ಸಾಂದರ್ಭಿಕ ಚಿತ್ರ 
ರಾಜ್ಯ

ದೀಪಾವಳಿಯ ಬಲಿಪಾಡ್ಯಮಿ ದಿನ ಕಡ್ಡಾಯವಾಗಿ ದೇವಾಲಯಗಳಲ್ಲಿ ಗೋಪೂಜೆ: ರಾಜ್ಯ ಸರ್ಕಾರದ ಆದೇಶ

ಈ ಬಾರಿ ದೀಪಾವಳಿ ಹಬ್ಬದ ಸಮಯದಲ್ಲಿ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ಗೋಪೂಜೆ ನಡೆಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು: ಈ ಬಾರಿ ದೀಪಾವಳಿ ಹಬ್ಬದ ಸಮಯದಲ್ಲಿ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ಗೋಪೂಜೆ ನಡೆಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ದೀಪಾವಳಿ ಹಬ್ಬದ ಸಮಯದಲ್ಲಿ ಬಲಿಪಾಡ್ಯಮಿ ದಿನ ಹಿಂದೂಗಳು ತಮ್ಮ ತಮ್ಮ ಮನೆಗಳಲ್ಲಿರುವ ಗೋವುಗಳಿಗೆ ಪೂಜೆ ಮಾಡಿ ತಿನ್ನಲು ನೀಡುತ್ತಿದ್ದರು. ಆದರೆ ಈ ವರ್ಷ ನವೆಂಬರ್ 5ರಂದು ಬಲಿಪಾಡ್ಯಮಿ ದಿನ ಕಡ್ಡಾಯವಾಗಿ ದೇವಸ್ಥಾನಗಳಲ್ಲಿ ಕೂಡ ಪೂಜೆ ಮಾಡಬೇಕೆಂದು ಮುಜರಾಯಿ ಇಲಾಖೆ ಆದೇಶದಲ್ಲಿ ಹೇಳಲಾಗಿದೆ.

ಬಲಿಪಾಡ್ಯಮಿ ದಿನ ಗೋಧೂಳಿ ಲಗ್ನದಲ್ಲಿ ಸಂಜೆ 5.30ರಿಂದ 6.30ರ ಗೋಧೂಳಿ ಲಗ್ನದಲ್ಲಿ ದೇವಸ್ಥಾನಗಳಲ್ಲಿ ಗೋವುಗಳಿಗೆ ಪೂಜೆ ಮಾಡಬೇಕು. ಈ ಮೂಲಕ ಹಿಂದೂ ಸನಾತನ ಧರ್ಮವನ್ನು ಎತ್ತಿ ಹಿಡಿಯಬೇಕು. ಗೋವುಗಳಿಗೆ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದರೆ ಶ್ರೇಯಸ್ಸು ಆಗುತ್ತದೆ ಎಂಬ ನಂಬಿಕೆಯೊಂದಿಗೆ ಪೂಜೆ ಮಾಡಬೇಕೆಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT