ಹೈಕೋರ್ಟ್ 
ರಾಜ್ಯ

ಬಿನೀಶ್ ಕೊಡಿಯೇರಿಗೆ ಹೈಕೋರ್ಟ್ ನಿಂದ  ಜಾಮೀನು ಮಂಜೂರು

ಡ್ರಗ್ ದಂಧೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇರಳ ಸಿಪಿಐ(ಎಂ) ಮಾಜಿ ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ಅವರ ಪುತ್ರ ಬಿನೀಶ್ ಕೊಡಿಯೇರಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. 

ಬೆಂಗಳೂರು: ಡ್ರಗ್ ದಂಧೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇರಳ ಸಿಪಿಐ(ಎಂ) ಮಾಜಿ ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ಅವರ ಪುತ್ರ ಬಿನೀಶ್ ಕೊಡಿಯೇರಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. 

ಧಾರವಾಡ ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿದ್ದ ನ್ಯಾಯಮೂರ್ತಿ ಉಮಾ, ಬಿನೇಶ್ ಕೊಡಿಯೇರಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿ, ಷರತ್ತಿನೊಂದಿಗೆ ಜಾಮೀನು ಮಂಜೂರು ಮಾಡಿದರು. 2021ರ ಫೆಬ್ರವರಿ ತಿಂಗಳಲ್ಲಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಶೇಷ ಕೋರ್ಟ್ ವಜಾಗೊಳಿಸಿದ ನಂತರ ಬಿನೇಶ್ ಹೈಕೋರ್ಟ್ ಮೊರೆ ಹೋಗಿದ್ದರು.

ಈ ಪ್ರಕರಣದಲ್ಲಿ ನಂಬರ್ ನ ಆರೋಪಿಯಾಗಿರುವ ಡ್ರಗ್ ಪೆಡ್ಲರ್ ಮೊಹಮ್ಮದ್ ಅನೂಪ್ ಮತ್ತಿತರೊಂದಿಗೆ ಹಣ ವರ್ಗಾವಣೆಯಲ್ಲಿ ಬಿನೇಶ್ ತೊಡಗಿಸಿಕೊಂಡಿದ್ದರು ಎಂದು ಇಡಿ ಆರೋಪಿಸಿತ್ತು.  

ಬಿನೇಶ್ ಹಣ ವರ್ಗಾವಣೆ ಅಪರಾಧದಲ್ಲಿ ತಪಿತಸ್ಥರಾಗಿದ್ದಾರೆ.  ಆ ಮೂಲಕ, ಅವರು 2002ರ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ನಿಗದಿತ ಅಪರಾಧವನ್ನು ಮಾಡಿದ್ದಾರೆ ಮತ್ತು ಅಪರಾಧದ ಪ್ರಕ್ರಿಯೆಯನ್ನು ಸೃಷ್ಟಿಸಿದ್ದಾರೆ. ಹೀಗಾಗಿ, ಅವರು ಕಾಯಿದೆಯ ಸೆಕ್ಷನ್ 4 ರ ಅಡಿಯಲ್ಲಿ ಶಿಕ್ಷಾರ್ಹವಾದ  ಅಪರಾಧ ಮಾಡಿರುವುದಾಗಿ ಇಡಿ ವಾದಿಸಿತು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ