ಸಾಂದರ್ಭಿಕ ಚಿತ್ರ 
ರಾಜ್ಯ

ತುಮಕೂರು: ಕುಡಿದು ಶಾಲಾ ವಾಹನ ಚಾಲನೆ, ಬಸ್‌ ಪಲ್ಟಿ; 8 ವಿದ್ಯಾರ್ಥಿಗಳಿಗೆ ಗಾಯ

ಶಾಲಾ ವಾಹನ ಪಲ್ಟಿಯಾದ ಹಿನ್ನೆಲೆಯಲ್ಲಿ ಸುಮಾರು 8 ವಿದ್ಯಾರ್ಥಿಗಳು ಗಾಯಗೊಂಡಿದ್ದು 15 ಶಾಲಾ ಮಕ್ಕಳು ಅಪಾಯದಿಂದ ಪಾರಾಗಿರುವ ಘಟನೆ ಕೊರಟಗೆರೆಯಲ್ಲಿ ನಡೆದಿದೆ.

ತುಮಕೂರು: ಶಾಲಾ ವಾಹನ ಪಲ್ಟಿಯಾದ ಹಿನ್ನೆಲೆಯಲ್ಲಿ ಸುಮಾರು 8 ವಿದ್ಯಾರ್ಥಿಗಳು ಗಾಯಗೊಂಡಿದ್ದು 15 ಶಾಲಾ ಮಕ್ಕಳು ಅಪಾಯದಿಂದ ಪಾರಾಗಿರುವ ಘಟನೆ ಕೊರಟಗೆರೆಯಲ್ಲಿ ನಡೆದಿದೆ.

ಇದು ಎಸ್​ವಿಜಿ ಶಾಲೆಗೆ ಸೇರಿದ ವ್ಯಾನ್​ ಎನ್ನಲಾಗಿದ್ದು, ಗಾಯಗೊಂಡ ವಿದ್ಯಾರ್ಥಿಗಳನ್ನು ಕೊರಟಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೂವರು ಮಕ್ಕಳಿಗೆ ತಲೆಗೆ ಗಾಯವಾಗಿದ್ದು ಅಪಾಯವಿಲ್ಲ ಎಂದು  ವೈದ್ಯರು ತಿಳಿಸಿದ್ದಾರೆ. 

ಚಾಲಕ ಮದ್ಯ ಸೇವನೆ ಮಾಡಿ ಅತಿವೇಗವಾಗಿ ವಾಹನ ಚಾಲನೆ ಮಾಡುತ್ತಿದ್ದ ಎಂಬ ಆರೋಪ ಕೇಳಿಬಂದಿದ್ದು, ಬೆಳಗ್ಗೆ 11 ಗಂಟೆ ಸಮಯಕ್ಕೆ ಘಟನೆ ನಡೆದಿದೆ.

ವ್ಯಾನ್ ಬೆಳಿಗ್ಗೆ 8 ಗಂಟೆಗೆ ನಮ್ಮ ಗ್ರಾಮಕ್ಕೆ ಬರಬೇಕಿತ್ತು ಆದರೆ 10 ಗಂಟೆಗೆ ಬಂದಿತು ಮತ್ತು ಚಾಲಕ ಗೋವಿಂದ ಕುಡಿದಿದ್ದನು ಎಂದು ಮಕ್ಕಳು ಆರೋಪಿಸಿದ್ದಾರೆ.  ವ್ಯಾನ್ ಜಿಗ್ ಜಾಗ್ ರೀತಿಯಲ್ಲಿ ಚಲಿಸಲು ಪ್ರಾರಂಭಿಸಿತು ಮತ್ತು ಅಂತಿಮವಾಗಿ ಉರುಳಿ ಬಿತ್ತು.

ಆರೋಪಿ  ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಸ್ಥಳೀಯರು ಮಕ್ಕಳನ್ನು ರಕ್ಷಿಸಿದ್ದಾರೆ. ಗಾಬರಿಗೊಂಡ ಪೋಷಕರು ಆಸ್ಪತ್ರೆಗೆ ಧಾವಿಸಿದರು. ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಅಪಘಾತ ಸ್ಥಳದಿಂದ ಪರಾರಿಯಾಗಿದ್ದಾನೆ.ಘಟನೆ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT