL FOR NEXT