ಸಾಂದರ್ಭಿಕ ಚಿತ್ರ 
ರಾಜ್ಯ

ಹಲ್ಲೆ ಪ್ರಕರಣ: ನಿರ್ಮಾಪಕ ಸೌಂದರ್ಯ ಜಗದೀಶ್ ಕುಟುಂಬ ಸದಸ್ಯರ ಸುಳಿವು ಪೊಲೀಸರಿಗೆ ಇನ್ನೂ ಸಿಕ್ಕಿಲ್ಲ

 ಅಪರಾಧ ನಂತರ ಕನ್ನಡ ಸಿನಿಮಾ ನಿರ್ಮಾಪಕ ಸೌಂದರ್ಯ ಜಗದೀಶ್ ಅವರ ಕುಟುಂಬ ಸದಸ್ಯರು ಪರಾರಿಯಾಗಿರುವ ಬಗ್ಗೆ ಪಬ್ ಮ್ಯಾನೇಜರ್ ಸೇರಿದಂತೆ ನಾಲ್ವರನ್ನು ಗುರುವಾರ ಮಹಾಲಕ್ಷ್ಮಿ ಲೇಔಟ್ ಪೊಲೀಸರು ವಿಚಾರಣೆ ನಡೆಸಿದ್ದು, ಬೌನ್ಸರ್‌ಗಳ ಕೈವಾಡವನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

ಬೆಂಗಳೂರು: ಅಪರಾಧ ನಂತರ ಕನ್ನಡ ಸಿನಿಮಾ ನಿರ್ಮಾಪಕ ಸೌಂದರ್ಯ ಜಗದೀಶ್ ಅವರ ಕುಟುಂಬ ಸದಸ್ಯರು ಪರಾರಿಯಾಗಿರುವ ಬಗ್ಗೆ ಪಬ್ ಮ್ಯಾನೇಜರ್ ಸೇರಿದಂತೆ ನಾಲ್ವರನ್ನು ಗುರುವಾರ ಮಹಾಲಕ್ಷ್ಮಿ ಲೇಔಟ್ ಪೊಲೀಸರು ವಿಚಾರಣೆ ನಡೆಸಿದ್ದು, ಬೌನ್ಸರ್‌ಗಳ ಕೈವಾಡವನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.

ಶನಿವಾರ ಸಂಜೆ  ಅಪರಾಧ ಕೃತ್ಯ ನಡೆದಿದ್ದು,  ನೆರೆಹೊರೆಯವರ ಮನೆಯಲ್ಲಿ ಸಹಾಯಕಾಗಿ ಕೆಲಸ ಮಾಡುತ್ತಿದ್ದ ಇಬ್ಬರು ಮಹಿಳೆಯರ ಮೇಲೆ ಆರೋಪಿಗಳು ಹಲ್ಲೆ ನಡೆಸಿದ್ದರು.

ನಾಲ್ವರು ಬೌನ್ಸರ್ ಗಳು, ನಟ ಸ್ನೇಹಿತ್ ಮತ್ತು ಆಕೆಯ ತಾಯಿ ರೇಖಾ ಜಗದೀಶ್ ಎಫ್ ಐಆರ್ ನಲ್ಲಿ ಪ್ರಮುಖ ಆರೋಪಿಯಾಗಿದ್ದಾರೆ. ಪಬ್ ಮ್ಯಾನೇಜರ್ ಹಾಗೂ ಮತ್ತಿತರ ಮೂವರು ಸ್ನೇಹಿತರೊಂದಿಗೆ ಸಂಪರ್ಕದಲ್ಲಿದ್ದ ಅವರು ನಗರದಿಂದ ಪರಾರಿಯಾಗಿದ್ದಾರೆ. ಕಾಲ್ ರೆಕಾರ್ಡ್ ಆಧಾರದ ಮೇಲೆ ಇವರಿಗೆ ವಿಚಾರಣೆಗೆ ಹಾಜರಾಗಲು ಪೊಲೀಸರು ಸಮನ್ಸ್ ನೀಡಿದ್ದಾರೆ. ಈವರೆಗೂ ಆರೋಪಿಗಳು ಎಲ್ಲಿದ್ದಾರೆ ಎಂಬುದರ ಬಗ್ಗೆ ಸುಳಿವು ಸಿಕ್ಕಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

ಈ ಮಧ್ಯೆ,  ಬುಧವಾರ ದೂರುದಾರರಾದ ಅನುರಾಧ ಅವರು ಪೊಲೀಸರನ್ನು ಸಂಪರ್ಕಿಸಿ ಎಫ್‌ಐಆರ್‌ನಿಂದ ಇಬ್ಬರ ಹೆಸರನ್ನು ತೆಗೆದುಹಾಕುವಂತೆ ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ. ಆದರೆ ಈಗಾಗಲೇ ನ್ಯಾಯಾಲಯಕ್ಕೆ ಎಫ್‌ಐಆರ್ ಸಲ್ಲಿಸಿರುವುದರಿಂದ ಅದು ಸಾಧ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ರಾಜಿ ಮಾಡಿಕೊಳ್ಳುವಂತೆ ರಾಜಕಾರಣಿಗಳು, ಸಿನಿಮಾ ತಾರೆಯರು ಸೇರಿದಂತೆ ಕೆಲವರು ಒತ್ತಡ ಹೇರಿದ್ದರು ಎನ್ನಲಾಗಿದೆ. ನಿರ್ಮಾಪಕಿ ಸೌಂದರ್ಯ ಜಗದೀಶ್ ಅವರ ಕುಟುಂಬದ ಸದಸ್ಯರ ಪತ್ತೆಗೆ ಉತ್ತರ ವಿಭಾಗದ ಪೊಲೀಸರು ಎಂಟು ತಂಡಗಳನ್ನು ರಚಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT