ಬಿಸಿ.ನಾಗೇಶ್ 
ರಾಜ್ಯ

ಎಲ್ಲವೂ ಸರಿಹೋದರೆ ಎಲ್ ಕೆ ಜಿ, ಯುಕೆಜಿ ಆರಂಭ: ಬಿ.ಸಿ. ನಾಗೇಶ್

1 ರಿಂದ 5 ನೇ ತರಗತಿವರೆಗಿನ ಶಾಲೆ ಆರಂಭ ನೋಡಿಕೊಂಡು, ಧೈರ್ಯ ಬಂದರೆ ಪ್ರೈಮರಿ ಎಲ್ ಕೆ ಜಿ, ಯುಕೆಜಿ ಆರಂಭ ಮಾಡುತ್ತೇವೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಶುಕ್ರವಾರ ಹೇಳಿದ್ದಾರೆ.

ಬೆಂಗಳೂರು: 1 ರಿಂದ 5 ನೇ ತರಗತಿವರೆಗಿನ ಶಾಲೆ ಆರಂಭ ನೋಡಿಕೊಂಡು, ಧೈರ್ಯ ಬಂದರೆ ಪ್ರೈಮರಿ ಎಲ್ ಕೆ ಜಿ, ಯುಕೆಜಿ ಆರಂಭ ಮಾಡುತ್ತೇವೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಶುಕ್ರವಾರ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲೆ ಆರಂಭಿಸುವ ಎಲ್ಲಾ ಪ್ರಯತ್ನದಲ್ಲಿ ನಾವು ಯಶಸ್ವಿಯಾಗಿದ್ದರೂ ಶೇ.20 ರಷ್ಟು ಇನ್ನೂ ಸಕ್ಸಸ್ ಆಗಿಲ್ಲ, ಅದನ್ನು ಪೂರ್ಣಗೊಳಿಸುತ್ತೇವೆ. ಗ್ರಾಮೀಣ ಭಾಗದಲ್ಲಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಚೆನ್ನಾಗಿದೆ.ತಾವು ಭೇಟಿ ನೀಡಿದ ಎರಡೂ ಶಾಲೆಯಲ್ಲೂ 504 ಮಕ್ಕಳ ಹಾಜರಾತಿ ಇತ್ತು. ಉತ್ತಮ ಪ್ರತಿಕ್ರಿಯೆ ಇದೆ. ಶಿಕ್ಷಣ ಇಲಾಖೆಯ ಜೊತೆ ಆರ್ ಡಿ ಪಿ ಆರ್ ಇಲಾಖೆಯ ಸಿಬ್ಬಂದಿಯನ್ನ ಬಳಸಿಕೊಂಡು ಮನೆಮನೆಗೆ ಹೋಗಿ ಮಕ್ಕಳನ್ನ ಕರೆತರುವ ಕೆಲಸ ಮಾಡುತ್ತಿದ್ದೇವೆ.ಬಹಳಷ್ಟು ಮಕ್ಕಳನ್ನು ಶಾಲೆಗೆ ಕರೆತರಲು ಯಶಸ್ವಿಯಾಗಿದ್ದೇವೆ ಎಂದು ಹೇಳಿದ್ದಾರೆ.

ದೊಡ್ಡ ಮಕ್ಕಳು ಶಾಲೆಗೆ ಬರುತ್ತಿಲ್ಲ, ಎಲ್ಲಿ ಹೋಗಿದ್ದಾರೆ ಎಂದು ತಿಳಿಯುತ್ತಿಲ್ಲ, ಅವರನ್ನ ಹುಡುಕಿ ಕರೆತರುವ ಪ್ರಯತ್ನ ಮಾಡುತ್ತೇವೆ. ಚಿಕ್ಕಮಗಳೂರಿನಲ್ಲಿ 145 ಮಕ್ಕಳು ಹೊರಗುಳಿದಿದ್ರು, 102 ಮಕ್ಕಳನ್ನ ಕರೆತಂದಿದ್ದೇವೆ ಎಂದು ತಿಳಿಸಿದರು.

ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಕೊರತೆಯಿಲ್ಲ, 6 ರಿಂದ8 ನೇ ತರಗತಿ ವರೆಗೆ ಕೊರತೆ ಇದೆ. ಅದನ್ನು ತುಂಬುವ ಕೆಲಸ ಮಾಡ್ತೇವೆ. 1 ರಿಂದ 5 ನೇ ತರಗತಿವರೆಗಿನ ಶಾಲೆ ಆರಂಭ ನೋಡಿಕೊಂಡು, ಧೈರ್ಯ ಬಂದರೆ ಪ್ರೈಮರಿ ಎಲ್ ಕೆ ಜಿ, ಯುಕೆಜಿ ಆರಂಭ ಮಾಡ್ತೇವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಸೇವ್ ದಿ ಚಿಲ್ಡ್ರನ್ಸ್ ಸಂಸ್ಥೆಯಿಂದ ಒಳ್ಳೆಯ ಪ್ರಯತ್ನ ನಡೆಯುತ್ತಿದೆ. ಶಾಲೆಯಿಂದ ಹೊರಗುಳಿದ ಮಕ್ಕಳ ಮನೆಯ ಬಳಿಯೇ ಶಾಲೆ ತೆಗೆದುಕೊಂಡು ಹೋಗುತ್ತಿದ್ದಾರೆ. ಸಂಚಾರಿ ಕಲಿಕಾ ಬಸ್ ಮೂಲಕ ಮಕ್ಕಳ ಕಲಿಕೆಗೆ ಬೇಕಾದ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಶಿಕ್ಷಣ ಇಲಾಖೆಗೆ ಸಂಪೂರ್ಣ ಸಹಕಾರ ನೀಡ್ತಿದ್ದಾರೆ. 30 ಸರ್ಕಾರಿ ಶಾಲೆ ಪಡೆದು ಅಭಿವೃದ್ಧಿಪಡಿಸುತ್ತಿದ್ದಾರೆ ಎಂದು ಇದೇ ವೇಳೆ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT