ಬಸವರಾಜ ಬೊಮ್ಮಾಯಿ 
ರಾಜ್ಯ

ರಾಜ್ಯಗಳ ಆಡಳಿತ ಕಾರ್ಯಕ್ಷಮತೆ ಶ್ರೇಯಾಂಕ: 7ನೇ ಸ್ಥಾನಕ್ಕೆ ಕುಸಿದ ಕರ್ನಾಟಕ

ರಾಜ್ಯಗಳ ಆಡಳಿತದ ಕಾರ್ಯಕ್ಷಮತೆಯ 6ನೇ ವರ್ಷದ ಶ್ರೇಯಾಂಕವು ಬಿಡುಗಡೆಗೊಂಡಿದ್ದು, ದಕ್ಷಿಣದ ರಾಜ್ಯಗಳು ಪ್ರಾಬಲ್ಯ ಸಾಧಿಸಿವೆ.

ಬೆಂಗಳೂರು:  ರಾಜ್ಯಗಳ ಆಡಳಿತದ ಕಾರ್ಯಕ್ಷಮತೆಯ 6ನೇ ವರ್ಷದ ಶ್ರೇಯಾಂಕವು ಬಿಡುಗಡೆಗೊಂಡಿದ್ದು, ದಕ್ಷಿಣದ ರಾಜ್ಯಗಳು ಪ್ರಾಬಲ್ಯ ಸಾಧಿಸಿವೆ. ದೊಡ್ಡ ರಾಜ್ಯಗಳ ಪಟ್ಟಿಯಲ್ಲಿ ಕೇರಳ ಮೊದಲ ಸ್ಥಾನದಲ್ಲಿದ್ದು, ತಮಿಳುನಾಡು ಎರಡನೇ ಸ್ಥಾನ ಹಾಗೂ ತೆಲಂಗಾಣ ಮೂರನೇ ಸ್ಥಾನ ಪಡೆದಿದೆ.

ಈ ಮೂಲಕ ದಕ್ಷಿಣದ ರಾಜ್ಯಗಳು ಮೊದಲ ಮೂರು ಸ್ಥಾನವನ್ನು ಅಲಂಕರಿಸಿದಂತಾಗಿದೆ. ಛತ್ತೀಸ್​ಗಡ, ಗುಜರಾತ್ ಹಾಗೂ ಪಂಜಾಬ್ ಕ್ರಮವಾಗಿ ನಂತರದ ಸ್ಥಾನಗಳಲ್ಲಿವೆ. ಕರ್ನಾಟಕ ಸೂಚ್ಯಂಕದೊಂದಿಗೆ 7ನೇ ಸ್ಥಾನವನ್ನು ಪಡೆದಿದೆ. ಕಳೆದ ವರ್ಷ ಕರ್ನಾಟಕ ನಾಲ್ಕನೇ ಸ್ಥಾನದಲ್ಲಿತ್ತು. ಈ ಬಾರಿ ಮೂರು ಸ್ಥಾನ ಕುಸಿತಕಂಡಿದೆ.

ಅದಾಗ್ಯೂ ಸೂಚ್ಯಂಕವು ಧನಾತ್ಮಕವಾಗಿಯೇ ಇರುವುದು ಸಮಾಧಾನ ಮೂಡಿಸಿದೆ. ಕರ್ನಾಟಕದ ನಂತರದ ನಂತರದ ಸ್ಥಾನಗಳಲ್ಲಿ ಕ್ರಮವಾಗಿ ಆಂಧ್ರಪ್ರದೇಶ, ಜಾರ್ಖಂಡ್, , ಮಧ್ಯಪ್ರದೇಶ, ರಾಜಸ್ಥಾನ ಮತ್ತು ಮಹಾರಾಷ್ಟ್ರ ಇದೆ. ಬಿಹಾರವು ಹಾಗೂ ಉತ್ತರ ಪ್ರದೇಶ  ಈ ಪಟ್ಟಿಯಲ್ಲಿ ಕೊನೆಯ ಎರಡು ಸ್ಥಾನದಲ್ಲಿವೆ.

ಸಣ್ಣ ರಾಜ್ಯಗಳ ಪಟ್ಟಿಯಲ್ಲಿ ಸಿಕ್ಕಿಂ ಮೊದಲ ಸ್ಥಾನ, ಗೋವಾ ಮಿಜೋರಾಂ ಕ್ರಮವಾಗಿ ಎರಡು ಹಾಗೂ ಮೂರನೇ ಸ್ಥಾನ ಪಡೆದಿದೆ. ಸಣ್ಣ ರಾಜ್ಯಗಳಲ್ಲಿ ಉತ್ತರಾಖಂಡ್ ಹಾಗೂ ಮಣಿಪುರ ಕೊನೆಯ ಸ್ಥಾನಗಳಲ್ಲಿವೆ. ಕೇಂದ್ರಾಡಳಿತ ಪ್ರದೇಶಗಳ ಪಟ್ಟಿಯಲ್ಲಿ ಪುದುಚೇರಿ ಮೊದಲ ಸ್ಥಾನ ಪಡೆದಿದೆ. ಜಮ್ಮು ಮತ್ತು ಕಾಶ್ಮೀರ ಎರಡನೇ ಸ್ಥಾನದಲ್ಲಿದೆ. ದಾದ್ರಾ ಮತ್ತು ನಗರ್ ಹಾವೇಲಿ ಹಾಗೂ ದಾಮನ್ ಮತ್ತು ದಿಯು ಐದು ಹಾಗೂ ಅಂಡಮಾನ್ ಮತ್ತು ನಿಕೋಬಾರ್ ಆರನೇ ಸ್ಥಾನ ಪಡೆದಿವೆ.

ಸಾರ್ವಜನಿಕ ವ್ಯವಹಾರಗಳ ಕೇಂದ್ರ (ಪಬ್ಲಿಕ್ ಅಫೇರ್ಸ್ ಸೆಂಟರ್- PAC) ಭಾರತದ ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಕೇಂದ್ರೀಕರಿಸುವ ಸಂಶೋಧನೆಯಲ್ಲಿ ತೊಡಗಿದೆ. ಇದನ್ನು ಭಾರತದಲ್ಲಿ ಆಡಳಿತದ ಗುಣಮಟ್ಟವನ್ನು ಸುಧಾರಿಸುವ ಆದೇಶದೊಂದಿಗೆ 1994ರಲ್ಲಿ ಸ್ಥಾಪಿಸಲಾಗಿದೆ. ಸಾರ್ವಜನಿಕ ವ್ಯವಹಾರಗಳ ಸೂಚ್ಯಂಕವು ಭಾರತದ ರಾಜ್ಯಗಳಲ್ಲಿ ಆಡಳಿತದ ಸಮರ್ಪಕತೆ ಮತ್ತು ಗುಣಮಟ್ಟದ ವಾರ್ಷಿಕ ಮೌಲ್ಯಮಾಪನವಾಗಿದೆ ಎಂದು ಪಿಎಸಿ ನಿರ್ದೇಶಕ ಗುರುಚರಣ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT