ಪ್ರೊ. ಕೆ ಎಸ್ ಭಗವಾನ್ 
ರಾಜ್ಯ

ಹಿಂದೂಗಳ ಭಾವನೆಗಳಿಗೆ ಧಕ್ಕೆ ಆರೋಪ: ಪ್ರೊ. ಭಗವಾನ್ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿಸದ ಸರ್ಕಾರದ ವಿರುದ್ಧ ಹೈಕೋರ್ಟ್ ಕಿಡಿ

ಭಗವಾನ್ ರಚಿಸಿರುವ ‘ಶ್ರೀರಾಮ ಮಂದಿರ ಏಕೆ ಕಟ್ಟಬಾರದು’ ಎಂಬ ಕೃತಿಯಲ್ಲಿ ಶ್ರೀರಾಮ, ಲಕ್ಷ್ಮಣ, ಆಂಜನೇಯ, ಸೀತಾ ಮಾತೆಯ ಅವಹೇಳನ ಮಾಡಲಾಗಿದೆ ಎನ್ನುವ ಆರೋಪ.

ಬೆಂಗಳೂರು: ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪಕ್ಕೆ ಸಂಬಂಧಿಸಿದಂತೆ ಸಾಹಿತಿ ಪ್ರೊ. ಕೆ ಎಸ್ ಭಗವಾನ್ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡಲು ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಕರ್ನಾಟಕ ಹೈಕೋರ್ಟ್ ಗುರುವಾರ ಅಸಮಾಧಾನ ವ್ಯಕ್ತಪಡಿಸಿದೆ.

ಸಾಗರ ತಾಲ್ಲೂಕಿನ ಇಕ್ಕೇರಿಯ ಮಹಾಬಲೇಶ್ವರ ಮಾಪು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ನೇತೃತ್ವದ ಏಕಸದಸ್ಯ ಪೀಠವು ಕೆ ಎಸ್ ಭಗವಾನ್ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ವಿಚಾರಣೆಗೆ ಅನುಮತಿ ಕೋರಿ ಸಲ್ಲಿಸಿರುವ ಅರ್ಜಿಯನ್ನು ರಾಜ್ಯ ಸರ್ಕಾರವು 8 ವಾರಗಳ ಒಳಗೆ ಪರಿಗಣಿಸಿ ಇತ್ಯರ್ಥಪಡಿಸಬೇಕು. ಒಂದೊಮ್ಮೆ ನಿಗದಿತ ಅವಧಿಯೊಳಗೆ ಅರ್ಜಿ ಇತ್ಯರ್ಥಪಡಿಸದಿದ್ದರೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ದಿನಕ್ಕೆ 2 ಸಾವಿರ ರೂಪಾಯಿ ದಂಡ ಪಾವತಿಸಬೇಕು ಎಂದು ಆದೇಶಿಸಿತು.

ಭಗವಾನ್ ರಚಿಸಿರುವ ‘ಶ್ರೀರಾಮ ಮಂದಿರ ಏಕೆ ಕಟ್ಟಬಾರದು’ ಎಂಬ ಕೃತಿಯಲ್ಲಿ ಶ್ರೀರಾಮ, ಲಕ್ಷ್ಮಣ, ಆಂಜನೇಯ, ಸೀತಾ ಮಾತೆಯ ಅವಹೇಳನ ಮಾಡಲಾಗಿದೆ. ಹಿಂದೂಧರ್ಮ ಮತ್ತು ಹಿಂದೂಗಳ ನಂಬಿಕೆಗಳನ್ನು ಕೀಳಾಗಿ ಬಿಂಬಿಸಿಲಾಗಿದೆ. ಜತೆಗೆ, ದ್ವೇಷ ಬಿತ್ತುವ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿ ಮಹಾಬಲೇಶ್ವರ ಮಾಪು ಸಾಗರದ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT