ವಿಠಲ ಮಲೆಕುಡಿಯ 
ರಾಜ್ಯ

ನಕ್ಸಲ್ ನಂಟು ಪ್ರಕರಣ: ಪತ್ರಕರ್ತ ವಿಠಲ ಮಲೆಕುಡಿಯ, ಆತನ ತಂದೆ ಲಿಂಗಣ್ಣ ಮಲೆಕುಡಿಯ ಖುಲಾಸೆ

2012 ರಲ್ಲಿ ನಕ್ಸಲರೊಂದಿಗೆ ನಂಟು ಹೊಂದಿದ ಆರೋಪದ ಮೇಲೆ ನಕ್ಸಲ್ ನಿಗ್ರಹ ಪಡೆ (ಎಎನ್ಎಫ್)ಯಿಂದ ಬಂಧನಕ್ಕೊಳಗಾಗಿದ್ದ ಪತ್ರಕರ್ತ ವಿಠಲ ಮಲೆಕುಡಿಯ ಮತ್ತು ಅವರ ತಂದೆ ಲಿಂಗಣ್ಣ ಮಲೆಕುಡಿಯ...

ಮಂಗಳೂರು: 2012 ರಲ್ಲಿ ನಕ್ಸಲರೊಂದಿಗೆ ನಂಟು ಹೊಂದಿದ ಆರೋಪದ ಮೇಲೆ ನಕ್ಸಲ್ ನಿಗ್ರಹ ಪಡೆ (ಎಎನ್ಎಫ್)ಯಿಂದ ಬಂಧನಕ್ಕೊಳಗಾಗಿದ್ದ ಪತ್ರಕರ್ತ ವಿಠಲ ಮಲೆಕುಡಿಯ ಮತ್ತು ಅವರ ತಂದೆ ಲಿಂಗಣ್ಣ ಮಲೆಕುಡಿಯ ಅವರನ್ನು ಮಂಗಳೂರಿನ ನ್ಯಾಯಾಲಯ ಗುರುವಾರ ಖುಲಾಸೆಗೊಳಿಸಿದೆ.

ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಮೂರನೇ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶ ಬಿ ಬಿ ಜಕಾತಿ ಇಂದು ಖುಲಾಸೆಗೊಳಿಸಿ ತೀರ್ಪು ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಟ್ಲೂರು ನಿವಾಸಿಗಳಾದ ವಿಠ್ಠಲ ಮಲೆಕುಡಿಯ ಮತ್ತು ಆತನ ತಂದೆ ಲಿಂಗಣ್ಣ ಮಲೆಕುಡಿಯ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

ವಿಠಲನನ್ನು ಮಾರ್ಚ್ 3, 2012 ರಂದು ಎಎನ್‌ಎಫ್ ಬಂಧಿಸಿತ್ತು ಮತ್ತು ಪೊಲೀಸರು ಸಲ್ಲಿಸಿದ ಚಾರ್ಜ್‌ಶೀಟ್‌ನಲ್ಲಿ ವಿಠಲನನ್ನು 6ನೇ ಮತ್ತು ಆತನ ತಂದೆ ಲಿಂಗಣ್ಣನನ್ನು ಪ್ರಕರಣದ 7ನೇ ಆರೋಪಿಯನ್ನಾಗಿ ಮಾಡಲಾಗಿತ್ತು.

ಬಂಧಿಸಿದ್ದ ಸಮಯದಲ್ಲಿ ವಿಠಲ ಮಲೆಕುಡಿಯ ಅವರು ಮಂಗಳೂರು ವಿವಿಯ ಪತ್ರಿಕೋದ್ಯಮ ವಿದ್ಯಾರ್ಥಿಯಾಗಿದ್ದರು. ಜೈಲಿನಲ್ಲಿದ್ದ ಸಮಯದಲ್ಲಿ ಪರೀಕ್ಷೆಗೆ ಹಾಜರುಪಡಿಸಿದ್ದ ಪೊಲೀಸರು, ಕೈಕೊಳ ತೊಟ್ಟು ಪರೀಕ್ಷೆ ಬರೆಯುವಂತೆ ಮಾಡಿದ್ದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಏನೇ ಆದ್ರೂ, ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT