ಬೆಂಗಳೂರು ವಿಶ್ವವಿದ್ಯಾನಿಲಯ 
ರಾಜ್ಯ

ಕನ್ನಡೇತರರು ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಐದು ಭಾಷೆ ಕಲಿಯಬಹುದು

ಭಾಷೆಗಳ ಆಯ್ಕೆಯೊಂದಿಗೆ ಯಾರೇ ಆಗಲಿ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಐದು ಭಾಷೆಗಳನ್ನು ಕಲಿಯಬಹುದು ಎಂದು ಕುಲಪತಿ ಕೆ.ಆರ್. ವೇಣುಗೋಪಾಲ್ ಹೇಳಿದ್ದಾರೆ. 

ಬೆಂಗಳೂರು: ಭಾಷೆಗಳ ಆಯ್ಕೆಯೊಂದಿಗೆ ಯಾರೇ ಆಗಲಿ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಐದು ಭಾಷೆಗಳನ್ನು ಕಲಿಯಬಹುದು ಎಂದು ಕುಲಪತಿ ಕೆ.ಆರ್. ವೇಣುಗೋಪಾಲ್ ಹೇಳಿದ್ದಾರೆ. 

ಬೆಂಗಳೂರು ನಗರ ವಿಶ್ವವಿದ್ಯಾನಿಲಯದಲ್ಲಿ ಶುಕ್ರವಾರ ಆಯೋಜಿಸಿದ್ದ ಎನ್ ಇ ಪಿ 2020 ವಿಷನ್ ಟು ಆಕ್ಸ್ ಕುರಿತ ಕಾರ್ಯಕ್ರಮದಲ್ಲಿ ಮಾತನಾಡಿದ ಕುಲಪತಿ,  ಒಂದನೇ ತರಗತಿಯಿಂದ 12ನೇ ತರಗತಿಯವರೆಗೂ ಕನ್ನಡ ಮಾಧ್ಯಮದಲ್ಲಿ ಓದಿದವರಿಗೆ ನಾಲ್ಕು ಸೆಮಿಸ್ಟರ್ ಗಳಲ್ಲಿ ಕಡ್ಡಾಯವಾಗಿ ಕನ್ನಡ ಇರುತ್ತದೆ. ಅಲ್ಲದೇ, ಎರಡು ಸೆಮಿಸ್ಟರ್ ಅಥವಾ ನಾಲ್ಕು ಸೆಮಿಸ್ಟರ್ ಗಳಲ್ಲಿ ಬೇರೆ ಭಾಷೆಯನ್ನು ಕೂಡಾ ಅವರ ಆಯ್ಕೆ ಮಾಡಿಕೊಳ್ಳಬಹುದು ಎಂದರು.

ಕೇವಲ ಎರಡು ಸೆಮಿಸ್ಟರ್ ಗಳಿಗಾಗಿ ದ್ವಿತೀಯ ಭಾಷೆಯಾಗಿ ಅಧ್ಯಯನ ಮಾಡಲು ಆಯ್ಕೆ ಮಾಡಿಕೊಳ್ಳಬಹುದು , ಮೂರು ಹಾಗೂ ನಾಲ್ಕನೇ ಸೆಮಿಸ್ಟರ್ ಗಾಗಿ ತೃತೀಯ ಭಾಷೆಯಾಗಿ ಅವರು ಅಧ್ಯಯನ ಮಾಡಬಹುದು ಎಂದರು.

ಈ ಸಂದರ್ಭದಲ್ಲಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ವೇಣುಗೋಪಾಲ್, ಕನ್ನಡಿಗರೇತರರು, ಮೊದಲ ಅಥವಾ ಎರಡನೇ ಸೆಮಿಸ್ಟರ್ ನಲ್ಲಿ ಕನ್ನಡವನ್ನು ಆಯ್ಕೆ ಮಾಡಿಕೊಳ್ಳಬಹುದು. ಪರ್ಯಾಯ ಸೆಮಿಸ್ಟರ್ ನಲ್ಲಿ ಅರಬಿಕ್ ಅಥವಾ ಹಿಂದಿಯಂತಹ ಇತರ ಭಾಷೆ ಆಯ್ಕೆ ಮಾಡಿಕೊಳ್ಳಬಹುದು ಎಂದರು.

ದ್ವಿತೀಯ ವರ್ಷದಲ್ಲಿ  ಅವರು ಸಂಪೂರ್ಣವಾಗಿ ಬೇರೆ ಭಾಷೆ ಕಲಿಯುತ್ತಾರೆ. ಇದರಲ್ಲಿ ಮೂರು ಭಾಷೆಗಳ ಎಣಿಕೆಯಾಗುತ್ತದೆ. ಈ ಮಧ್ಯೆ ಮೊದಲ ಎರಡು ಸೆಮಿಸ್ಟರ್ ಗಳಿಗಾಗಿ ಎರಡು ಭಾಷೆಗಳನ್ನು ಮತ್ತು ಮೂರು ಮತ್ತು ನಾಲ್ಕನೆ ಸೆಮಿಸ್ಟರ್ ಗಾಗಿ ಐದನೇ ಭಾಷೆ ಆಯ್ಕೆ ಮಾಡಿಕೊಳ್ಳಬಹುದೆಂದರು.

ಈ ಮಧ್ಯೆ ಅಕ್ಟೋಬರ್ 21 ರಿಂದ ತರಗತಿಗಳು ಆರಂಭವಾಗಿದ್ದರೂ,  ಎನ್ ಇಪಿ ಅನುಷ್ಠಾನಕ್ಕೆ ಖಾಸಗಿ ಕಾಲೇಜ್ ಗಳು ಈಗಲೂ ಆತಂಕವಿದೆ. ಅಕ್ಟೋಬರ್ 16 ರಂದು ಸಿಲಬಸ್ ಬಂದಿದ್ದರೂ, ಉತ್ತರ ಸಿಗದ ಅನೇಕ ಪ್ರಶ್ನೆಗಳಿರುವುದಾಗಿ ಖಾಸಗಿ ಕಾಲೇಜು ಉಪನ್ಯಾಸಕರ ಸಂಘ ವಿಶ್ವವಿದ್ಯಾನಿಲಯಕ್ಕೆ ಹೇಳಿದೆ.  
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT