ಸಂಗ್ರಹ ಚಿತ್ರ 
ರಾಜ್ಯ

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿ ಮೋಹನ್ ನಾಯಕ್ ವಿರುದ್ಧ ಕೋಕಾ ಕಾಯ್ದೆ ಮರುಸ್ಥಾಪಿಸಿದ 'ಸುಪ್ರೀಂ'

ಖ್ಯಾತ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಮೋಹನ್ ನಾಯಕ್ ವಿರುದ್ಧ ಸೆಪ್ಟೆಂಬರ್ 8, 2021ರಂದು ಹಿಂದಕ್ಕೆ ಪಡೆಯಲಾಗಿದ್ದ 'ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (KCOCA) ಅಡಿಯಲ್ಲಿ ಆರೋಪಗಳನ್ನು ಸುಪ್ರೀಂ ಕೋರ್ಟ್ ಗುರುವಾರ ಮರುಸ್ಥಾಪಿಸಿದೆ.

ನವದೆಹಲಿ: ಖ್ಯಾತ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಮೋಹನ್ ನಾಯಕ್ ವಿರುದ್ಧ ಸೆಪ್ಟೆಂಬರ್ 8, 2021ರಂದು ಹಿಂದಕ್ಕೆ ಪಡೆಯಲಾಗಿದ್ದ 'ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (KCOCA) ಅಡಿಯಲ್ಲಿ ಆರೋಪಗಳನ್ನು ಸುಪ್ರೀಂ ಕೋರ್ಟ್ ಗುರುವಾರ ಮರುಸ್ಥಾಪಿಸಿದೆ.

ಗೌರಿ ಲಂಕೇಶ್ ಅವರ ಸಹೋದರಿ ಕವಿತಾ ಲಂಕೇಶ್ ಸಲ್ಲಿಸಿದ ಮೇಲ್ಮನವಿಗೆ ಅನುಮತಿ ನೀಡಿ, ನ್ಯಾಯಮೂರ್ತಿಗಳಾದ ಎಎಂ ಖಾನ್ವಿಲ್ಕರ್, ದಿನೇಶ್ ಮಹೇಶ್ವರಿ ಮತ್ತು ಸಿಟಿ ರವಿಕುಮಾರ್ ಅವರನ್ನೊಳಗೊಂಡ ನ್ಯಾಯಪೀಠವು ಮೋಹನ್ ನಾಯಕ್ ವಿರುದ್ಧ ಕೆಸಿಒಸಿಎ (ಕೋಕಾ) ಆರೋಪಗಳನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ನ ತೀರ್ಪನ್ನು ರದ್ದುಗೊಳಿಸಿತು.

ಸೆಪ್ಟೆಂಬರ್ 21, 2021 ರಂದು ಸುಪ್ರೀಂ ಕೋರ್ಟ್ ಹಿರಿಯ ವಕೀಲ ಹುಝಾಫಾ ಅಹ್ಮದಿ ಅವರ ವಿವರವಾದ ಸಲ್ಲಿಕೆ ಮತ್ತು ವಾದಗಳನ್ನು ಆಲಿಸಿದ ನಂತರ ಕೋರ್ಟ್ ತನ್ನ ಆದೇಶಗಳನ್ನು ಕಾಯ್ದಿರಿಸಿತ್ತು. 

'ನ್ಯಾಯಾಲಯದ ಮುಂದೆ ಸಲ್ಲಿಸಿದ ಅರ್ಜಿಯು ನ್ಯಾಯಾಲಯದ ಮುಂದೆ ಪರಿಗಣನೆಗೆ ಬಂದಿರುವ ಸಣ್ಣ ಪ್ರಶ್ನೆ ಏನೆಂದರೆ ಸೆಕ್ಷನ್ 24 (1) ಅಡಿಯಲ್ಲಿ ನೀಡಲಾದ ಅನುಮೋದನೆಗೆ ಸಂಬಂಧಿಸಿದೆ.  ಮತ್ತು KCOCA ಕಾಯ್ದೆ ಮತ್ತು ಅದರ ಮೇಲೆ ತೆಗೆದುಕೊಳ್ಳಲಾದ ಅರಿವು ಮತ್ತು ಆರೋಪಪಟ್ಟಿ ಸಲ್ಲಿಸಲಾಗಿದೆ. ಆರೋಪಿಗೆ ಸಂಬಂಧಪಟ್ಟಂತೆ ಈ ಕಾಯಿದೆಯು ಅನ್ವಯವಾಗುವುದಿಲ್ಲ ಎಂದು ಹೈಕೋರ್ಟ್ ಒಂದು ದೃಷ್ಟಿಕೋನವನ್ನು ತೆಗೆದುಕೊಂಡಿದೆ, ಆದರೆ ನ್ಯಾಯಾಲಯವು KCOCA ಅನ್ವಯಿಸುವುದಿಲ್ಲ ಎಂಬ ತೀರ್ಮಾನಕ್ಕೆ ಬರುವಲ್ಲಿ ತಪ್ಪಾಗಿದೆ ಎಂದು ವಾದ ಮಂಡಿಸಿದ್ದರು. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

Siddaramaiah ರಾಜಿನಾಮೆ: 'ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ': BC ಪಾಟೀಲ್ ಭಾವುಕ

ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ- ಬಿಜೆಪಿ

SCROLL FOR NEXT