ಮಡಿಕೇರಿಯ ಹೋಮ್ ಸ್ಟೇ ನಲ್ಲಿ ಗ್ಯಾಸ್ ಗೀಸರ್ ಅನಿಲ ಸೋರಿಕೆಯಿಂದ ಮೃತಪಟ್ಟ ಯುವತಿ 
ರಾಜ್ಯ

ಕೊಡಗು: ನೋಂದಣಿಯಾಗದ ಹೋಮ್ ಸ್ಟೇ ನಲ್ಲಿ ಅನಿಲ ಸೋರಿಕೆ; ಯುವತಿ ಸಾವು

ನೋಂದಣಿಯಾಗದ ಹೋಮ್ ಸ್ಟೇ ನಲ್ಲಿ ತಂಗಿದ್ದ ಪ್ರವಾಸಕ್ಕಾಗಿ ಬಂದಿದ್ದ ಯುವತಿಯೋರ್ವಳು ಗ್ಯಾಸ್ ಗೀಸರ್ ನಿಂದ ಅನಿಲ ಸೋರಿಕೆಯಾಗಿ ಮೃತಪಟ್ಟಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.

ಮಡಿಕೇರಿ: ನೋಂದಣಿಯಾಗದ ಹೋಮ್ ಸ್ಟೇ ನಲ್ಲಿ ತಂಗಿದ್ದ ಪ್ರವಾಸಕ್ಕಾಗಿ ಬಂದಿದ್ದ ಯುವತಿಯೋರ್ವಳು ಗ್ಯಾಸ್ ಗೀಸರ್ ನಿಂದ ಅನಿಲ ಸೋರಿಕೆಯಾಗಿ ಮೃತಪಟ್ಟಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.

ಬಳ್ಳಾರಿ ಜಿಲ್ಲೆಯ ವಿಘ್ನೇಶ್ವರಿ (24) ಮುಂಬೈ ನಲ್ಲಿ ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗ ಮಾಡುತ್ತಿದ್ದರು. ಅ.22 ರಂದು ಆಕೆ ತನ್ನ ಇತರ ನಾಲ್ವರು ಸಹಚರರೊಂದಿಗೆ ಹಂಪಿ ಎಕ್ಸ್ ಪ್ರೆಸ್ ರೈಲಿನ ಮೂಲಕ ಮೈಸೂರಿಗೆ ಪ್ರವಾಸಕ್ಕೆ ಬಂದಿದ್ದರು. ಈ ಬಳಿಕ ಆಕೆ ಕೊಡಗಿಗೂ ಭೇಟಿ ನೀಡಿದ್ದು, ಭಾನುವಾರದಂದು ತಲಕಾವೇರಿಗೂ ತೆರಳಿದ್ದರು.

5 ಯುವತಿಯರ ತಂಡ ಮಡಿಕೇರಿಯ ಡೈರಿ ಫಾರ್ಮ್ ಪ್ರದೇಶದಲ್ಲಿ ಹೋಂ ಸ್ಟೇ ಯನ್ನು ಕಾಯ್ದಿರಿಸಿದ್ದರು. ಭಾನುವಾರ ರಾತ್ರಿ 8:30 ಕ್ಕೆ ಬಾತ್ ರೂಮ್ ಗೆ ತೆರಳಿದ ವಿಘ್ನೇಶ್ವರಿ ಎಷ್ಟು ಸಮಯವಾದರೂ ವಾಪಸ್ಸಾಗಲಿಲ್ಲ. ಇದರಿಂದ ಅನುಮಾನಗೊಂಡ ಇತರ ಯುವತಿಯರು ಬೀಗ ಮುರಿದು ಬಾತ್ ರೂಮ್ ಒಳಗೆ ಪ್ರವೇಶಿಸಿದಾಗ ಆಕೆ ಪ್ರಜ್ಞಾಹೀನ ಸ್ಥಿತಿಯಲ್ಲಿರುವುದು ಪತ್ತೆಯಾಗಿದೆ. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗ ಮಧ್ಯದಲ್ಲೇ ಆಕೆ ಕೊನೆಯುಸಿರೆಳೆದಿದ್ದರು.

ಮೂಲಗಳ ಪ್ರಕಾರ ಗ್ಯಾಸ್ ಗೀಸರ್ ನಿಂದ ಅನಿಲ ಸೋರಿಕೆಯಾಗಿದ್ದೇ ವಿಘ್ನೇಶ್ವರಿ ಸಾವಿಗೆ ಕಾರಣ ಎನ್ನಲಾಗುತ್ತಿದೆ. ಗ್ಯಾಸ್ ಗೀಸರ್ ಅಳವಡಿಸಲಾಗಿದ್ದ ಆ ಪ್ರದೇಶದಲ್ಲಿ ಸೂಕ್ತ ಗಾಳಿ, ಬೆಳಕಿನ ವ್ಯವಸ್ಥೆ ಇರಲಿಲ್ಲ. ಘಟನೆಗೆ ಸಂಬಂಧಿಸಿದಂತೆ ಮಡಿಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಪ್ರಗತಿಯಲ್ಲಿದೆ.

ವಿಘ್ನೇಶ್ವರಿ ಕೂರ್ಗ್ ವ್ಯಾಲಿ ವ್ಯೂ ಹೋಮ್ ಸ್ಟೇ ನಲ್ಲಿ ತಂಗಿದ್ದರು. ಹೋಮ್ ಸ್ಟೇ ನ ಮಾಲಿಕ ದುಬೈ ನಿವಾಸಿಯಾಗಿದ್ದು, ಈ ಹೋಮ್ ಸ್ಟೇ ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿಯಾಗಿರಲಿಲ್ಲ. ಹೋಮ್ ಸ್ಟೇ ಅಸೋಸಿಯೇಷನ್ ಅಧ್ಯಕ್ಷ ಬಿಜಿ ಅನಂತಶ್ಯಾನ ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಅಕ್ರಮ ಹೋಮ್ ಸ್ಟೇ ಗಳು ನಡೆಯುತ್ತಿರುವುದರ ಬಗ್ಗೆ ಮಾಹಿತಿ ನೀಡಿದ್ದಾರೆ. ಈಗಲಾದರೂ ಜಿಲ್ಲಾಡಳಿತ ಎಚ್ಚೆತ್ತುಕೊಂಡು ಅಕ್ರಮ ಹೋಮ್ ಸ್ಟೇ ಗಳಿಗೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT