ಸಾಂದರ್ಭಿಕ ಚಿತ್ರ 
ರಾಜ್ಯ

ಕೆರೆಗಳ ಸಂರಕ್ಷಣೆಗೆ ಕೆಲಸಕ್ಕಾಗಿ ಬಿಬಿಎಂಪಿಗೆ ಪ್ರಶಸ್ತಿ

ನಗರದಲ್ಲಿನ 18 ಕೆರೆಗಳ ಪುನಶ್ಚೇತನ ಮತ್ತು ಏಳಕ್ಕೂ ಹೆಚ್ಚು ಕೆರೆಗಳ ಸಂರಕ್ಷಣೆ ಕೆಲಸಕ್ಕಾಗಿ ಬಿಬಿಎಂಪಿಗೆ ಅರ್ಥ್ ಡೆ ನೆಟ್ ವರ್ಕ್ ಸ್ಟಾರ್ ಮುನ್ಸಿಪಾಲ್ ಲೀಡರ್ ಶಿಪ್ ಪ್ರಶಸ್ತಿಯನ್ನು ಶುಕ್ರವಾರ  ಪಡೆದಿದೆ.

ಬೆಂಗಳೂರು: ನಗರದಲ್ಲಿನ 18 ಕೆರೆಗಳ ಪುನಶ್ಚೇತನ ಮತ್ತು ಏಳಕ್ಕೂ ಹೆಚ್ಚು ಕೆರೆಗಳ ಸಂರಕ್ಷಣೆ ಕೆಲಸಕ್ಕಾಗಿ ಬಿಬಿಎಂಪಿಗೆ ಅರ್ಥ್ ಡೆ ನೆಟ್ ವರ್ಕ್ ಸ್ಟಾರ್ ಮುನ್ಸಿಪಾಲ್ ಲೀಡರ್ ಶಿಪ್ ಪ್ರಶಸ್ತಿಯನ್ನು ಶುಕ್ರವಾರ  ಪಡೆದಿದೆ.

ಈ ಪ್ರಶಸ್ತಿಗಾಗಿ ಪುಟ್ಟೇನಹಳ್ಳಿ ನೆರೆಹೊರೆಯ ಕೆರೆ ಸುಧಾರಣಾ ಟ್ರಸ್ಟ್  (ಪಿಎನ್ ಎಲ್ ಐಟಿ) ಬಿಬಿಎಂಪಿಯನ್ನು ನಾಮನಿರ್ದೇಶನ ಮಾಡಿತ್ತು. ಪುಟ್ಟೇನಹಳ್ಳಿ ಕೆರೆ ಪುನಶ್ಚೇತನಕ್ಕಾಗಿ 2009ರಿಂದಲೂ ಈ ಟ್ರಸ್ಟ್ ಬಿಬಿಎಂಪಿಯೊಂದಿಗೆ ಕೆಲಸ ಮಾಡುತ್ತಿದೆ.

ಪರಿಸರದ ಮೇಲೆ ಸಕಾರಾತ್ಮಕ ಪರಿಣಾಮ ಬೀರುವಂತಹ ಯೋಜನೆ ಹಾಗೂ ಕಾರ್ಯ ಕೈಗೊಂಡ ಸ್ಥಳೀಯ ಸಂಸ್ಥೆಗಳಿಗೆ  ಅರ್ಥ್ ಡೇ 50ನೇ ವರ್ಷಚಾರಣೆ ಪ್ರಯುಕ್ತ  ಅರ್ಥ್ ಡೇ ನೆಟ್ ವರ್ಕ್ ಇಂಡಿಯಾದಿಂದ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.

ಇಂಡಿಯಾ ಅರ್ಥ್ ಡೇ ಅರ್ಗನೈಷನ್ ಹಿರಿಯ ಮ್ಯಾನೇಜರ್,  ನೀಲಾ ಮಜುಂದಾರ್ ಮತ್ತು ಪಿಎನ್ ಎಲ್ ಐಟಿ ಮುಖ್ಯಸ್ಥೆ ಉಷಾ ರಾಜಗೋಪಾಲನ್ ಶುಕ್ರವಾರ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರಿಗೆ  ಈ ಪ್ರಶಸ್ತಿ ಪ್ರದಾನ ಮಾಡಿದರು.

ಚಿಕ್ಕಬಸ್ತಿ, ಗುಬ್ಬಲಾಲ, ಯಲ್ಲನಹಳ್ಳಿ, ತಲಘಟ್ಟಪುರ,  ಬೈರಸಂದ್ರ, ಬಸವನಪುರ, ಸಿದ್ದಾಪುರ, ನಗರೇಶ್ವರ ನಾಗೇನಹಳ್ಳಿ, ಮಹಾದೇವಪುರ-2, ಸಾರಕ್ಕಿ, ಬೇಗೂರು, ಹೂರಮಾವು, ಭಟ್ಟರ ಹಳ್ಳಿ, ಕೊತ್ತನೂರು, ನಲ್ಲೂರಳ್ಳಿ, ಗುಂಜೂರು ಪಾಳ್ಯ, ದೇವರಕೆರೆ ಮತ್ತಿತರ ಕೆರೆಗಳ ಅಭಿವೃದ್ಧಿ ಕಾರ್ಯವನ್ನು ಬಿಬಿಎಂಪಿ ಈ ವರ್ಷ ಮಾಡಿದೆ. 

 ಸಾರ್ವಜನಿಕರ ಸಹಭಾಗಿತ್ವ ಹಾಗೂ ಹೆಚ್ಚಿನ ಜನರು ತೊಡಗಿಸಿಕೊಂಡರೆ ಹೆಚ್ಚಿನ ಕೆರೆಗಳ ಸಂರಕ್ಷಣೆ ಕಾರ್ಯ ಕೈಗೊಳ್ಳಲು ನೆರವಾಗಲಿದೆ ಎಂದು ಗೌರವ್ ಗುಪ್ತಾ ಹೇಳಿದರು. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ: ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಜಾತಿ ನಿಂದನೆ ತಂದೆ-ಮಗನ ವಿರುದ್ಧ ಪ್ರಕರಣ ದಾಖಲು

SCROLL FOR NEXT