ರಾಜ್ಯ

ಬಾಗಲಕೋಟೆ: ಕಲ್ಲಿಗೆ ಡಿಕ್ಕಿ ಹೊಡೆದು ಕಾಲುವೆಗೆ ಉರುಳಿದ ಕಾರು; ನಾಲ್ವರ ದುರ್ಮರಣ

Shilpa D

ಬಾಗಲಕೋಟೆ : ಘಟಪ್ರಭಾ ನದಿಯ ಕಾಲುವೆಗೆ ಕಾರೊಂದು ಉರುಳಿ ಬಿದ್ದ ಪರಿಣಾಮ, ಕಾರಿನಲ್ಲಿದ್ದ ಆರು ಜನರ ಪೈಕಿ, ನಾಲ್ವರು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಹಲಕಿ ಗ್ರಾಮದ ಬಳಿ ನಡೆದಿದೆ.

ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಮಹದೇವ ಗೌಡ, ಎರಿತಾತ, ವಿಜಯ್ ಮತ್ತು ಸುನೀಲ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಮುಧೋಳದಿಂದ ರಾಮದುರ್ಗದ ಕಡೆಗೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.

ಕಲ್ಲಿಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಕಾರು ಕಾಲುವೆಗೆ ಹಾರಿದೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಲೋಕಾಪುರ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.

SCROLL FOR NEXT