ಸಾಂದರ್ಭಿಕ ಚಿತ್ರ 
ರಾಜ್ಯ

ಹಲ್ಲೆ ಪ್ರಕರಣ: ನಿರ್ಮಾಪಕ ಸೌಂದರ್ಯ ಜಗದೀಶ್ ಕುಟುಂಬ ಸದಸ್ಯರ ಸುಳಿವು ಪೊಲೀಸರಿಗೆ ಇನ್ನೂ ಸಿಕ್ಕಿಲ್ಲ

 ಅಪರಾಧ ನಂತರ ಕನ್ನಡ ಸಿನಿಮಾ ನಿರ್ಮಾಪಕ ಸೌಂದರ್ಯ ಜಗದೀಶ್ ಅವರ ಕುಟುಂಬ ಸದಸ್ಯರು ಪರಾರಿಯಾಗಿರುವ ಬಗ್ಗೆ ಪಬ್ ಮ್ಯಾನೇಜರ್ ಸೇರಿದಂತೆ ನಾಲ್ವರನ್ನು ಗುರುವಾರ ಮಹಾಲಕ್ಷ್ಮಿ ಲೇಔಟ್ ಪೊಲೀಸರು ವಿಚಾರಣೆ ನಡೆಸಿದ್ದು, ಬೌನ್ಸರ್‌ಗಳ ಕೈವಾಡವನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

ಬೆಂಗಳೂರು: ಅಪರಾಧ ನಂತರ ಕನ್ನಡ ಸಿನಿಮಾ ನಿರ್ಮಾಪಕ ಸೌಂದರ್ಯ ಜಗದೀಶ್ ಅವರ ಕುಟುಂಬ ಸದಸ್ಯರು ಪರಾರಿಯಾಗಿರುವ ಬಗ್ಗೆ ಪಬ್ ಮ್ಯಾನೇಜರ್ ಸೇರಿದಂತೆ ನಾಲ್ವರನ್ನು ಗುರುವಾರ ಮಹಾಲಕ್ಷ್ಮಿ ಲೇಔಟ್ ಪೊಲೀಸರು ವಿಚಾರಣೆ ನಡೆಸಿದ್ದು, ಬೌನ್ಸರ್‌ಗಳ ಕೈವಾಡವನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

ಶನಿವಾರ ಸಂಜೆ  ಅಪರಾಧ ಕೃತ್ಯ ನಡೆದಿದ್ದು,  ನೆರೆಹೊರೆಯವರ ಮನೆಯಲ್ಲಿ ಸಹಾಯಕಾಗಿ ಕೆಲಸ ಮಾಡುತ್ತಿದ್ದ ಇಬ್ಬರು ಮಹಿಳೆಯರ ಮೇಲೆ ಆರೋಪಿಗಳು ಹಲ್ಲೆ ನಡೆಸಿದ್ದರು.

ನಾಲ್ವರು ಬೌನ್ಸರ್ ಗಳು, ನಟ ಸ್ನೇಹಿತ್ ಮತ್ತು ಆಕೆಯ ತಾಯಿ ರೇಖಾ ಜಗದೀಶ್ ಎಫ್ ಐಆರ್ ನಲ್ಲಿ ಪ್ರಮುಖ ಆರೋಪಿಯಾಗಿದ್ದಾರೆ. ಪಬ್ ಮ್ಯಾನೇಜರ್ ಹಾಗೂ ಮತ್ತಿತರ ಮೂವರು ಸ್ನೇಹಿತರೊಂದಿಗೆ ಸಂಪರ್ಕದಲ್ಲಿದ್ದ ಅವರು ನಗರದಿಂದ ಪರಾರಿಯಾಗಿದ್ದಾರೆ. ಕಾಲ್ ರೆಕಾರ್ಡ್ ಆಧಾರದ ಮೇಲೆ ಇವರಿಗೆ ವಿಚಾರಣೆಗೆ ಹಾಜರಾಗಲು ಪೊಲೀಸರು ಸಮನ್ಸ್ ನೀಡಿದ್ದಾರೆ. ಈವರೆಗೂ ಆರೋಪಿಗಳು ಎಲ್ಲಿದ್ದಾರೆ ಎಂಬುದರ ಬಗ್ಗೆ ಸುಳಿವು ಸಿಕ್ಕಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

ಈ ಮಧ್ಯೆ,  ಬುಧವಾರ ದೂರುದಾರರಾದ ಅನುರಾಧ ಅವರು ಪೊಲೀಸರನ್ನು ಸಂಪರ್ಕಿಸಿ ಎಫ್‌ಐಆರ್‌ನಿಂದ ಇಬ್ಬರ ಹೆಸರನ್ನು ತೆಗೆದುಹಾಕುವಂತೆ ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ. ಆದರೆ ಈಗಾಗಲೇ ನ್ಯಾಯಾಲಯಕ್ಕೆ ಎಫ್‌ಐಆರ್ ಸಲ್ಲಿಸಿರುವುದರಿಂದ ಅದು ಸಾಧ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ರಾಜಿ ಮಾಡಿಕೊಳ್ಳುವಂತೆ ರಾಜಕಾರಣಿಗಳು, ಸಿನಿಮಾ ತಾರೆಯರು ಸೇರಿದಂತೆ ಕೆಲವರು ಒತ್ತಡ ಹೇರಿದ್ದರು ಎನ್ನಲಾಗಿದೆ. ನಿರ್ಮಾಪಕಿ ಸೌಂದರ್ಯ ಜಗದೀಶ್ ಅವರ ಕುಟುಂಬದ ಸದಸ್ಯರ ಪತ್ತೆಗೆ ಉತ್ತರ ವಿಭಾಗದ ಪೊಲೀಸರು ಎಂಟು ತಂಡಗಳನ್ನು ರಚಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'Grok ರಚಿಸಿದ ಅಸಭ್ಯ, ಕಾನೂನುಬಾಹಿರ ವಿಷಯಗಳ ತೆಗೆದುಹಾಕಿ': Elon Musk ಎಕ್ಸ್‌ಗೆ ಕೇಂದ್ರ ಸರ್ಕಾರ ಖಡಕ್ ಎಚ್ಚರಿಕೆ!

Ramnath Goenka Sahithya Samman 2025: ಸಾಹಿತಿ ಚಂದ್ರಶೇಖರ ಕಂಬಾರರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

ಬಳ್ಳಾರಿ ಫೈರಿಂಗ್: ನಿನ್ನೆಯಷ್ಟೇ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಪವನ್ ನೆಜ್ಜೂರ್ ಅಮಾನತು

ಭಾರತ ತಂಡಕ್ಕೆ ಭಾರಿ ಆಘಾತ; ಸ್ಟಾರ್ ಆಟಗಾರನ ಮೂಳೆ ಮುರಿತ, ದೀರ್ಘಕಾಲ ಕ್ರಿಕೆಟ್‌ನಿಂದ ದೂರ!

EVM Survey: ಹಳೆಯ ಸಮೀಕ್ಷೆ ಬಳಸಿಕೊಂಡು ಜನರ ದಾರಿತಪ್ಪಿಸುತ್ತಿರುವುದು ವಿಷಾದನೀಯ - ಸಿಎಂ ಸಿದ್ದರಾಮಯ್ಯ

SCROLL FOR NEXT