ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ಭೀಕರ ಅಪಘಾತ: ಟಿಪ್ಪರ್ ಹರಿದು ತಾಯಿ, ಮಗು ಸಾವು

ಸಿಲಿಕಾನ್ ಸಿಟಿಯಲ್ಲಿ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ತಾಯಿ ಮತ್ತು ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಸೋಮವಾರ ನಡೆದಿದೆ.

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ತಾಯಿ ಮತ್ತು ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಸೋಮವಾರ ನಡೆದಿದೆ.

ಇಂದು ಬೆಳಗ್ಗೆ ಈ ಭೀಕರ ಅಪಘಾತ ಸಂಭವಿಸಿದ್ದು, ಪತಿ, ಪತ್ನಿ ತಮ್ಮ ಮಗುವಿನೊಂದಿಗೆ ದ್ವಿಚಕ್ರ ವಾಹನದಲ್ಲಿ ಕೆ,ಆರ್.ಪುರಂನಿಂದ ಧರ್ಮಪುರಿಗೆ ಹೊರಟ್ಟಿದ್ದರು. ಮಾರತಹಳ್ಳಿಯ ವರ್ತಲ ರಸ್ತೆಯಲ್ಲಿ ಹಿಂದಿನಿಂದ ಬಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಅದರ ರಭಸಕ್ಕೆ ತಾಯಿ ಮಗು ಬಲಕ್ಕೆ ಬಿದ್ದಿದ್ದಾರೆ. ಅವರ ಮೇಲೆಯೇ ಲಾರಿ ಹರಿದಿದೆ. ತಾಯಿ ಮಗು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.

ಲಾರಿ ಡಿಕ್ಕಿ ಹೊಡೆದಾಗ ಬಲಕ್ಕೆ ಬಿದ್ದ ಗಂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಹೆಂಡತಿ-ಮಗುವಿನ ತಲೆ ಅಪ್ಪಚ್ಚಿ ಆಗಿರೋದನ್ನು ನೋಡಿ ಅಘಾತಕ್ಕೊಳಗಾಗಿದ್ದರು. ಏನು ಮಾಡಬೇಕೆಂದು ತೋಚದೆ ಹೆಂಡತಿ-ಮಗುವಿನ ಶವವನ್ನು ಅಪ್ಪಿ ರೋದಿಸುತ್ತಿದ್ದರು.

ಈ ವೇಳೆ ಸ್ಥಳೀಯರ್ಯಾರು ಸಹಾಯಕ್ಕೆ ಧಾವಿಸಿಲ್ಲ. ಅಪಘಾತದ ಭೀಕರತೆ ಕಂಡು ಸ್ಥಳೀಯರು ದೂರವೇ ಉಳಿದಿದ್ದಾರೆ. ರಸ್ತೆ ಮಧ್ಯೆ ಘಟನೆ ನಡೆದಿದ್ದು ವಾಹನಗಳು ಶವಗಳ ಅಕ್ಕಪಕ್ಕದಲ್ಲೇ ಚಲಿಸುತ್ತಿದ್ದವು.

ಅಪಘಾತವಾದ ನಂತರ ಲಾರಿ ಚಾಲಕ ವಾಹನವನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಸಂಚಾರಿ ಪೊಲೀಸರು ಮೃತದೇಹಗಳನ್ನು ಬೌರಿಂಗ್ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಪೋಸ್ಟ್ ಮಾರ್ಟಂ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಎಚ್ ಎ ಎಲ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಹುಡುಕಾಟ ನಡೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT