ವಿಧಾನಸೌಧದ ಆವರಣದಲ್ಲಿ ಕನ್ನಡ ಗೀತೆ ಹಾಡುತ್ತಿರುವುದು. 
ರಾಜ್ಯ

'ಕನ್ನಡಕ್ಕಾಗಿ ನಾವು' ಅಭಿಯಾನ: ರಾಜ್ಯದಾದ್ಯಂತ ಏಕಕಾಲದಲ್ಲಿ ಕನ್ನಡ ಗೀತಗಳ ಗಾಯನ; ಸಂಕಲ್ಪ!

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 1 ವಾರ ಆಯೋಜಿಸಿರುವ “ಕನ್ನಡಕ್ಕಾಗಿ ನಾವು” ಅಭಿಯಾನದ ಅಂಗವಾಗಿ ಗುರುವಾರ ಬೆಳಗ್ಗೆ 11 ಗಂಟೆಗೆ ನಾಡಿನಾದ್ಯಂತ ಲಕ್ಷಾಂತರ ಜನರು ಏಕಕಾಲದಲ್ಲಿ ಕನ್ನಡ ಗೀತಗಾಯನ ನಡೆಸಿದರು.

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 1 ವಾರ ಆಯೋಜಿಸಿರುವ “ಕನ್ನಡಕ್ಕಾಗಿ ನಾವು” ಅಭಿಯಾನದ ಅಂಗವಾಗಿ ಗುರುವಾರ ಬೆಳಗ್ಗೆ 11 ಗಂಟೆಗೆ ನಾಡಿನಾದ್ಯಂತ ಲಕ್ಷಾಂತರ ಜನರು ಏಕಕಾಲದಲ್ಲಿ ಕನ್ನಡ ಗೀತಗಾಯನ ನಡೆಸಿದರು.

ವಿಧಾನಸೌಧದ ಮೆಟ್ಟಿಲು ಬಳಿ ಮುಖ್ಯ ಕಾರ್ಯಕ್ರಮ ನಡೆಯಿತು. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವ ಸುನಿಲ್ ಕುಮಾರ್, ಶಾಸಕ ಸುನಿಲ್ ನಾಯಕ್ , ಐಎಎಸ್, ಐಪಿಎಸ್ ಅಧಿಕಾರಿಗಳು ಪಾಲ್ಗೊಂಡಿದ್ದರು.

ಹುಬ್ಬಳ್ಳಿಯ ಕನ್ನಡ ಭವನದಲ್ಲಿ‌ ಲಕ್ಷ ಕಂಠಗಳ ಗೀತ ಗಾಯನ‌ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.

ಬೆಂಗಳೂರಿನ ಪುರಭವನ, ರವೀಂದ್ರ ಕಲಾಕ್ಷೇತ್ರ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಕಚೇರಿಗಳು, ರೈಲು ನಿಲ್ದಾಣ, ಖಾಸಗಿ ಸಂಸ್ಥೆಗಳು, ಶಾಲಾ ಕಾಲೇಜುಗಳಲ್ಲೂ ಗಾಯನ ನಡೆಯಿತು.

ರಾಷ್ಟ್ರಕವಿ ಕುವೆಂಪು ಅವರ ‘ಬಾರಿಸು ಕನ್ನಡ ಡಿಂಡಿಮವ’, ನಿಸಾರ್​ ಅಹಮದ್​ ಅವರ ‘ಜೋಗದ ಸಿರಿ ಬೆಳಕಿನಲ್ಲಿ’ ಹಾಗೂ ಹಂಸಲೇಖ ಅವರ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಗೀತೆಗಳನ್ನು ಹಾಡಿದರು.

ಈ ಹಾಡಿನ ಜತೆಗೆ ನಾಡಗೀತೆಯೂ ಸೇರ್ಪಡೆ ಆಯಿತು. ವಿಧಾನಸೌಧದಲ್ಲಿ ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಮತ್ತು ಅಧಿಕಾರಿಗಳು ರಮ್ಯ ವಸಿಷ್ಠ ನೇತೃತ್ವದಲ್ಲಿ ಹಾಡಿದರು. ಇದೇ ರೀತಿ ರಾಜ್ಯಾದ್ಯಂತ ಗೀತಗಾಯನ ನಡೆಯಿತು. ಗಾಯನದ ನಂತರ ಕಾರ್ಯಕ್ರಮದಲ್ಲಿ “ಕನ್ನಡದಲ್ಲೇ ಮಾತನಾಡುವ, ಬರೆಯುವ…” ಸಂಕಲ್ಪ ಸ್ವೀಕರಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಆಯೋಜಿಸಿರುವ ಏಕಕಾಲ ಗೀತ ಗಾಯನ ಕಾರ್ಯಕ್ರಮ ರಾಜ್ಯದಲ್ಲಿ ಒಂದು ವಾರ ಕಾಲ ನಡೆಯಲಿದೆ. ಮೂರು ಕನ್ನಡ ಗೀತೆಗಳನ್ನು ಹಾಡಿಸುವ ಹೊಣೆಯನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹೊತ್ತಿಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

NCERT ಪಠ್ಯಪುಸ್ತಕ ವಿವಾದ: ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ; ಬಿಜೆಪಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT