ಪ್ರೊ. ಕೆ ಎಸ್ ಭಗವಾನ್ 
ರಾಜ್ಯ

ಹಿಂದೂಗಳ ಭಾವನೆಗಳಿಗೆ ಧಕ್ಕೆ ಆರೋಪ: ಪ್ರೊ. ಭಗವಾನ್ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿಸದ ಸರ್ಕಾರದ ವಿರುದ್ಧ ಹೈಕೋರ್ಟ್ ಕಿಡಿ

ಭಗವಾನ್ ರಚಿಸಿರುವ ‘ಶ್ರೀರಾಮ ಮಂದಿರ ಏಕೆ ಕಟ್ಟಬಾರದು’ ಎಂಬ ಕೃತಿಯಲ್ಲಿ ಶ್ರೀರಾಮ, ಲಕ್ಷ್ಮಣ, ಆಂಜನೇಯ, ಸೀತಾ ಮಾತೆಯ ಅವಹೇಳನ ಮಾಡಲಾಗಿದೆ ಎನ್ನುವ ಆರೋಪ.

ಬೆಂಗಳೂರು: ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪಕ್ಕೆ ಸಂಬಂಧಿಸಿದಂತೆ ಸಾಹಿತಿ ಪ್ರೊ. ಕೆ ಎಸ್ ಭಗವಾನ್ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಲು ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಕರ್ನಾಟಕ ಹೈಕೋರ್ಟ್ ಗುರುವಾರ ಅಸಮಾಧಾನ ವ್ಯಕ್ತಪಡಿಸಿದೆ.

ಸಾಗರ ತಾಲ್ಲೂಕಿನ ಇಕ್ಕೇರಿಯ ಮಹಾಬಲೇಶ್ವರ ಮಾಪು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ನೇತೃತ್ವದ ಏಕಸದಸ್ಯ ಪೀಠವು ಕೆ ಎಸ್ ಭಗವಾನ್ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ವಿಚಾರಣೆಗೆ ಅನುಮತಿ ಕೋರಿ ಸಲ್ಲಿಸಿರುವ ಅರ್ಜಿಯನ್ನು ರಾಜ್ಯ ಸರ್ಕಾರವು 8 ವಾರಗಳ ಒಳಗೆ ಪರಿಗಣಿಸಿ ಇತ್ಯರ್ಥಪಡಿಸಬೇಕು. ಒಂದೊಮ್ಮೆ ನಿಗದಿತ ಅವಧಿಯೊಳಗೆ ಅರ್ಜಿ ಇತ್ಯರ್ಥಪಡಿಸದಿದ್ದರೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ದಿನಕ್ಕೆ 2 ಸಾವಿರ ರೂಪಾಯಿ ದಂಡ ಪಾವತಿಸಬೇಕು ಎಂದು ಆದೇಶಿಸಿತು.

ಭಗವಾನ್ ರಚಿಸಿರುವ ‘ಶ್ರೀರಾಮ ಮಂದಿರ ಏಕೆ ಕಟ್ಟಬಾರದು’ ಎಂಬ ಕೃತಿಯಲ್ಲಿ ಶ್ರೀರಾಮ, ಲಕ್ಷ್ಮಣ, ಆಂಜನೇಯ, ಸೀತಾ ಮಾತೆಯ ಅವಹೇಳನ ಮಾಡಲಾಗಿದೆ. ಹಿಂದೂಧರ್ಮ ಮತ್ತು ಹಿಂದೂಗಳ ನಂಬಿಕೆಗಳನ್ನು ಕೀಳಾಗಿ ಬಿಂಬಿಸಿಲಾಗಿದೆ. ಜತೆಗೆ, ದ್ವೇಷ ಬಿತ್ತುವ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿ ಮಹಾಬಲೇಶ್ವರ ಮಾಪು ಸಾಗರದ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇರಳದಲ್ಲಿ ಖಾತೆ ಹಂಚಿಕೆ ಗೊಂದಲ: ಕಾಂಗ್ರೆಸ್ ಹೈಕಮಾಂಡ್ ಸಲಹೆ ತಿರಸ್ಕರಿಸಿದ CM ಸತೀಶನ್; ಭಿನ್ನಮತ ಸ್ಫೋಟ..!

WTCಯಲ್ಲಿ ಭಾರತಕ್ಕೆ ದೊಡ್ಡ ಹಿನ್ನಡೆ: ಪಾಕಿಸ್ತಾನವನ್ನು 2-0 ಅಂತರದಿಂದ ಸೋಲಿಸಿ Team Indiaನ ಹಿಂದಿಕ್ಕಿದ ಬಾಂಗ್ಲಾ!

ನಮ್ಮ ನೋವನ್ನು ಆನಂದಿಸುತ್ತೀರಾ: ನನಗೆ ವಯಸ್ಸಾಗಿದೆ, ಆದರೆ ಹೋರಾಡೋದು ಮರೆತಿಲ್ಲ; ಸಲ್ಮಾನ್ ಖಾನ್ ಎಚ್ಚರಿಕೆ!

ಆನೇಕಲ್‌ನಲ್ಲಿ ಬೆಂಗಳೂರಿನ 2ನೇ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ರೈತರು, KRS ತೀವ್ರ ವಿರೋಧ!

ನಿಜಕ್ಕೂ ನಮ್ಮದು F…Good Team: ಲೈವ್​ನಲ್ಲೇ 'ಅಶ್ಲೀಲ ಪದ' ಬಳಸಿದ ರಿಷಭ್ ಪಂತ್, ವ್ಯಾಪಕ ಟೀಕೆ, Video!

SCROLL FOR NEXT