ಸಾಂದರ್ಭಿಕ ಚಿತ್ರ 
ರಾಜ್ಯ

ಸುಸೈಡ್ ಮಾಡಿಕೊಳ್ಳುತ್ತಿರುವುದಾಗಿ ವಿಡಿಯೊ ಮಾಡಿದ್ದ ಹುಡುಗನನ್ನು ರಕ್ಷಿಸಿದ ರೈಲ್ವೇ ಪೊಲೀಸ್ ಪಡೆ

ಹುಡುಗ ದೆಹಲಿ ರೈಲಿನಲ್ಲಿ ಕುಳಿತುಕೊಂಡು ಅಳುತ್ತಿದ್ದ. ರೈಲು ಇನ್ನೇನು ಹೊರಡುವುದರಲ್ಲಿತ್ತು. ಪೊಲೀಸರು ಸ್ವಲ್ಪ ತಡ ಮಾಡಿದರೂ ಹುಡುಗ ಮತ್ತೆ ಸಿಗುತ್ತಿರಲಿಲ್ಲ.

ಬೆಂಗಳೂರು: 16 ವರ್ಷದ ಬೆಂಗಳೂರು ಮೂಲದ ಹುಡುಗನೋರ್ವ ತಂದೆಯೊಂದಿಗಿನ ಮನಸ್ತಾಪದಿಂದ ನೊಂದು ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಡಿಯೊ ಮಾಡಿದ್ದ. ಆ ವಿಡಿಯೊ ರೈಲ್ವೇ ಪೊಲೀಸ್ ಪಡೆಯ ಗಮನಕ್ಕೆ ಬಂದಿತ್ತು. 

ವಿಡಿಯೋದಲ್ಲಿದ್ದ ಸ್ಥಳವನ್ನು ಓರ್ವ ರೈಲ್ವೇ ಪೊಲೀಸ್ ಸಿಬ್ಬಂದಿ ಗುರುತು ಹಿಡಿದಿದ್ದರು. ಒಡನೆ ಕಾರ್ಯಪ್ರವೃತ್ತರಾದ ಸಿಬ್ಬಂದಿ ಕಡೆಗೂ ಆತ್ಮಹತ್ಯೆ ಮಾಡಿಕೊಳ್ಳುವುದರಲ್ಲಿದ್ದ ಹುಡುಗನನ್ನು ಪ್ರಾಣಪಾಯದಿಂದ ರಕ್ಷಿಸಿದ್ದಾರೆ. 

ವಿಡಿಯೊ ಮಾಡಿದ್ದ ಹುಡುಗ ಕೆಲ ದಿನಗಳ ಹಿಂದೆಯೇ ಮನೆ ಬಿಟ್ಟು ಬಂದಿದ್ದ. ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಢೇಳಿದ್ದ ವಿಡಿಯೋವನ್ನು ಹುಡುಗನ ಸಂಬಂಧಿಕರು ರೈಲ್ವೇ ಪೊಲೀಸ್ ಪಡೆಯ ಗಮನಕ್ಕೆ ತಂದಿದ್ದರು. ಆ ವಿಡಿಯೊ ನೋಡಿದ್ದ ಅನುಷಾ ಎಂಬ ರೈಲ್ವೇ ಪೊಲೀಸ್ ಸಿಬ್ಬಂದಿ ವಿಡಿಯೊದಲ್ಲಿರುವ ಸ್ಥಳ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ಸ್ಟೇಷನ್ ಎನ್ನುವುದನ್ನು ಪತ್ತೆ ಹಚ್ಚಿದ್ದರು. 

ನಂತರ ಕೆ.ಎಸ್ ಆರ್ ರೈಲ್ವೇ ಪೊಲೀಸ್ ಪಡೆಗೆ ಮಾಹಿತಿ ರವಾನಿಸಲಾಗಿತ್ತು. ಹುಡುಗ ದೆಹಲಿ ರೈಲಿನಲ್ಲಿ ಕುಳಿತುಕೊಂಡು ಅಳುತ್ತಿದ್ದ. ರೈಲು ಇನ್ನೇನು ಹೊರಡುವುದರಲ್ಲಿತ್ತು. ಪೊಲೀಸರು ಸ್ವಲ್ಪ ತಡ ಮಾಡಿದರೂ ಹುಡುಗ ಮತ್ತೆ ಸಿಗುತ್ತಿರಲಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT