ಮೊಬೈಲ್ ದೃಶ್ಯ 
ರಾಜ್ಯ

ಬೆಂಗಳೂರು: ಬಿಟ್ಟುಬಿಡುವಂತೆ ಕಣ್ಣೀರು ಹಾಕಿದರೂ ಬಿಡದೆ ಪುಂಡರಿಂದ ಬಾಲಕರಿಗೆ ಚಿತ್ರಹಿಂಸೆ!

ಸಿಲಿಕಾನ್ ಸಿಟಿಯಲ್ಲಿ ಮದ್ಯಪಾನ ಮಾಡಿದ ಪುಂಡರು ಬಾಲಕರಿಗೆ ತೀವ್ರ ಹಿಂಸೆ ನೀಡಿದ ದಾರುಣ ಘಟನೆ ನಡೆದಿದೆ.

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮದ್ಯಪಾನ ಮಾಡಿದ ಪುಂಡರು ಬಾಲಕರಿಗೆ ತೀವ್ರ ಹಿಂಸೆ ನೀಡಿದ ದಾರುಣ ಘಟನೆ ನಡೆದಿದೆ.

ನಗರದ ಬಿ.ನಾರಾಯಣಪುರದಲ್ಲಿ ದುರ್ಘಟನೆ ನಡೆದಿದೆ. ಇದು ಎರಡು ದಿನದ ಹಿಂದೆ ನಡೆದಿದೆ. ತಡವಾಗಿ ಬೆಳಕಿಗೆ ಬಂದಿದೆ.

ಬಾಲಕರು ಶಾಲಾ ಮೈದಾನಕ್ಕೆ ಆಟವಾಡಲು ಹೋದಾಗ ಈ ಘಟನೆ ನಡೆದಿದೆ. ಅವರನ್ನು ಸುತ್ತುವರಿದ ಯುವಕರ ಗುಂಪು ಒಂದು ತಾಸಿಗೂ ಹೆಚ್ಚು ಸಮಯ ಹಿಂಸೆ ನೀಡಿದ್ದಾರೆ. ಮರಕ್ಕೆ ಕಟ್ಟಿಹಾಕಿ ಬೀಡಿ ಸೇದುವಂತೆ ಒತ್ತಾಯಿಸಿದ್ದಾರೆ. ಮಕ್ಕಳು ಬಿಟ್ಟುಬಿಡುವಂತೆ ಕಣ್ಣೀರು ಹಾಕಿದರೂ ಬಿಡದ ಪುಂಡರು ವಿಕೃತಿ ಮೆರೆದಿದ್ದು  ಇದೆಲ್ಲವನ್ನೂ ವಿಡಿಯೋ ಸಹ ಮಾಡಿದ್ದಾರೆ.

ಈ ಕುರಿತು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಕೃತ್ಯದ ಬಗ್ಗೆ ಮಕ್ಕಳು ಪೋಷಕರಿಗೆ ತಿಳಿಸಿದ್ದು ನಂತರ ಮಹದೇವಪುರ ಪೊಲೀಸರಿಗೆ ದೂರು ನೀಡಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಂಗಳೂರು: ಆಟೋಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು - Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: EY ವರದಿ

Ganesh Chaturthi ಎಫೆಕ್ಟ್; ಮತ್ತೆ ಗಗನದತ್ತ ಮುಖ ಮಾಡಿದ ಚಿನ್ನದ ಬೆಲೆ, ಇಂದಿನ ದರ ಪಟ್ಟಿ ಇಂತಿದೆ!

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ, ಹಠಾತ್ ಪ್ರವಾಹ: ಭೂಕುಸಿತದಿಂದ ನಾಲ್ವರು ಸಾವು

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

SCROLL FOR NEXT