ಅಮಿರ್ ಖಾನ್ 
ರಾಜ್ಯ

ಪಟಾಕಿಗಳ ವಿರುದ್ಧ ಜಾಹೀರಾತು: ಬಾಲಿವುಡ್ ನಟ ಅಮಿರ್ ಖಾನ್ ವಿರುದ್ಧ ಸಂಸದ ಅನಂತ್ ಕುಮಾರ್ ಹೆಗಡೆ ಕಿಡಿ

ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸದಿರಿ ಎಂದು ಜಾಹೀರಾತೊಂದರಲ್ಲಿ ಬಾಲಿವುಡ್ ನಟ ಅಮೀರ್ ಖಾನ್ ಅವರು ಮನವಿ ಮಾಡಿಕೊಂಡಿರುವುದಕ್ಕೆ ಸಂಸದ ಅನಂತ್ ಕುಮಾರ್ ಹೆಗಡೆಯವರು ತೀವ್ರವಾಗಿ ಕಿಡಿಕಾರಿದ್ದಾರೆ.

ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸದಿರಿ ಎಂದು ಜಾಹೀರಾತೊಂದರಲ್ಲಿ ಬಾಲಿವುಡ್ ನಟ ಅಮೀರ್ ಖಾನ್ ಅವರು ಮನವಿ ಮಾಡಿಕೊಂಡಿರುವುದಕ್ಕೆ ಸಂಸದ ಅನಂತ್ ಕುಮಾರ್ ಹೆಗಡೆಯವರು ತೀವ್ರವಾಗಿ ಕಿಡಿಕಾರಿದ್ದಾರೆ.

ಈ ಕುರಿತು ಜಾಹೀರಾತು ಕಂಪನಿಗೆ ಪತ್ರವನ್ನು ಬರೆದಿರುವ ಅನಂತ್ ಕುಮಾರ್ ಹೆಗಡೆಯವರು, ತಮ್ಮ ಆಕ್ಷೇಪವನ್ನು ವ್ಯಕ್ತಪಡಿಸಿದ್ದಾರೆ.

ಪರಿಸರವಾದಿ, ಪ್ರಾಣಿಪ್ರೇಮಿ ಅಮೀರ್ ಖಾನ್ ಅಭಿನಯಿಸಿರುವ ಜಾಹೀರಾತು ಒಂದರಲ್ಲಿ ದೀಪಾವಳಿ ಹಬ್ಬದಲ್ಲಿ ಹಿಂದುಗಳಿಗೆ ಪಟಾಕಿ ಸಿಡಿಸದಂತೆ ಮನವಿ ಮಾಡಿದ್ದಾರೆ. ಅವರು ಪರಿಸರ ಹಾಗೂ ಪ್ರಾಣಿಗಳ ಬಗ್ಗೆ ತೋರುತ್ತಿರುವ ಕಾಳಜಿಗೆ ನನ್ನ ಮೆಚ್ಚುಗೆ! ಅದರಂತೆ ಅನ್ಯಧರ್ಮಗಳಲ್ಲಿ (ತಾನು ಪ್ರತಿಪಾದಿಸುವ ಧರ್ಮವನ್ನು ಹಿಡಿದು) ನಡೆಯುವ ಎಷ್ಟೋ ಆಚರಣೆಗಳ ಬಗ್ಗೆ ಏಕೆ ಮೌನ?

ಈ ಜಾಹಿರಾತನ್ನು ಅನಂತ ವರಧಾನ್ ಗೋಯೆಂಕ ಮಾಲೀಕತ್ವದ ಸಿಇಎಟಿ ಸಂಸ್ಥೆಯು ಪ್ರಸ್ತುತ ಪಡೆಸಿದ್ದು, ಈ ಕೂಡಲೇ ಈ ಜಾಹೀರಾತನ್ನು ಹಿಂಪಡೆಯಬೇಕು ಹಾಗೂ ಹಿಂದೂಗಳೇ ಆಗಿರುವ ಅವರು ಹಿಂದುಗಳ ಭಾವನೆಗಳಿಗೆ ಧಕ್ಕೆ ಬಾರದಂತೆ ನೋಡಿಕೊಳ್ಳಬೇಕಾಗಿ ಆಗ್ರಹಿಸುತ್ತೇನೆ ಎಂದಿದ್ದಾರೆ.

ಸಂಸದ ಅನಂತ್ ಕುಮಾರ್ ಹೆಗಡೆ ಈ ಪತ್ರವನ್ನು ತಮ್ಮ ಫೇಸ್ ಬುಕ್ ಖಾತೆಯಲ್ಲೂ ಹಂಚಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT